AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷಗಳ ಹಿಂದೆ ಗಂಡನ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಪತ್ತೆ

ಮೂರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಜೀವಂತವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸುಮಾರು ಮೂರು ವರ್ಷಗಳ ಹಿಂದೆ ಮಹಿಳೆ ನಾಪತ್ತೆಯಾಗಿದ್ದಾಗ ಆಕೆಯ ಪತಿ ಹಾಗೂ ಅತ್ತೆಯ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

3 ವರ್ಷಗಳ ಹಿಂದೆ ಗಂಡನ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಪತ್ತೆ
ಪ್ರೇಮಿಗಳು(ಸಾಂದರ್ಭಿಕ ಚಿತ್ರ)
ನಯನಾ ರಾಜೀವ್
|

Updated on: Oct 08, 2024 | 10:07 AM

Share

ಮೂರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಜೀವಂತವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸುಮಾರು ಮೂರು ವರ್ಷಗಳ ಹಿಂದೆ ಮಹಿಳೆ ನಾಪತ್ತೆಯಾಗಿದ್ದಾಗ ಆಕೆಯ ಪತಿ ಹಾಗೂ ಅತ್ತೆಯ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಆಕೆಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ಅಂದಾಜಿಸಲಾಗಿತ್ತು, 3 ವರ್ಷಗಳಿಂದ ಕಾಣಿಸಿಕೊಳ್ಳದ ಆಕೆ ಲಕ್ನೋದಲ್ಲಿ ಬಾಯ್​ಫ್ರೆಂಡ್​ ಜತೆ ಇರುವುದು ತಿಳಿದುಬಂದಿದೆ. ಕವಿತಾ ಎಂಬುವವರು 2017ರ ನವೆಂಬರ್ 17 ರಂದು ದಾದುಹಾ ಬಜಾರ್​ನ ವಿನಯ್​ ಎಂಬುವವರನ್ನು ವಿವಾಹವಾಗಿದ್ದರು, ಮೇ 5, 2021ರಿಂದ ಅತ್ತೆ ಮನೆಯಿಂದ ನಾಪತ್ತೆಯಾಗಿದ್ದಳು.

ಇದೇ ವೇಳೆ ಕವಿತಾ ಮನೆಯವರು ಆಕೆಯ ಅತ್ತೆ ಹಾಗೂ ಪತಿಯ ವಿರುದ್ಧ ದೂರು ದಾಖಲಿಸಿದ್ದರು. ಎಷ್ಟೇ ಹುಡುಕಿದರೂ ಅವರು ಎಲ್ಲಿದ್ದಾರೆ ಎಂಬುದು ತಿಳಿಯಲಿಲ್ಲ. ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಮತ್ತು ಕೊತ್ವಾಲಿ ಪೊಲೀಸರು ಕವಿತಾ ಅವರನ್ನು ಲಕ್ನೋದ ದಲಿಗಂಜ್ ಪ್ರದೇಶದಲ್ಲಿ ಆಕೆಯ ಗೆಳೆಯ ಸತ್ಯ ನಾರಾಯಣ ಗುಪ್ತಾ ಅವರ ನಿವಾಸದಲ್ಲಿ ಪತ್ತೆ ಮಾಡಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Shocking News: 22 ವರ್ಷದ ಸೇಡು; ಸಾಲ ಮಾಡಿ ಟ್ರಕ್ ಖರೀದಿಸಿ ತಂದೆಯ ಹಂತಕರನ್ನು ಕೊಂದ ಮಗ

ಸತ್ಯ ನಾರಾಯಣ್ ಅವರು ಗೊಂಡಾದ ದುರ್ಜನ್‌ಪುರ ಮಾರುಕಟ್ಟೆಯಲ್ಲಿ ಅಂಗಡಿಯನ್ನು ಹೊಂದಿದ್ದರು ಮತ್ತು ಕವಿತಾ ಅವರನ್ನು ಆಗಾಗ ಭೇಟಿ ಮಾಡುತ್ತಿದ್ದರು. ಅವರ ನಡುವೆ ಪ್ರೀತಿ ಹುಟ್ಟಿತ್ತು.

ಹಾಗಾಗಿ ಅವರು ಅಲ್ಲಿಂದ ಓಡಿಹೋಗುವ ಯೋಜನೆ ರೂಪಿಸಿದ್ದರು. ಲಕ್ನೋಗೆ ಹೋಗುವ ಮುನ್ನ ಒಂದು ವರ್ಷ ಅಯೋಧ್ಯೆಯಲ್ಲಿ ಸತ್ಯನಾರಾಯಣ ಅವರ ಜತೆ ಆಕೆ ವಾಸವಿದ್ದಳು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಕವಿತಾ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ!
ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ!