AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷಗಳ ಹಿಂದೆ ಗಂಡನ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಪತ್ತೆ

ಮೂರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಜೀವಂತವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸುಮಾರು ಮೂರು ವರ್ಷಗಳ ಹಿಂದೆ ಮಹಿಳೆ ನಾಪತ್ತೆಯಾಗಿದ್ದಾಗ ಆಕೆಯ ಪತಿ ಹಾಗೂ ಅತ್ತೆಯ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

3 ವರ್ಷಗಳ ಹಿಂದೆ ಗಂಡನ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಪತ್ತೆ
ಪ್ರೇಮಿಗಳು(ಸಾಂದರ್ಭಿಕ ಚಿತ್ರ)
ನಯನಾ ರಾಜೀವ್
|

Updated on: Oct 08, 2024 | 10:07 AM

Share

ಮೂರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಜೀವಂತವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸುಮಾರು ಮೂರು ವರ್ಷಗಳ ಹಿಂದೆ ಮಹಿಳೆ ನಾಪತ್ತೆಯಾಗಿದ್ದಾಗ ಆಕೆಯ ಪತಿ ಹಾಗೂ ಅತ್ತೆಯ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಆಕೆಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ಅಂದಾಜಿಸಲಾಗಿತ್ತು, 3 ವರ್ಷಗಳಿಂದ ಕಾಣಿಸಿಕೊಳ್ಳದ ಆಕೆ ಲಕ್ನೋದಲ್ಲಿ ಬಾಯ್​ಫ್ರೆಂಡ್​ ಜತೆ ಇರುವುದು ತಿಳಿದುಬಂದಿದೆ. ಕವಿತಾ ಎಂಬುವವರು 2017ರ ನವೆಂಬರ್ 17 ರಂದು ದಾದುಹಾ ಬಜಾರ್​ನ ವಿನಯ್​ ಎಂಬುವವರನ್ನು ವಿವಾಹವಾಗಿದ್ದರು, ಮೇ 5, 2021ರಿಂದ ಅತ್ತೆ ಮನೆಯಿಂದ ನಾಪತ್ತೆಯಾಗಿದ್ದಳು.

ಇದೇ ವೇಳೆ ಕವಿತಾ ಮನೆಯವರು ಆಕೆಯ ಅತ್ತೆ ಹಾಗೂ ಪತಿಯ ವಿರುದ್ಧ ದೂರು ದಾಖಲಿಸಿದ್ದರು. ಎಷ್ಟೇ ಹುಡುಕಿದರೂ ಅವರು ಎಲ್ಲಿದ್ದಾರೆ ಎಂಬುದು ತಿಳಿಯಲಿಲ್ಲ. ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಮತ್ತು ಕೊತ್ವಾಲಿ ಪೊಲೀಸರು ಕವಿತಾ ಅವರನ್ನು ಲಕ್ನೋದ ದಲಿಗಂಜ್ ಪ್ರದೇಶದಲ್ಲಿ ಆಕೆಯ ಗೆಳೆಯ ಸತ್ಯ ನಾರಾಯಣ ಗುಪ್ತಾ ಅವರ ನಿವಾಸದಲ್ಲಿ ಪತ್ತೆ ಮಾಡಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Shocking News: 22 ವರ್ಷದ ಸೇಡು; ಸಾಲ ಮಾಡಿ ಟ್ರಕ್ ಖರೀದಿಸಿ ತಂದೆಯ ಹಂತಕರನ್ನು ಕೊಂದ ಮಗ

ಸತ್ಯ ನಾರಾಯಣ್ ಅವರು ಗೊಂಡಾದ ದುರ್ಜನ್‌ಪುರ ಮಾರುಕಟ್ಟೆಯಲ್ಲಿ ಅಂಗಡಿಯನ್ನು ಹೊಂದಿದ್ದರು ಮತ್ತು ಕವಿತಾ ಅವರನ್ನು ಆಗಾಗ ಭೇಟಿ ಮಾಡುತ್ತಿದ್ದರು. ಅವರ ನಡುವೆ ಪ್ರೀತಿ ಹುಟ್ಟಿತ್ತು.

ಹಾಗಾಗಿ ಅವರು ಅಲ್ಲಿಂದ ಓಡಿಹೋಗುವ ಯೋಜನೆ ರೂಪಿಸಿದ್ದರು. ಲಕ್ನೋಗೆ ಹೋಗುವ ಮುನ್ನ ಒಂದು ವರ್ಷ ಅಯೋಧ್ಯೆಯಲ್ಲಿ ಸತ್ಯನಾರಾಯಣ ಅವರ ಜತೆ ಆಕೆ ವಾಸವಿದ್ದಳು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಕವಿತಾ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್