AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳದ ವೇಳೆ ಬಾಯ್‌ಫ್ರೆಂಡ್ ಮೇಲೆ ಹಲ್ಲೆ ನಡೆಸಿ, ಆತನ ಗುಪ್ತಾಂಗವನ್ನು ಗಾಯಗೊಳಿಸಿದ ಮಹಿಳೆ

ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ಜಗಳದ ಬಳಿಕ ತನ್ನ ಬಾಯ್​ಫ್ರೆಂಡ್ ಮೇಲೆ ದಾಳಿ ನಡೆಸಿ, ಆತನ ಖಾಸಗಿ ಭಾಗಗಳಿಗೆ ಗಾಯಗೊಳಿಸಿದ್ದಾಳೆ. ಈ ಆರೋಪದ ಮೇಲೆ ಆ ಮಹಿಳೆಯನ್ನು ಬಂಧಿಸಲಾಗಿದೆ. ತನ್ನ ಮನೆಯಲ್ಲಿಯೇ ಬಾಯ್‌ಫ್ರೆಂಡ್ ಮೇಲೆ ಹಲ್ಲೆ ನಡೆಸಿ, ಬಾಯ್‌ಫ್ರೆಂಡ್ ಜೊತೆ ತೀವ್ರ ವಾಗ್ವಾದದ ನಂತರ ಆತನ ಖಾಸಗಿ ಭಾಗಗಳಿಗೆ ಆಕೆ ಗಾಯಗೊಳಿಸಿದ್ದಾಳೆ. ರಾಜಸ್ಥಾನ ಮೂಲದ ಯುವಕ ಈಗ ಚಿಕಿತ್ಸೆ ಪಡೆಯುತ್ತಿದ್ದಾನೆ.

ಜಗಳದ ವೇಳೆ ಬಾಯ್‌ಫ್ರೆಂಡ್ ಮೇಲೆ ಹಲ್ಲೆ ನಡೆಸಿ, ಆತನ ಗುಪ್ತಾಂಗವನ್ನು ಗಾಯಗೊಳಿಸಿದ ಮಹಿಳೆ
Argument
ಸುಷ್ಮಾ ಚಕ್ರೆ
|

Updated on: Aug 28, 2025 | 10:40 PM

Share

ಹರ್ದೋಯ್, ಆಗಸ್ಟ್ 28: ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಆತಂಕಕಾರಿ ಘಟನೆ (Shocking News) ನಡೆದಿದೆ. ಮಹಿಳೆಯೊಬ್ಬರು ಬಾಯ್‌ಫ್ರೆಂಡ್ ಜೊತೆ ನಡೆದ ತೀವ್ರ ವಾಗ್ವಾದದ ನಂತರ ಆತನ ಗುಪ್ತಾಂಗಗಳನ್ನು ಗಾಯಗೊಳಿಸಿದ್ದಾರೆ. ಈ ಘಟನೆ ಮಲ್ಲವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಯ ನಂತರ ರಾಜಸ್ಥಾನ ನಿವಾಸಿಯಾದ ಆ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಆತನ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ದಾಳಿ ನಡೆಸಿದ ಮಹಿಳೆಯನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆ ವ್ಯಕ್ತಿ ಮತ್ತು ಮಹಿಳೆ ಮೊದಲು ಒಂದೇ ಕಂಪನಿಯಲ್ಲಿ ಕೆಲಸ ಮಾಡುವಾಗ ಭೇಟಿಯಾಗಿದ್ದರು. ಅದಾದ ನಂತರ ಪ್ರೀತಿಯಾಗಿತ್ತು. ಅವರು ಸುಮಾರು 4 ವರ್ಷಗಳಿಂದ ಸಂಬಂಧದಲ್ಲಿದ್ದರು. ಬುಧವಾರ ರಾತ್ರಿ ಆ ಮಹಿಳೆ ತನ್ನ ಪ್ರೇಮಿಯನ್ನು ತನ್ನ ಮನೆಗೆ ಆಹ್ವಾನಿಸಿದಳು. ಆದರೆ, ಮಾತುಕತೆಯ ವೇಳೆ ಸಣ್ಣ ವಿಚಾರಕ್ಕೆ ಜಗಳವಾಗಿದ್ದು, ಕೋಪದಿಂದ ಆ ಮಹಿಳೆ ಅವನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಅವನು ಗಂಭೀರವಾಗಿ ಗಾಯಗೊಂಡಿದ್ದಾನೆ.

ಇದನ್ನೂ ಓದಿ: ಪ್ರಿಯಕರನನ್ನು ಮನೆಗೆ ಕರೆಸಿ ಗುಪ್ತಾಂಗ ಕತ್ತರಿಸಿದ ಪ್ರೇಯಸಿ

ಇದೇ ರೀತಿಯ ಘಟನೆಯಲ್ಲಿ, ಆಗಸ್ಟ್ 19ರಂದು ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಅಡುಗೆ ಮಾಡುವ ವೇಳೆ ಜಗಳ ನಡೆದು, ಮಹಿಳೆಯೊಬ್ಬರು ತನ್ನ ಪತಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದರು. ಈ ಘಟನೆ ರಾಸ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಹಾವೀರ್ ಅಖಾರ ಪ್ರದೇಶದಲ್ಲಿ ನಡೆದಿತ್ತು. ಸಂಜಯ್ ಕುಮಾರ್ (28) ತಮ್ಮ ಪತ್ನಿ ಲಾಲ್ಬುಚಿ ದೇವಿ ಅವರೊಂದಿಗೆ ಸಣ್ಣಪುಟ್ಟ ಮನೆಯ ವಿಷಯಕ್ಕೆ ಸಂಬಂಧಿಸಿದಂತೆ ತೀವ್ರ ವಾಗ್ವಾದ ನಡೆಸಿದಾಗ ಈ ಘಟನೆ ಸಂಭವಿಸಿತ್ತು. ಮನೆಯಲ್ಲಿ ಹಿಟ್ಟು ಇರಲಿಲ್ಲ, ಆದ್ದರಿಂದ ಮಹಿಳೆ ತನ್ನ ಪತಿ ಮತ್ತು ಮೂವರು ಮಕ್ಕಳಿಗೆ ‘ಖಿಚಡಿ’ ಮಾಡಿದ್ದರು. ಆದರೆ, ಮನೆಗೆ ಬಂದ ನಂತರ ಹೆಂಡತಿ ಬಳಿ ಸಂಜಯ್ ‘ರೊಟ್ಟಿ’ ಮಾಡುವಂತೆ ಒತ್ತಾಯಿಸಿದ್ದ. ಆಕೆ ಹಿಟ್ಟು ಖಾಲಿಯಾಗಿದೆ ಎಂದಾಗ ಜಗಳವಾಡಿದ್ದ. ಇದೇ ಕೋಪದಲ್ಲಿ ಆಕೆ ಚಾಕುವಿನಿಂದ ಆತನನ್ನು ಇರಿದಿದ್ದಳು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ