AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಟ್ಟಿನ ಕಾರಣದಿಂದ ಚೈತ್ರ ನವರಾತ್ರಿ ಪೂಜೆ ಮಾಡಲಾಗಲಿಲ್ಲ ಎಂದು ಮಹಿಳೆ ಆತ್ಮಹತ್ಯೆ

ಮುಟ್ಟಿನ ಕಾರಣದಿಂದ ಪೂಜೆ ಮಾಡಲಾಗಲಿಲ್ಲ ಎಂದು ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಹಾಗೆಯೇ ಚೈತ್ರ ನವರಾತ್ರಿಯಂದು ಮಹಿಳೆ ಮುಟ್ಟಾಗಿದ್ದ ಕಾರಣ ಹಬ್ಬವನ್ನು ಆಚರಿಸಲು ಸಾಧ್ಯವಾಗಲಿಲ್ಲ, ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. 36 ವರ್ಷದ ಪ್ರಿಯಾಂಶ ಸೋನಿ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮುಟ್ಟಿನ ಕಾರಣದಿಂದ ಚೈತ್ರ ನವರಾತ್ರಿ ಪೂಜೆ ಮಾಡಲಾಗಲಿಲ್ಲ ಎಂದು ಮಹಿಳೆ ಆತ್ಮಹತ್ಯೆ
ಮುಟ್ಟುImage Credit source: Women's Health and menopause center
Follow us
ನಯನಾ ರಾಜೀವ್
|

Updated on: Apr 04, 2025 | 10:04 AM

ಝಾನ್ಸಿ, ಏಪ್ರಿಲ್ 04: ಸಾಮಾನ್ಯವಾಗಿ ಹಬ್ಬ(Festival)ಗಳನ್ನು ಸಂಭ್ರಮದಿಂದ ಆಚರಿಸಬೇಕು ಎಂಬ ಹಂಬಲ ಎಲ್ಲರಲ್ಲಿರುತ್ತದೆ. ಸಾಧ್ಯವಾಗಲಿಲ್ಲವೆಂದಾದರೆ ಬೇಸರವಾಗುವುದಂತೂ ನಿಜ, ಆದರೆ ಇದೇ ಕಾರಣಕ್ಕೆ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಹೇಗೆ ಕರ್ನಾಟಕದಲ್ಲಿ ಯುಗಾದಿಯನ್ನು ಆಚರಣೆ ಮಾಡುತ್ತೇವೋ ಹಾಗೆಯೇ ಉತ್ತರ ಭಾರತದಲ್ಲಿ ಚೈತ್ರ ನವರಾತ್ರಿ ಆಚರಣೆ ಮಾಡಲಾಗುತ್ತದೆ, ಇದು ಹೊಸ ವರ್ಷದ ಆರಂಭವನ್ನು ಸಂಭ್ರಮಿಸುವ ಕ್ಷಣವಾಗಿದೆ.

ಹಾಗೆಯೇ ಚೈತ್ರ ನವರಾತ್ರಿಯಂದು ಮಹಿಳೆ ಮುಟ್ಟಾಗಿದ್ದ ಕಾರಣ ಹಬ್ಬವನ್ನು ಆಚರಿಸಲು ಸಾಧ್ಯವಾಗಲಿಲ್ಲ, ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. 36 ವರ್ಷದ ಪ್ರಿಯಾಂಶ ಸೋನಿ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪ್ರಿಯಾಂಶ ಸೋನಿ ತನ್ನ ಪತಿ ಮುಖೇಶ್ ಸೋನಿ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳಾದ ಮೂರುವರೆ ವರ್ಷದ ಜಾನ್ವಿ ಮತ್ತು ಎರಡೂವರೆ ವರ್ಷದ ಮಾನ್ವಿ ಜೊತೆ ವಾಸವಾಗಿದ್ದರು. ಮುಖೇಶ್ ಹೇಳುವ ಪ್ರಕಾರ ಪ್ರಿಯಾಂಶ ಚೈತ್ರ ನವರಾತ್ರಿಗೆ ಉತ್ಸಾಹದಿಂದ ತಯಾರಿ ನಡೆಸಿದ್ದರು. ಮೊದಲ ದಿನವೇ ಆಕೆಗೆ ಮುಟ್ಟು ಕಾಣಿಸಿಕೊಂಡಿತ್ತು. ಉಪವಾಸ, ಪೂಜೆ ಎರಡನ್ನೂ ಮಾಡಲು ಸಾಧ್ಯವಾಗಲಿಲ್ಲ. ಆಕೆ ಭಾವನಾತ್ಮಕವಾಗಿ ಕುಗ್ಗಿ ಹೋದಳು. ಮುಖೇಶ್ ಅವಳನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ, ಅವಳು ಸಮಾಧಾನಗೊಳ್ಳಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ
Image
ಕಲಬುರಗಿ: ಪತ್ನಿ, ಮಕ್ಕಳನ್ನು ಕೊಂದು, ಸರ್ಕಾರಿ ನೌಕರ ಆತ್ಮಹತ್ಯೆ
Image
ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಪತಿ: 5 ವರ್ಷ ಬಳಿಕ ಲವರ್ ಜತೆ ಸಿಕ್ಕ ಪತ್ನಿ
Image
ಒಂದು ಕಿಸ್​ಗೆ 50 ಸಾವಿರ! ಲಕ್ಷ ರೂ. ಸುಲಿಗೆ: ಟೀಚರ್ ಹಾಗೂ ಗ್ಯಾಂಗ್ ಬಂಧನ
Image
ತಂದೆಯನ್ನ ಕೊಂದು ಅಪಘಾತ ಕಥೆ ಕಟ್ಟಿದ: ತನಿಖೆಯಲ್ಲಿ ಮಗನ ಅಸಲಿ ಸತ್ಯ ಬಟಾಬಯಲು

ಎಲ್ಲಾ ಪೂಜಾ ಸಾಮಗ್ರಿಗಳನ್ನು ತರಲು ಅವಳು ನನ್ನನ್ನು ಕೇಳಿದ್ದಳು, ಅದನ್ನು ನಾನು ಮಾಡಿದೆ. ಆದರೆ ಮೊದಲ ದಿನ, ಅವಳಿಗೆ ಮುಟ್ಟು ಪ್ರಾರಂಭವಾಯಿತು.ಇದು ನೈಸರ್ಗಿಕ ಪ್ರಕ್ರಿಯೆ ಎಂದು ನಾನು ಅವಳಿಗೆ ವಿವರಿಸಿದೆ, ಆದರೆ ಅವಳು ನನ್ನ ಮಾತನ್ನು ಕೇಳಲೇ ಇಲ್ಲ. ಮುಖೇಶ್​ ಅವರು ಅಂಗಡಿಯಲ್ಲಿದ್ದಾಗ ವಿಷ ಸೇವಿಸಿ ಪ್ರಿಯಾಂಶ ಆತ್ಮಹತ್ಯೆಗೆ ಯತ್ನಿಸಿದ್ದರು.

ಮತ್ತಷ್ಟು ಓದಿ: ಚಿಕ್ಕಮಗಳೂರಿನಲ್ಲಿ ಭಯಾನಕ ಘಟನೆ: ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕೂಡಲೇ ವಿಷಯ ಅರಿತು ಆಸ್ಪತ್ರೆಗೆ ಕರೆದೊಯ್ದರು. ಬಳಿಕ ಚಿಕಿತ್ಸೆ ಕೊಡಿಸಿ ಮನೆಗೆ ಕರೆದುಕೊಂಡು ಬರಲಾಗಿತ್ತು, ಆದರೆ ಮತ್ತೆ ಆರೋಗ್ಯ ಕ್ಷೀಣಿಸಲು ಶುರುವಾಗಿತ್ತು. ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೊತ್ವಾಲಿ ಪೊಲೀಸರು ಪ್ರಿಯಾಂಶ ಅವರ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ