AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳವಾಡಿ ಮನೆಬಿಟ್ಟು ಹೋದ ಪತಿ, ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾದ ಪತ್ನಿ

ಪತಿ, ಪತ್ನಿ ಜಗಳ ಉಂಡು ಮಲಗೋ ತನಕ ಎಂಬ ಗಾದೆ ಇದೆ. ಏನೇ ಸಮಸ್ಯೆಗಳಿದ್ದರೂ ಜತೆಗಿದ್ದೇ ಬಗೆಹರಿಸಿಕೊಳ್ಳಬೇಕು ಇಲ್ಲವಾದರೆ ಏನಾಗುತ್ತೆ ಎಂಬುದಕ್ಕೆ ಈ ಘಟನೆ ನಿದರ್ಶನ. ಪತಿಯೊಬ್ಬ ಪತ್ನಿ(Wife) ಜತೆ ಜಗಳವಾಡಿಕೊಂಡು ಆಕೆಗೆ ಥಳಿಸಿ ಮನೆಬಿಟ್ಟು ಹೋಗಿದ್ದ. ತುಂಬಾ ಸಮಯಗಳ ಕಾಲ ಕಾದಿದ್ದ ಆಕೆ ಆತನಿಗೆ ಮನೆಗೆ ವಾಪಸಾಗುವಂತೆ ಮನವಿ ಮಾಡಿದ್ದಾಳು. ಆದರೆ ಆತ ಸ್ಪಂದಿಸಿರಲಿಲ್ಲ. ಕೊನೆಗೆ ಆತನಿಗೆ ವಿಡಿಯೋ ಕಾಲ್ ಮಾಡಿ ಆಕೆ ನೇಣಿಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಜಗಳವಾಡಿ ಮನೆಬಿಟ್ಟು ಹೋದ ಪತಿ, ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾದ ಪತ್ನಿ
ಮೃತ ಮಹಿಳೆ Image Credit source: NDTV
ನಯನಾ ರಾಜೀವ್
|

Updated on: Nov 28, 2025 | 7:15 AM

Share

ಕಾನ್ಪುರ, ನವೆಂಬರ್ 28: ಪತಿ, ಪತ್ನಿ ಜಗಳ ಉಂಡು ಮಲಗೋ ತನಕ ಎಂಬ ಗಾದೆ ಇದೆ. ಏನೇ ಸಮಸ್ಯೆಗಳಿದ್ದರೂ ಜತೆಗಿದ್ದೇ ಬಗೆಹರಿಸಿಕೊಳ್ಳಬೇಕು ಇಲ್ಲವಾದರೆ ಏನಾಗುತ್ತೆ ಎಂಬುದಕ್ಕೆ ಈ ಘಟನೆ ನಿದರ್ಶನ. ಪತಿಯೊಬ್ಬ ಪತ್ನಿ(Wife) ಜತೆ ಜಗಳವಾಡಿಕೊಂಡು ಆಕೆಗೆ ಥಳಿಸಿ ಮನೆಬಿಟ್ಟು ಹೋಗಿದ್ದ. ತುಂಬಾ ಸಮಯಗಳ ಕಾಲ ಕಾದಿದ್ದ ಆಕೆ ಆತನಿಗೆ ಮನೆಗೆ ವಾಪಸಾಗುವಂತೆ ಮನವಿ ಮಾಡಿದ್ದಾಳು. ಆದರೆ ಆತ ಸ್ಪಂದಿಸಿರಲಿಲ್ಲ. ಕೊನೆಗೆ ಆತನಿಗೆ ವಿಡಿಯೋ ಕಾಲ್ ಮಾಡಿ ಆಕೆ ನೇಣಿಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಶುಭಂ ದಿವಾಕರ್ ಎಂಬಾತ ಮದ್ಯವ್ಯಸನಿಯಾಗಿದ್ದ, ಬುಧವಾರ ಸಂಜೆ ಕೆಲಸ ಮುಗಿಸಿ ರಾವತ್​ಪುರದಲ್ಲಿರುವ ಮನೆಗೆ ಬಂದು ಪತ್ನಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಆಕೆ ನಿರಾಕರಿಸಿದಾಗ ಕೋಪಗೊಂಡು ದಿವಾಕರ್ ಆಕೆಯನ್ನು ಕ್ರೂರವಾಗಿ ಥಳಿಸಿದ್ದ. ಆಕೆಯಿಂದ ಹಣ ತೆಗೆದುಕೊಂಡು ಮದ್ಯ ಖರೀದಿಸಲು ಹೊರಟುಹೋಗಿದ್ದ.

ಸ್ವಲ್ಪ ಸಮಯದ ಬಳಿಕ ಮೋನಾ ಅಳುತ್ತಾ ಆತನಿಗೆ ವಾಟ್ಸಾಪ್​ನಲ್ಲಿ ವಿಡಿಯೋ ಕರೆ ಮಾಡಿದ್ದಾಳೆ, ಆತನ ಮುಂದೆಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ದಿವಾಕರ್ ಆಕೆಯನ್ನು ಉಳಿಸಲು ಕೂಡಲೇ ಮನೆ ಕಡೆಗೆ ಓಡಿ ಬಂದಿದ್ದ. ಆದರೆ ಮನೆ ಒಳಗಿನಿಂದ ಲಾಕ್ ಆಗಿತ್ತು. ವಿಷಯ ತಿಳಿದು ಅಕ್ಕಪಕ್ಕದ ಮನೆಯವರು ಬಂದು ಬಾಗಿಲು ಒಡೆದು ಒಳಗೆ ಹೋಗಿದ್ದಾರೆ. ಆಕೆಗೆ ಕೂಡಲೇ ಸಿಪಿಆರ್ ನೀಡಲಾಯಿತು ಆದರೆ ಯಾವುದೇ ಪ್ರಯೋಜನವಾಗಿಲ್ಲ.

ಮತ್ತಷ್ಟು ಓದಿ: ಪತ್ನಿ ಮೇಲೆ ಸಂಶಯ: ಲೇಡಿ ಕಂಡಕ್ಟರ್​​ಗೆ ಮೂರು ಬಾರಿ ಇರಿದು ಕೊಲೆ ಮಾಡಿದ ಪೊಲೀಸಪ್ಪ

ಮೋನಾ ಹಾಗೂ ಶುಭಂ ಏಳು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದರು. ಇಬ್ಬರು ಮಕ್ಕಳು ಕೂಡಾ ಇದ್ದಾರೆ. ದಿವಾಕರ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕುಟುಂಬವನ್ನು ಪೋಷಿಸಲು ಮದುವೆ ಸಮಾರಂಭಗಳಲ್ಲಿ ಅತಿಥಿಗಳನ್ನು ಸ್ವಾಗತಿಸುವ ‘ವೆಲ್ಕಮ್ ಗರ್ಲ್’ ಆಗಿ ಮೋನಾ ಕೆಲಸ ಮಾಡುತ್ತಿದ್ದರು.

ಆಕೆಯ ಜತೆ ಕೆಲಸ ಮಾಡುತ್ತಿದ್ದವರು ಕೂಡ ಸಾವಿನ ಸುದ್ದಿ ಕೇಳಿ ಮನೆಗೆ ಓಡಿ ಬಂದಿದ್ದಾರೆ. ಕೋಪಗೊಂಡ ಮಹಿಳೆಯರು ಮೋನಾಳ ಗಂಡನನ್ನು ಸುತ್ತುವರೆದು ಥಳಿಸಿದ್ದಾರೆ.ಗಲಾಟೆ ಸುಮಾರು ಎರಡು ಗಂಟೆಗಳ ಕಾಲ ಮುಂದುವರೆಯಿತು. ಸಾಕ್ಷ್ಯಗಳನ್ನು ನಾಶಮಾಡಲು ದಿವಾಕರ್ ಮೋನಾಳ ಮೊಬೈಲ್ ಫೋನ್‌ನಿಂದ ಎಲ್ಲಾ ಕಾಲ್ ಹಿಸ್ಟರಿಗಳನ್ನು ಅಳಿಸಿಹಾಕಿದ್ದಾನೆಂದು ಮೋನಾಳ ಸ್ನೇಹಿತರು ಆರೋಪಿಸಿದ್ದಾರೆ.

ಮೋನಾ ಕುಟುಂಬ ಇಲ್ಲಿಯವರೆಗೆ ಯಾವುದೇ ದೂರು ದಾಖಲಿಸಿಲ್ಲ.ಯಾವುದೇ ದೂರು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾವತ್​ಪುರ ಪೊಲೀಸ್ ಠಾಣೆಯ ಉಸ್ತುವಾರಿ ಮನೋಜ್ ಮಿಶ್ರಾ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್