AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮಗಳು ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದಿದ್ದಾಳೆ ಎನ್ನುವ ಸೈಬರ್ ವಂಚಕರ ಸುಳ್ಳು ಕೇಳಿ ಹೃದಯಸ್ತಂಭನದಿಂದ ಶಿಕ್ಷಕಿ ಸಾವು

ಸೈಬರ್​ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲವರು ಸುಳ್ಳು ಹೇಳಿ ಹಣವನ್ನು ಲೂಟಿ ಮಾಡಿದರೆ ಇನ್ನೂ ಕೆಲವರು ಜೀವಕ್ಕೇ ಕುತ್ತು ತರುವಂತಹ ಕೆಲಸ ಮಾಡಿದ್ದಾರೆ. ಆಗ್ರಾದ ಶಾಲಾ ಶಿಕ್ಷಕಿಯೊಬ್ಬರಿಗೆ ಸೈಬರ್ ವಂಚಕರು ಕರೆ ಮಾಡಿ ನಿಮ್ಮ ಮಗಳು ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದಾಳೆ ಎಂದು ಸುಳ್ಳು ಹೇಳಿದ್ದು ಅದನ್ನು ಕೇಳಿ ಆಘಾತಕ್ಕೊಳಗಾದ ತಾಯಿ ಹೃದಯಸ್ತಂಭನದಿಂದ ಪ್ರಾಣಬಿಟ್ಟಿದ್ದಾರೆ.

ನಿಮ್ಮ ಮಗಳು ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದಿದ್ದಾಳೆ ಎನ್ನುವ ಸೈಬರ್ ವಂಚಕರ ಸುಳ್ಳು ಕೇಳಿ ಹೃದಯಸ್ತಂಭನದಿಂದ ಶಿಕ್ಷಕಿ ಸಾವು
ಹೃದಯಾಘಾತ
Follow us
ನಯನಾ ರಾಜೀವ್
|

Updated on: Oct 04, 2024 | 10:08 AM

ಸೈಬರ್​ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲವರು ಸುಳ್ಳು ಹೇಳಿ ಹಣವನ್ನು ಲೂಟಿ ಮಾಡಿದರೆ ಇನ್ನೂ ಕೆಲವರು ಜೀವಕ್ಕೇ ಕುತ್ತು ತರುವಂತಹ ಕೆಲಸ ಮಾಡಿದ್ದಾರೆ. ಆಗ್ರಾದ ಶಾಲಾ ಶಿಕ್ಷಕಿಯೊಬ್ಬರಿಗೆ ಸೈಬರ್ ವಂಚಕರು ಕರೆ ಮಾಡಿ ನಿಮ್ಮ ಮಗಳು ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದಾಳೆ ಎಂದು ಸುಳ್ಳು ಹೇಳಿದ್ದು ಅದನ್ನು ಕೇಳಿ ಆಘಾತಕ್ಕೊಳಗಾದ ತಾಯಿ ಹೃದಯಸ್ತಂಭನದಿಂದ ಪ್ರಾಣಬಿಟ್ಟಿದ್ದಾರೆ.

ಸೆಪ್ಟೆಂಬರ್ 30 ರಂದು ವಂಚಕರು ಶಿಕ್ಷಕರಿಗೆ ಬೆದರಿಕೆ ಹಾಕಿದರು ಮತ್ತು ವಿಷಯವನ್ನು ಬಹಿರಂಗಪಡಿಸದಂತೆ 1 ಲಕ್ಷ ನೀಡುವಂತೆ ಒತ್ತಾಯಿಸಿದರು ಎಂದು ಕುಟುಂಬದವರು ತಿಳಿಸಿದ್ದಾರೆ. ಮೃತರ ಮಗ ದೀಪಾಂಶು ಮಾತನಾಡಿ, ತಾಯಿ ಮಾಲತಿ ಶರ್ಮಾ, ಆಗ್ರಾದ ಅಚ್ನೇರಾದ ಜ್ಯೂನಿಯರ್ ಹೈಸ್ಕೂಲ್​ನಲ್ಲಿ ಶಿಕ್ಷಕಿಯಾಗಿದ್ದರು. ಸೆ.30ರಂದು ಮಧ್ಯಾಹ್ನ 12 ಗಂಟೆಗೆ ವಾಟ್ಸಾಪ್ ಕರೆಯ ನಂತರ ಅವರು ಭಯಗೊಂಡಿದ್ದರು. ಆಮೇಲೆ ಹಣಕೊಡುವಂತೆ  ವಂಚಕರು ಪೀಡಿಸಿದ್ದರು.

ಅದಾದ ಬಳಿಕ ಅಮ್ಮ ನಮ್ಮ ಬಳಿ ಈ ವಿಚಾರ ಹೇಳಿದ್ದರು, ಆ ನಂಬರ್ ಪೊಲೀಸರಿಗೆ ನೀಡಿ ವಿಚಾರಿಸಿದಾಗ ಅದು ಸೈಬರ್ ವಂಚಕರ ಕರೆ ಎಂಬುದು ತಿಳಿದುಬಂದಿದೆ. ಆಮೇಲೆ ಸಹೋದರಿ ಬಳಿ ಮಾತನಾಡಿ, ಎಲ್ಲವೂ ಸರಿಯಾಗಿದೆ ಯಾವುದೇ ಸಮಸ್ಯೆಯಿಲ್ಲ ಎಂಬುದು ಕೇಳಿ ಸಮಾಧಾನವಾಗಿತ್ತು.

ಮತ್ತಷ್ಟು ಓದಿ: ಅಣ್ಣನಿಂದಲೇ ಅಪ್ರಾಪ್ತ ಸಹೋದರಿ ಮೇಲೆ ಅತ್ಯಾಚಾರ, ಆಕೆ ಈಗ ಗರ್ಭಿಣಿ

ಸೈಬರ್​ ಕ್ರೈಂ ಬಗ್ಗೆ ನೀವು ಚಿಂತಿಸಬೇಡಿ ಎಂದು ಅಮ್ಮನಿಗೆ ತಿಳಿ ಹೇಳಿದೆ, ಆದರೆ ಆಕೆಯ ಪರಿಸ್ಥಿತಿಯನ್ನು ಸರಿಪಡಿಸಲು ಸಾಧ್ಯವಾಗಲಿಲ್ಲ, ಆರೋಗ್ಯ ಹದಗೆಡಲು ಶುರು ಮಾಡಿತ್ತು. ಶಾಲೆ ಮುಗಿಸಿ ಹಿಂದಿರುಗುವಾಗ ಎದೆನೋವು ಕಾಣಿಸಿಕೊಂಡಿತ್ತು, ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದೇವೆ, ಆದರೆ ಅವರು ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮಗ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಜಗದೀಶ್‌ಪುರ ಠಾಣೆ ಪ್ರಭಾರಿ ಆನಂದವೀರ್‌ ಸಿಂಗ್‌, ಕುಟುಂಬದಿಂದ ದೂರು ಸ್ವೀಕರಿಸಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ