AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮಗಳು ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದಿದ್ದಾಳೆ ಎನ್ನುವ ಸೈಬರ್ ವಂಚಕರ ಸುಳ್ಳು ಕೇಳಿ ಹೃದಯಸ್ತಂಭನದಿಂದ ಶಿಕ್ಷಕಿ ಸಾವು

ಸೈಬರ್​ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲವರು ಸುಳ್ಳು ಹೇಳಿ ಹಣವನ್ನು ಲೂಟಿ ಮಾಡಿದರೆ ಇನ್ನೂ ಕೆಲವರು ಜೀವಕ್ಕೇ ಕುತ್ತು ತರುವಂತಹ ಕೆಲಸ ಮಾಡಿದ್ದಾರೆ. ಆಗ್ರಾದ ಶಾಲಾ ಶಿಕ್ಷಕಿಯೊಬ್ಬರಿಗೆ ಸೈಬರ್ ವಂಚಕರು ಕರೆ ಮಾಡಿ ನಿಮ್ಮ ಮಗಳು ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದಾಳೆ ಎಂದು ಸುಳ್ಳು ಹೇಳಿದ್ದು ಅದನ್ನು ಕೇಳಿ ಆಘಾತಕ್ಕೊಳಗಾದ ತಾಯಿ ಹೃದಯಸ್ತಂಭನದಿಂದ ಪ್ರಾಣಬಿಟ್ಟಿದ್ದಾರೆ.

ನಿಮ್ಮ ಮಗಳು ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದಿದ್ದಾಳೆ ಎನ್ನುವ ಸೈಬರ್ ವಂಚಕರ ಸುಳ್ಳು ಕೇಳಿ ಹೃದಯಸ್ತಂಭನದಿಂದ ಶಿಕ್ಷಕಿ ಸಾವು
ಹೃದಯಾಘಾತ
ನಯನಾ ರಾಜೀವ್
|

Updated on: Oct 04, 2024 | 10:08 AM

Share

ಸೈಬರ್​ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲವರು ಸುಳ್ಳು ಹೇಳಿ ಹಣವನ್ನು ಲೂಟಿ ಮಾಡಿದರೆ ಇನ್ನೂ ಕೆಲವರು ಜೀವಕ್ಕೇ ಕುತ್ತು ತರುವಂತಹ ಕೆಲಸ ಮಾಡಿದ್ದಾರೆ. ಆಗ್ರಾದ ಶಾಲಾ ಶಿಕ್ಷಕಿಯೊಬ್ಬರಿಗೆ ಸೈಬರ್ ವಂಚಕರು ಕರೆ ಮಾಡಿ ನಿಮ್ಮ ಮಗಳು ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದಾಳೆ ಎಂದು ಸುಳ್ಳು ಹೇಳಿದ್ದು ಅದನ್ನು ಕೇಳಿ ಆಘಾತಕ್ಕೊಳಗಾದ ತಾಯಿ ಹೃದಯಸ್ತಂಭನದಿಂದ ಪ್ರಾಣಬಿಟ್ಟಿದ್ದಾರೆ.

ಸೆಪ್ಟೆಂಬರ್ 30 ರಂದು ವಂಚಕರು ಶಿಕ್ಷಕರಿಗೆ ಬೆದರಿಕೆ ಹಾಕಿದರು ಮತ್ತು ವಿಷಯವನ್ನು ಬಹಿರಂಗಪಡಿಸದಂತೆ 1 ಲಕ್ಷ ನೀಡುವಂತೆ ಒತ್ತಾಯಿಸಿದರು ಎಂದು ಕುಟುಂಬದವರು ತಿಳಿಸಿದ್ದಾರೆ. ಮೃತರ ಮಗ ದೀಪಾಂಶು ಮಾತನಾಡಿ, ತಾಯಿ ಮಾಲತಿ ಶರ್ಮಾ, ಆಗ್ರಾದ ಅಚ್ನೇರಾದ ಜ್ಯೂನಿಯರ್ ಹೈಸ್ಕೂಲ್​ನಲ್ಲಿ ಶಿಕ್ಷಕಿಯಾಗಿದ್ದರು. ಸೆ.30ರಂದು ಮಧ್ಯಾಹ್ನ 12 ಗಂಟೆಗೆ ವಾಟ್ಸಾಪ್ ಕರೆಯ ನಂತರ ಅವರು ಭಯಗೊಂಡಿದ್ದರು. ಆಮೇಲೆ ಹಣಕೊಡುವಂತೆ  ವಂಚಕರು ಪೀಡಿಸಿದ್ದರು.

ಅದಾದ ಬಳಿಕ ಅಮ್ಮ ನಮ್ಮ ಬಳಿ ಈ ವಿಚಾರ ಹೇಳಿದ್ದರು, ಆ ನಂಬರ್ ಪೊಲೀಸರಿಗೆ ನೀಡಿ ವಿಚಾರಿಸಿದಾಗ ಅದು ಸೈಬರ್ ವಂಚಕರ ಕರೆ ಎಂಬುದು ತಿಳಿದುಬಂದಿದೆ. ಆಮೇಲೆ ಸಹೋದರಿ ಬಳಿ ಮಾತನಾಡಿ, ಎಲ್ಲವೂ ಸರಿಯಾಗಿದೆ ಯಾವುದೇ ಸಮಸ್ಯೆಯಿಲ್ಲ ಎಂಬುದು ಕೇಳಿ ಸಮಾಧಾನವಾಗಿತ್ತು.

ಮತ್ತಷ್ಟು ಓದಿ: ಅಣ್ಣನಿಂದಲೇ ಅಪ್ರಾಪ್ತ ಸಹೋದರಿ ಮೇಲೆ ಅತ್ಯಾಚಾರ, ಆಕೆ ಈಗ ಗರ್ಭಿಣಿ

ಸೈಬರ್​ ಕ್ರೈಂ ಬಗ್ಗೆ ನೀವು ಚಿಂತಿಸಬೇಡಿ ಎಂದು ಅಮ್ಮನಿಗೆ ತಿಳಿ ಹೇಳಿದೆ, ಆದರೆ ಆಕೆಯ ಪರಿಸ್ಥಿತಿಯನ್ನು ಸರಿಪಡಿಸಲು ಸಾಧ್ಯವಾಗಲಿಲ್ಲ, ಆರೋಗ್ಯ ಹದಗೆಡಲು ಶುರು ಮಾಡಿತ್ತು. ಶಾಲೆ ಮುಗಿಸಿ ಹಿಂದಿರುಗುವಾಗ ಎದೆನೋವು ಕಾಣಿಸಿಕೊಂಡಿತ್ತು, ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದೇವೆ, ಆದರೆ ಅವರು ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮಗ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಜಗದೀಶ್‌ಪುರ ಠಾಣೆ ಪ್ರಭಾರಿ ಆನಂದವೀರ್‌ ಸಿಂಗ್‌, ಕುಟುಂಬದಿಂದ ದೂರು ಸ್ವೀಕರಿಸಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!