ನಿಮ್ಮ ಮಗಳು ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದಿದ್ದಾಳೆ ಎನ್ನುವ ಸೈಬರ್ ವಂಚಕರ ಸುಳ್ಳು ಕೇಳಿ ಹೃದಯಸ್ತಂಭನದಿಂದ ಶಿಕ್ಷಕಿ ಸಾವು

ಸೈಬರ್​ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲವರು ಸುಳ್ಳು ಹೇಳಿ ಹಣವನ್ನು ಲೂಟಿ ಮಾಡಿದರೆ ಇನ್ನೂ ಕೆಲವರು ಜೀವಕ್ಕೇ ಕುತ್ತು ತರುವಂತಹ ಕೆಲಸ ಮಾಡಿದ್ದಾರೆ. ಆಗ್ರಾದ ಶಾಲಾ ಶಿಕ್ಷಕಿಯೊಬ್ಬರಿಗೆ ಸೈಬರ್ ವಂಚಕರು ಕರೆ ಮಾಡಿ ನಿಮ್ಮ ಮಗಳು ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದಾಳೆ ಎಂದು ಸುಳ್ಳು ಹೇಳಿದ್ದು ಅದನ್ನು ಕೇಳಿ ಆಘಾತಕ್ಕೊಳಗಾದ ತಾಯಿ ಹೃದಯಸ್ತಂಭನದಿಂದ ಪ್ರಾಣಬಿಟ್ಟಿದ್ದಾರೆ.

ನಿಮ್ಮ ಮಗಳು ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದಿದ್ದಾಳೆ ಎನ್ನುವ ಸೈಬರ್ ವಂಚಕರ ಸುಳ್ಳು ಕೇಳಿ ಹೃದಯಸ್ತಂಭನದಿಂದ ಶಿಕ್ಷಕಿ ಸಾವು
ಹೃದಯಾಘಾತ
Follow us
|

Updated on: Oct 04, 2024 | 10:08 AM

ಸೈಬರ್​ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲವರು ಸುಳ್ಳು ಹೇಳಿ ಹಣವನ್ನು ಲೂಟಿ ಮಾಡಿದರೆ ಇನ್ನೂ ಕೆಲವರು ಜೀವಕ್ಕೇ ಕುತ್ತು ತರುವಂತಹ ಕೆಲಸ ಮಾಡಿದ್ದಾರೆ. ಆಗ್ರಾದ ಶಾಲಾ ಶಿಕ್ಷಕಿಯೊಬ್ಬರಿಗೆ ಸೈಬರ್ ವಂಚಕರು ಕರೆ ಮಾಡಿ ನಿಮ್ಮ ಮಗಳು ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದಾಳೆ ಎಂದು ಸುಳ್ಳು ಹೇಳಿದ್ದು ಅದನ್ನು ಕೇಳಿ ಆಘಾತಕ್ಕೊಳಗಾದ ತಾಯಿ ಹೃದಯಸ್ತಂಭನದಿಂದ ಪ್ರಾಣಬಿಟ್ಟಿದ್ದಾರೆ.

ಸೆಪ್ಟೆಂಬರ್ 30 ರಂದು ವಂಚಕರು ಶಿಕ್ಷಕರಿಗೆ ಬೆದರಿಕೆ ಹಾಕಿದರು ಮತ್ತು ವಿಷಯವನ್ನು ಬಹಿರಂಗಪಡಿಸದಂತೆ 1 ಲಕ್ಷ ನೀಡುವಂತೆ ಒತ್ತಾಯಿಸಿದರು ಎಂದು ಕುಟುಂಬದವರು ತಿಳಿಸಿದ್ದಾರೆ. ಮೃತರ ಮಗ ದೀಪಾಂಶು ಮಾತನಾಡಿ, ತಾಯಿ ಮಾಲತಿ ಶರ್ಮಾ, ಆಗ್ರಾದ ಅಚ್ನೇರಾದ ಜ್ಯೂನಿಯರ್ ಹೈಸ್ಕೂಲ್​ನಲ್ಲಿ ಶಿಕ್ಷಕಿಯಾಗಿದ್ದರು. ಸೆ.30ರಂದು ಮಧ್ಯಾಹ್ನ 12 ಗಂಟೆಗೆ ವಾಟ್ಸಾಪ್ ಕರೆಯ ನಂತರ ಅವರು ಭಯಗೊಂಡಿದ್ದರು. ಆಮೇಲೆ ಹಣಕೊಡುವಂತೆ  ವಂಚಕರು ಪೀಡಿಸಿದ್ದರು.

ಅದಾದ ಬಳಿಕ ಅಮ್ಮ ನಮ್ಮ ಬಳಿ ಈ ವಿಚಾರ ಹೇಳಿದ್ದರು, ಆ ನಂಬರ್ ಪೊಲೀಸರಿಗೆ ನೀಡಿ ವಿಚಾರಿಸಿದಾಗ ಅದು ಸೈಬರ್ ವಂಚಕರ ಕರೆ ಎಂಬುದು ತಿಳಿದುಬಂದಿದೆ. ಆಮೇಲೆ ಸಹೋದರಿ ಬಳಿ ಮಾತನಾಡಿ, ಎಲ್ಲವೂ ಸರಿಯಾಗಿದೆ ಯಾವುದೇ ಸಮಸ್ಯೆಯಿಲ್ಲ ಎಂಬುದು ಕೇಳಿ ಸಮಾಧಾನವಾಗಿತ್ತು.

ಮತ್ತಷ್ಟು ಓದಿ: ಅಣ್ಣನಿಂದಲೇ ಅಪ್ರಾಪ್ತ ಸಹೋದರಿ ಮೇಲೆ ಅತ್ಯಾಚಾರ, ಆಕೆ ಈಗ ಗರ್ಭಿಣಿ

ಸೈಬರ್​ ಕ್ರೈಂ ಬಗ್ಗೆ ನೀವು ಚಿಂತಿಸಬೇಡಿ ಎಂದು ಅಮ್ಮನಿಗೆ ತಿಳಿ ಹೇಳಿದೆ, ಆದರೆ ಆಕೆಯ ಪರಿಸ್ಥಿತಿಯನ್ನು ಸರಿಪಡಿಸಲು ಸಾಧ್ಯವಾಗಲಿಲ್ಲ, ಆರೋಗ್ಯ ಹದಗೆಡಲು ಶುರು ಮಾಡಿತ್ತು. ಶಾಲೆ ಮುಗಿಸಿ ಹಿಂದಿರುಗುವಾಗ ಎದೆನೋವು ಕಾಣಿಸಿಕೊಂಡಿತ್ತು, ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದೇವೆ, ಆದರೆ ಅವರು ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮಗ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಜಗದೀಶ್‌ಪುರ ಠಾಣೆ ಪ್ರಭಾರಿ ಆನಂದವೀರ್‌ ಸಿಂಗ್‌, ಕುಟುಂಬದಿಂದ ದೂರು ಸ್ವೀಕರಿಸಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೈಸೂರು ದಸರಾ: ಹೇಗಿದೆ ನೋಡಿ ಹಳೇ ಬೈಕ್​ಗಳ ಸವಾರಿ!
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ