Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯ ಪೀಡಿತ ಪತಿಯೊಂದಿಗೆ ಆಸ್ಪತ್ರೆಯಿಂದ ಬರುವಾಗ ಆಂಬ್ಯುಲೆನ್ಸ್​ನಲ್ಲಿ ಮಹಿಳೆಗೆ ಕಿರುಕುಳ

ಮಾರಣಾಂತಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪತಿಯನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್​ ಚಾಲಕ ಕಿರುಕುಳ ಕೊಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಲಕ್ನೋದ ಗಾಜಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಅನಾರೋಗ್ಯ ಪೀಡಿತ ಪತಿಯೊಂದಿಗೆ ಆಸ್ಪತ್ರೆಯಿಂದ ಬರುವಾಗ ಆಂಬ್ಯುಲೆನ್ಸ್​ನಲ್ಲಿ ಮಹಿಳೆಗೆ ಕಿರುಕುಳ
ಆಂಬ್ಯುಲೆನ್ಸ್​-ಸಾಂದರ್ಭಿಕ ಚಿತ್ರ
Follow us
ನಯನಾ ರಾಜೀವ್
|

Updated on: Sep 05, 2024 | 11:49 AM

ಮಾರಣಾಂತಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪತಿಯನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್​ ಚಾಲಕ ಕಿರುಕುಳ ಕೊಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಲಕ್ನೋದ ಗಾಜಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆರೋಪಿಯು ಆಕೆಯ ಪತಿಯ ಆಕ್ಸಿಜನ್ ಸಂಪರ್ಕವನ್ನು ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಅವರು ಸಾವನ್ನಪ್ಪಿದ್ದಾರೆ. ಆಕೆಗೆ ಕಿರುಕುಳ ನೀಡಿ ಆಕೆಯ ಬಳಿ ಇದ್ದ ಹಣವನ್ನು ದೋಚಿದ್ದಾನೆ.

ಆಕೆಯ ಪತಿ ಲಕ್ನೋದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸಾ ವೆಚ್ಚವನ್ನು ಭರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅವರನ್ನು ಮನೆಗೆ ಕರೆದುಕೊಂಡು ಹೋಗಲು ನಿರ್ಧರಿಸಿದ್ದರು, ಅದಕ್ಕಾಗಿ ಖಾಗಿ ಆಂಬ್ಯುಲೆನ್ಸ್​ನ್ನು ಬುಕ್ ಮಾಡಿದ್ದರು. ಇಲ್ಲಿ ಆಸ್ಪತ್ರೆಯಲ್ಲಿ ಕೇವಲ 2 ದಿನಗಳ ಚಿಕಿತ್ಸೆಗೆ 1 ಲಕ್ಷಕ್ಕೂ ಹೆಚ್ಚು ಶುಲ್ಕ ಕಟ್ಟಿಸಿಕೊಳ್ಳಲಾಗಿತ್ತು, ಹಣ ಖಾಲಿಯಾಗಿತ್ತು, ಆಕೆ ಗಂಡನನ್ನು ಡಿಸ್ಚಾರ್ಜ್ ಮಾಡುವಂತೆ ವೈದ್ಯರಲ್ಲಿ ಕೇಳಿಕೊಂಡಿದ್ದಳು. ಇದೇ ವೇಳೆ ಅವರು ಆಸ್ಪತ್ರೆಯ ಕೌಂಟರ್‌ನಿಂದ ಖಾಸಗಿ ಆಂಬ್ಯುಲೆನ್ಸ್‌ ಸಿಬ್ಬಂದಿಯ ಸಂಖ್ಯೆಯನ್ನು ಪಡೆಯುತ್ತಾರೆ, ಬಳಿಕ ಬುಕ್ ಮಾಡಿದ್ದರು.

ಮತ್ತಷ್ಟು ಓದಿ: Shocking News: ಅಮ್ಮನ ಪಕ್ಕ ಮಲಗಿದ್ದ ಮಗುವಿಗೆ ಕಚ್ಚಿದ ಹಾವು; ಮೂಢನಂಬಿಕೆಯಿಂದ ಶಿಶುವಿನ ಸಾವು

ಆಂಬ್ಯುಲೆನ್ಸ್​ ಆಸ್ಪತ್ರೆಯಿಂದ 150 ಕಿ.ಮೀ ದೂರು ಹೋಗಿ ಅಲ್ಲಿ ನಿಂತಿತ್ತು, ಬಳಿಕ ಚಾಲಕ ಆಕೆಗೆ ಕಿರುಕುಳ ನೀಡಲು ಶುರು ಮಾಡಿದ್ದ. ತಕ್ಷಣ ಹೇಗೋ ತಪ್ಪಿಸಿಕೊಂಡು ಆಕೆ ಪೊಲೀಸರಿಗೆ ಕರೆ ಮಾಡಿದ್ದಳು, ಸ್ಥಳೀಯ ಪೊಲೀಸರು ಕೂಡಲೇ ಬೇರೆ ಆಂಬ್ಯುಲೆನ್ಸ್​ ಕಳುಹಿಸಿಕೊಟ್ಟರು, ಅಷ್ಟರಲ್ಲಾಗಲೇ ಆಕೆಯ ಪತಿಯ ಪ್ರಾಣಪಕ್ಷಿ ಹಾರಿಹೋಗಿತ್ತು. ಆಕೆ ಗಾಜಿಪುರ ಪೊಲೀಸ್ ಠಾಣೆಯಲ್ಲಿ ಚಾಲಕನ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್
ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್