AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಬೇರೆ ಧರ್ಮವೆಂದು ಮದುವೆಗೆ ನಿರಾಕರಣೆ, ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

ಯುವಕನೊಬ್ಬ ಪ್ರೇಯಸಿಯ ದುಪಟ್ಟಾವನ್ನು ಕೊರಳಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ದಲಿತ ಸಮುದಾಯದ ಹುಡುಗಿಯೊಂದಿಗೆ ಸಮ್ರೇಜ್ ದೀರ್ಘಕಾಲದ ಸಂಬಂಧದಲ್ಲಿದ್ದ. ಅವರ ಅಂತರ್ಧರ್ಮೀಯ ಸಂಬಂಧವನ್ನು ಎರಡೂ ಕುಟುಂಬಗಳು ನಿರಾಕರಿಸಿದ್ದವು. ಹುಡುಗಿ ಇತ್ತೀಚೆಗೆ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ನಂತರ ವಿಷಯ ಉಲ್ಬಣಗೊಂಡಿತ್ತು.

ಬೇರೆ ಬೇರೆ ಧರ್ಮವೆಂದು ಮದುವೆಗೆ ನಿರಾಕರಣೆ, ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
ಯುವತಿImage Credit source: The daily Guardian
ನಯನಾ ರಾಜೀವ್
|

Updated on: Apr 09, 2025 | 8:53 AM

Share

ಉತ್ತರ ಪ್ರದೇಶ, ಏಪ್ರಿಲ್ 09: ಬೇರೆ ಬೇರೆ ಧರ್ಮದವರೆಂದು ಇಬ್ಬರ ಮದುವೆ(Marriage)ಗೆ ಎರಡೂ ಕುಟುಂಬಗಳು ನಿರಾಕರಿಸಿದ್ದಕ್ಕೆ ಯುವಕ ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕುರ್ದಿಖೇಡ ಗ್ರಾಮದ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಸಮ್ರೇಜ್ ಎಂದು ಗುರುತಿಸಲಾಗಿದೆ. ಈತ ಹಮೀದ್ ಅಲಿಯಾಸ್ ಭೂರಾ ಎಂಬವರ ಪುತ್ರನಾಗಿದ್ದು, ಈತ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು, ಸ್ಥಳೀಯ ನಿವಾಸಿಯಾಗಿದ್ದಾನೆ. ಸಮ್ರೇಜ್ ಮೃತದೇಹ ಮರದಲ್ಲಿ ನೇತಾಡುತ್ತಿತ್ತು.

ಈ ಘಟನೆ ಸುತ್ತ ವಿಡಿಯೋವೊಂದು ಹರಿದಾಡಿದ್ದು, ಯುವತಿ ಆತನನ್ನು ತಬ್ಬಿ ಅಳುತ್ತಿರುವುದನ್ನು ಕಾಣಬಹುದು. ದಲಿತ ಸಮುದಾಯದ ಹುಡುಗಿಯೊಂದಿಗೆ ಸಮ್ರೇಜ್ ದೀರ್ಘಕಾಲದ ಸಂಬಂಧದಲ್ಲಿದ್ದ. ಅವರ ಅಂತರ್ಧರ್ಮೀಯ ಸಂಬಂಧವನ್ನು ಎರಡೂ ಕುಟುಂಬಗಳು ನಿರಾಕರಿಸಿದ್ದವು. ಹುಡುಗಿ ಇತ್ತೀಚೆಗೆ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ನಂತರ ವಿಷಯ ಉಲ್ಬಣಗೊಂಡಿತ್ತು.

ಇದನ್ನೂ ಓದಿ
Image
ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿ ಪ್ರೇಮ ವಿವಾಹ!
Image
ವರ್ಷದ ಈ ತಿಂಗಳಿನಲ್ಲಿ ಮದುವೆ ಮಾಡಿಕೊಳ್ಳಲ್ಲ… ಏಕೆ ಗೊತ್ತಾ?
Image
ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ
Image
ಅನ್ಯಕೋಮಿನವನೊಂದಿಗೆ ಹಿಂದೂ ಯುವತಿ ಮದುವೆ: ವಿವಾಹ ಮಾಡಿಸಿದ್ದವನಿಗೆ ಬೆದರಿಕೆ

ಆಕೆಯಿಂದ ದೂರ ಹೋಗಿರುವುದು ಮತ್ತು ಕುಟುಂಬದ ಒತ್ತಡದಿಂದ ಮನನೊಂದ ಸಮ್ರೇಜ್ ತಡರಾತ್ರಿ ಆಕೆಗೆ ಮನೆಯಿಂದ ಹೊರಬರಲು ಹೇಳಿದ್ದ, ಇಬ್ಬರೂ ಕಾಡಿನ ದಾರಿ ಹಿಡಿದರು. ಇಬ್ಬರೂ ಮಾತನಾಡುತ್ತಿರುವಾಗ ವಾಗ್ವಾದ ತೀವ್ರವಾಗಿ ಕೋಪದಲ್ಲಿ ಆತ ಪ್ರೇಯಸಿಯ ದುಪಟ್ಟಾವನ್ನು ಎಳೆದುಕೊಂಡು ಹೋಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವನ್ನು ನೋಡಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: ಮರ್ಯಾದಾ ಹತ್ಯೆ, ಬೇರೆ ಜಾತಿಯವನ ಮದುವೆಯಾಗಿದ್ದಕ್ಕೆ ತಂದೆ, ಅಣ್ಣನಿಂದ ಯುವತಿಯ ಕೊಲೆ

ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಮ್ರೇಜ್ ಅವರ ಮೊಬೈಲ್ ಫೋನ್ ಮತ್ತು ಮೋಟಾರ್ ಸೈಕಲ್ ಅನ್ನು ಸ್ಥಳದಿಂದ ವಶಪಡಿಸಿಕೊಂಡರು. ತನಿಖೆಯ ಭಾಗವಾಗಿ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಪರಿಸ್ಥಿತಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಹಲವು ಮಂದಿ ಕಾರಣೀಭೂತರಾಗಿದ್ದಾರೆ, ಅವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬುದನ್ನು ಪೊಲೀಸರು ಇನ್ನೂ ಸ್ಪಷ್ಟಪಡಿಸಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್