AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಬಿಜೆಪಿ ನಾಯಕನಿಂದ ರಸ್ತೆ ಸಂಚಾರಕ್ಕೆ ಅಡ್ಡಿ, ಆ್ಯಂಬುಲೆನ್ಸ್​​ನಲ್ಲಿದ್ದ ರೋಗಿ ಸಾವು; ಪ್ರಶ್ನಿಸಿದ್ದಕ್ಕೆ ಬೈಗುಳ, ಬೆದರಿಕೆ

ಬಿಜೆಪಿ ಮುಖಂಡ ಮತ್ತು ಬ್ಲಾಕ್ ಮುಖ್ಯಸ್ಥ ರಾಮಕಿಂಕರ್ ಪಾಂಡೆ ಅವರ ಸಹೋದರ ಎಂದು ಹೇಳಿಕೊಳ್ಳುವ ಉಮೇಶ್ ಮಿಶ್ರಾ, ಮೃತಪಟ್ಟ ವ್ಯಕ್ತಿಯ ಸೋದರ ಮಾವನನ್ನು ಬೈಯ್ಯುತ್ತಿರುವುದು ಮತ್ತು ಪೊಲೀಸ್ ಕೇಸ್‌ಗಳಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕುತ್ತಿರುವುದು ವಿಡಿಯೊದಲ್ಲಿದೆ

ಉತ್ತರ ಪ್ರದೇಶ: ಬಿಜೆಪಿ ನಾಯಕನಿಂದ ರಸ್ತೆ ಸಂಚಾರಕ್ಕೆ ಅಡ್ಡಿ, ಆ್ಯಂಬುಲೆನ್ಸ್​​ನಲ್ಲಿದ್ದ ರೋಗಿ ಸಾವು; ಪ್ರಶ್ನಿಸಿದ್ದಕ್ಕೆ ಬೈಗುಳ, ಬೆದರಿಕೆ
ಜಗಳವಾಡುತ್ತಿರುವ ಉಮೇಶ್ ಮಿಶ್ರಾ
ರಶ್ಮಿ ಕಲ್ಲಕಟ್ಟ
|

Updated on: Apr 04, 2023 | 6:29 PM

Share

ಲಖನೌ: ಉತ್ತರ ಪ್ರದೇಶದ (Uttar Pradesh) ಸೀತಾಪುರ್ ಜಿಲ್ಲೆಯಲ್ಲಿ ಬಿಜೆಪಿ (BJP) ಮುಖಂಡರೊಬ್ಬರು ಕಾರು ಅಡ್ಡವಾಗಿ ನಿಲ್ಲಿಸಿ ರಸ್ತೆ ತಡೆದ ಪರಿಣಾಮ, ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ. ಇದನ್ನು ಪ್ರಶ್ನಿಸಿದಾಗ ಬಿಜೆಪಿ ಮುಖಂಡ ಉಮೇಶ್ ಮಿಶ್ರಾ, ಇದಕ್ಕೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ರೋಗಿಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ರೋಗಿ ಸುರೇಶ್ ಚಂದ್ರ ಎಂಬವರಿಗೆ ಶನಿವಾರ ಎದೆನೋವು ಕಾಣಿಕೊಂಡಾಗ ತಕ್ಷಣವೇ ಅವರನ್ನು ಲಕ್ನೋ ಆಸ್ಪತ್ರೆಗೆ ಕಳುಹಿಸಲಾಯಿತು. ಅವರು ಜಿಲ್ಲಾ ಆಸ್ಪತ್ರೆಯಿಂದ ಹೊರಬಂದಾಗ, ಅಲ್ಲಿ ರೋಗಿಗೆ ಹೃದಯಾಘಾತವಾಗಿದೆ ಎಂದು ವೈದ್ಯರು ಹೇಳಿದರು. ಈ ಹೊತ್ತಲ್ಲಿ ಉಮೇಶ್ ಮಿಶ್ರಾ ಅವರು ತಮ್ಮ ವ್ಯಾಗನಾರ್ ಕಾರನ್ನು ರಸ್ತೆಯಲ್ಲಿ ನಿಲ್ಲಿಸಿ ಹೋಗಿದ್ದರಿಂದ ಸಂಚಾರಕ್ಕೆ ಅಡ್ಡಿಯಾಗಿತ್ತು. 30 ನಿಮಿಷಕ್ಕೂ ಹೆಚ್ಚು ಕಾಲ ಆಂಬ್ಯುಲೆನ್ಸ್ ಚಲಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಸುರೇಶ್ ಚಂದ್ರ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಬಿಜೆಪಿ ನಾಯಕ ಹಿಂತಿರುಗಿದ್ದು, ಆತನನ್ನು ಪ್ರಶ್ನಿಸಿದಾಗ ಸಿಟ್ಟಿಗೆದ್ದು ಕೆಟ್ಟದಾಗಿ ಬೈದಿದ್ದಾರೆ.

ಬಿಜೆಪಿ ಮುಖಂಡ ಮತ್ತು ಬ್ಲಾಕ್ ಮುಖ್ಯಸ್ಥ ರಾಮಕಿಂಕರ್ ಪಾಂಡೆ ಅವರ ಸಹೋದರ ಎಂದು ಹೇಳಿಕೊಳ್ಳುವ ಉಮೇಶ್ ಮಿಶ್ರಾ, ಮೃತಪಟ್ಟ ವ್ಯಕ್ತಿಯ ಸೋದರ ಮಾವನನ್ನು ಬೈಯ್ಯುತ್ತಿರುವುದು ಮತ್ತು ಪೊಲೀಸ್ ಕೇಸ್‌ಗಳಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕುತ್ತಿರುವುದನ್ನು ಪಕ್ಕದಲ್ಲಿದ್ದವರು ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಅಧೀಕ್ಷಕರು ನನ್ನ ಸೂಚನೆಯಂತೆ ಕೆಲಸ ಮಾಡುತ್ತಾರೆ, ನಾನು ನಿಮ್ಮನ್ನು ಇಲ್ಲವಾಗಿಸುತ್ತೇನೆ ಎಂದು ಮಿಶ್ರಾ ಬೆದರಿಕೆಯೊಡ್ಡಿದ್ದಾರೆ. ಉಮೇಶ್ ಮಿಶ್ರಾ ಮೃತ ವ್ಯಕ್ತಿಯ ಸಂಬಂಧಿಕರನ್ನು ಕೆಣಕಿದಾಗ ಕೆಲವು ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು, ಆದರೆ ಯಾರೂ ಮಧ್ಯಪ್ರವೇಶಿಸಲಿಲ್ಲ. ನಂತರ ಆತ ತನ್ನ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: Madhu Case Verdict: ಕಳ್ಳನೆಂದು ಆರೋಪಿಸಿ ಜನರು ಹೊಡೆದು ಕೊಂದ ಕೇರಳದ ಮಧು ಹತ್ಯೆ ಪ್ರಕರಣದಲ್ಲಿ 14 ಮಂದಿ ತಪ್ಪಿತಸ್ಥರು; ನಾಳೆ ಶಿಕ್ಷೆ ಪ್ರಕಟ

ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ನಿರ್ಲಕ್ಷ್ಯಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ