AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಬಿಜೆಪಿ ನಾಯಕನಿಂದ ರಸ್ತೆ ಸಂಚಾರಕ್ಕೆ ಅಡ್ಡಿ, ಆ್ಯಂಬುಲೆನ್ಸ್​​ನಲ್ಲಿದ್ದ ರೋಗಿ ಸಾವು; ಪ್ರಶ್ನಿಸಿದ್ದಕ್ಕೆ ಬೈಗುಳ, ಬೆದರಿಕೆ

ಬಿಜೆಪಿ ಮುಖಂಡ ಮತ್ತು ಬ್ಲಾಕ್ ಮುಖ್ಯಸ್ಥ ರಾಮಕಿಂಕರ್ ಪಾಂಡೆ ಅವರ ಸಹೋದರ ಎಂದು ಹೇಳಿಕೊಳ್ಳುವ ಉಮೇಶ್ ಮಿಶ್ರಾ, ಮೃತಪಟ್ಟ ವ್ಯಕ್ತಿಯ ಸೋದರ ಮಾವನನ್ನು ಬೈಯ್ಯುತ್ತಿರುವುದು ಮತ್ತು ಪೊಲೀಸ್ ಕೇಸ್‌ಗಳಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕುತ್ತಿರುವುದು ವಿಡಿಯೊದಲ್ಲಿದೆ

ಉತ್ತರ ಪ್ರದೇಶ: ಬಿಜೆಪಿ ನಾಯಕನಿಂದ ರಸ್ತೆ ಸಂಚಾರಕ್ಕೆ ಅಡ್ಡಿ, ಆ್ಯಂಬುಲೆನ್ಸ್​​ನಲ್ಲಿದ್ದ ರೋಗಿ ಸಾವು; ಪ್ರಶ್ನಿಸಿದ್ದಕ್ಕೆ ಬೈಗುಳ, ಬೆದರಿಕೆ
ಜಗಳವಾಡುತ್ತಿರುವ ಉಮೇಶ್ ಮಿಶ್ರಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 04, 2023 | 6:29 PM

Share

ಲಖನೌ: ಉತ್ತರ ಪ್ರದೇಶದ (Uttar Pradesh) ಸೀತಾಪುರ್ ಜಿಲ್ಲೆಯಲ್ಲಿ ಬಿಜೆಪಿ (BJP) ಮುಖಂಡರೊಬ್ಬರು ಕಾರು ಅಡ್ಡವಾಗಿ ನಿಲ್ಲಿಸಿ ರಸ್ತೆ ತಡೆದ ಪರಿಣಾಮ, ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ. ಇದನ್ನು ಪ್ರಶ್ನಿಸಿದಾಗ ಬಿಜೆಪಿ ಮುಖಂಡ ಉಮೇಶ್ ಮಿಶ್ರಾ, ಇದಕ್ಕೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ರೋಗಿಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ರೋಗಿ ಸುರೇಶ್ ಚಂದ್ರ ಎಂಬವರಿಗೆ ಶನಿವಾರ ಎದೆನೋವು ಕಾಣಿಕೊಂಡಾಗ ತಕ್ಷಣವೇ ಅವರನ್ನು ಲಕ್ನೋ ಆಸ್ಪತ್ರೆಗೆ ಕಳುಹಿಸಲಾಯಿತು. ಅವರು ಜಿಲ್ಲಾ ಆಸ್ಪತ್ರೆಯಿಂದ ಹೊರಬಂದಾಗ, ಅಲ್ಲಿ ರೋಗಿಗೆ ಹೃದಯಾಘಾತವಾಗಿದೆ ಎಂದು ವೈದ್ಯರು ಹೇಳಿದರು. ಈ ಹೊತ್ತಲ್ಲಿ ಉಮೇಶ್ ಮಿಶ್ರಾ ಅವರು ತಮ್ಮ ವ್ಯಾಗನಾರ್ ಕಾರನ್ನು ರಸ್ತೆಯಲ್ಲಿ ನಿಲ್ಲಿಸಿ ಹೋಗಿದ್ದರಿಂದ ಸಂಚಾರಕ್ಕೆ ಅಡ್ಡಿಯಾಗಿತ್ತು. 30 ನಿಮಿಷಕ್ಕೂ ಹೆಚ್ಚು ಕಾಲ ಆಂಬ್ಯುಲೆನ್ಸ್ ಚಲಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಸುರೇಶ್ ಚಂದ್ರ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಬಿಜೆಪಿ ನಾಯಕ ಹಿಂತಿರುಗಿದ್ದು, ಆತನನ್ನು ಪ್ರಶ್ನಿಸಿದಾಗ ಸಿಟ್ಟಿಗೆದ್ದು ಕೆಟ್ಟದಾಗಿ ಬೈದಿದ್ದಾರೆ.

ಬಿಜೆಪಿ ಮುಖಂಡ ಮತ್ತು ಬ್ಲಾಕ್ ಮುಖ್ಯಸ್ಥ ರಾಮಕಿಂಕರ್ ಪಾಂಡೆ ಅವರ ಸಹೋದರ ಎಂದು ಹೇಳಿಕೊಳ್ಳುವ ಉಮೇಶ್ ಮಿಶ್ರಾ, ಮೃತಪಟ್ಟ ವ್ಯಕ್ತಿಯ ಸೋದರ ಮಾವನನ್ನು ಬೈಯ್ಯುತ್ತಿರುವುದು ಮತ್ತು ಪೊಲೀಸ್ ಕೇಸ್‌ಗಳಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕುತ್ತಿರುವುದನ್ನು ಪಕ್ಕದಲ್ಲಿದ್ದವರು ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಅಧೀಕ್ಷಕರು ನನ್ನ ಸೂಚನೆಯಂತೆ ಕೆಲಸ ಮಾಡುತ್ತಾರೆ, ನಾನು ನಿಮ್ಮನ್ನು ಇಲ್ಲವಾಗಿಸುತ್ತೇನೆ ಎಂದು ಮಿಶ್ರಾ ಬೆದರಿಕೆಯೊಡ್ಡಿದ್ದಾರೆ. ಉಮೇಶ್ ಮಿಶ್ರಾ ಮೃತ ವ್ಯಕ್ತಿಯ ಸಂಬಂಧಿಕರನ್ನು ಕೆಣಕಿದಾಗ ಕೆಲವು ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು, ಆದರೆ ಯಾರೂ ಮಧ್ಯಪ್ರವೇಶಿಸಲಿಲ್ಲ. ನಂತರ ಆತ ತನ್ನ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: Madhu Case Verdict: ಕಳ್ಳನೆಂದು ಆರೋಪಿಸಿ ಜನರು ಹೊಡೆದು ಕೊಂದ ಕೇರಳದ ಮಧು ಹತ್ಯೆ ಪ್ರಕರಣದಲ್ಲಿ 14 ಮಂದಿ ತಪ್ಪಿತಸ್ಥರು; ನಾಳೆ ಶಿಕ್ಷೆ ಪ್ರಕಟ

ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ನಿರ್ಲಕ್ಷ್ಯಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ