AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಲ್ ಪ್ಲಾಜಾ ಸಿಬ್ಬಂದಿಗೆ ಡಿಕ್ಕಿ ಹೊಡೆದು ಎಳೆದೊಯ್ದ ಕಾರು ಚಾಲಕ, ವಿಡಿಯೋ ವೈರಲ್

ಉತ್ತರ ಪ್ರದೇಶದ ಟೋಲ್ ಒಂದರಲ್ಲಿ ಕಾರು ಚಾಲಕನೊಬ್ಬ ಟೋಲ್ ಸಿಬ್ಬಂದಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋಗಿರುವ ಘಟನೆ ವರದಿಯಾಗಿದೆ.

ಟೋಲ್ ಪ್ಲಾಜಾ ಸಿಬ್ಬಂದಿಗೆ ಡಿಕ್ಕಿ ಹೊಡೆದು ಎಳೆದೊಯ್ದ ಕಾರು ಚಾಲಕ, ವಿಡಿಯೋ ವೈರಲ್
ಟೋಲ್
ನಯನಾ ರಾಜೀವ್
|

Updated on: Aug 08, 2023 | 10:22 AM

Share

ಉತ್ತರ ಪ್ರದೇಶದ ಟೋಲ್ ಒಂದರಲ್ಲಿ ಕಾರು ಚಾಲಕನೊಬ್ಬ ಟೋಲ್ ಸಿಬ್ಬಂದಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋಗಿರುವ ಘಟನೆ ವರದಿಯಾಗಿದೆ. ದೆಹಲಿ-ಲಕ್ನೋ ಹೆದ್ದಾರಿಯಲ್ಲಿರುವ ಛಜರ್ಸಿ ಟೋಲ್ ಪ್ಲಾಜಾದಲ್ಲಿ, ವ್ಯಕ್ತಿಯೊಬ್ಬ ತನ್ನ ಕಾರನ್ನು ಟೋಲ್ ಸಿಬ್ಬಂದಿಗೆ ಡಿಕ್ಕಿ ಹೊಡೆಸಿ ಬಳಿಕ ಕಾರಿನಲ್ಲಿ ಸ್ವಲ್ಪ ದೂರ ಎಳೆದೊಯ್ದ ಘಟನೆ ನಡೆದಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಗಳಲ್ಲಿ ಚಾಲಕ ಅತಿವೇಗದಲ್ಲಿ ಬಂದ ಕಾರು, ಬೇಕಂತಲೇ ಟೋಲ್ ಸಿಬ್ಬಂದಿಗೆ ಡಿಕ್ಕಿ ಹೊಡೆದಂತೆ ತೋರುತ್ತದೆ.

ಡಿಕ್ಕಿ ಹೊಡೆದ ಬಳಿಕ ಇದಾದ ಬಳಿಕ ಸ್ವಲ್ಪ ದೂರ ಎಳೆದೊಯ್ದಿದ್ದಾರೆ. ಅಷ್ಟರಲ್ಲಿ ಅಲ್ಲಿ ನಿಂತಿದ್ದವರ ಕೂಗಾಟದಿಂದಾಗಿ ಕಾರನ್ನು ನಿಲ್ಲಿಸಿದ್ದಾರೆ.

ಘಟನೆಯ ಕುರಿತು ಪಿಲ್ಖುವಾ ಸರ್ಕಲ್‌ನ ಡಿಸಿಪಿ ವರುಣ್ ಮಿಶ್ರಾ, ಮಾತನಾಡಿ ವ್ಯಕ್ತಿ ಉದ್ದೇಶ ಪೂರ್ವಕವಾಗಿ ಛಜರ್ಸಿ ಟೋಲ್ ಪ್ಲಾಜಾ ಸಿಬ್ಬಂದಿಗೆ ಕಾರು ಡಿಕ್ಕಿ ಹೊಡೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: ಟೋಲ್​ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ; ಫಾಲೋ ಮಾಡಿಕೊಂಡು ಹೋಗಿ ಟೋಲ್​ ಸಿಬ್ಬಂದಿ ಹತ್ಯೆ

ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದೆ. ಶೀಘ್ರದಲ್ಲೇ ಕಾರು ಚಾಲಕನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಟೋಲ್ ಪ್ಲಾಜಾ ಸಿಬ್ಬಂದಿ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ 

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ