AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿತ, 5 ಮಂದಿ ಸಾವು

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ 6 ಭಕ್ತರು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗ್‌ಪತ್ ಡಿಎಂ ಅಸ್ಮಿತಾ ಮೃತರನ್ನು ಖಚಿತಪಡಿಸಿದ್ದಾರೆ. ವಾಸ್ತವವಾಗಿ, ಇಂದು ಭಗವಾನ್ ಆದಿನಾಥನ ಜೈನ ನಿವರ್ಣ ಲಡ್ಡೂ ಉತ್ಸವವನ್ನು ಬಾಗ್ಪತ್ನಲ್ಲಿ ಆಚರಿಸಲಾಯಿತು.ಸಂಘಟಕರು 65 ಅಡಿ ಎತ್ತರದ ಮರದ ವೇದಿಕೆಯನ್ನು ನಿರ್ಮಿಸಿ ಅದರ ಮೇಲೆ 4-5 ಅಡಿ ಎತ್ತರದ ಆದಿನಾಥನ ಪ್ರತಿಮೆಯನ್ನು ಹಾಕಿದ್ದರು ಎಂದು ಹೇಳಲಾಗುತ್ತಿದೆ.

ಉತ್ತರ ಪ್ರದೇಶ: ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿತ, 5 ಮಂದಿ ಸಾವು
ವೇದಿಕೆ ಕುಸಿತ
Follow us
ನಯನಾ ರಾಜೀವ್
|

Updated on: Jan 28, 2025 | 11:21 AM

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ ಪರಿಸ್ಥಿತಿ ನಿಯಂತ್ರಿಸಿದರು. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.  ಈ ಸಂದರ್ಭದಲ್ಲಿ ಮಾನಸ್ತಂಭ ಕಾಂಪ್ಲೆಕ್ಸ್‌ನಲ್ಲಿ ಪೆಂಡಾಲ್ ಹಾಕಲಾಗಿತ್ತು,  ಅದು ಕುಸಿದು ಬಿದ್ದಿತ್ತು. 50ಕ್ಕೂ ಹೆಚ್ಚು ಭಕ್ತರು ಅವಶೇಷಗಳಡಿ ಸಿಲುಕಿದ್ದಾರೆ.  ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಇತರ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಬರೌತ್ ನಗರದಲ್ಲಿ ಅಪಘಾತ ಸಂಭವಿಸಿದೆ, ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಬರೌತ್ ಕೊತ್ವಾಲಿ ಇನ್ಸ್ ಪೆಕ್ಟರ್ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದ ಕಾರಣ ಗಾಯಾಳುಗಳನ್ನು ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಸಂಘಟಕರು 65 ಅಡಿ ಎತ್ತರದ ಮರದ ವೇದಿಕೆಯನ್ನು ನಿರ್ಮಿಸಿ ಅದರ ಮೇಲೆ 4-5 ಅಡಿ ಎತ್ತರದ ಆದಿನಾಥನ ಪ್ರತಿಮೆಯನ್ನು ಹಾಕಿದ್ದರು ಎಂದು ಹೇಳಲಾಗುತ್ತಿದೆ.

ಈ ವೇಳೆ ಮೆಟ್ಟಿಲು ಹತ್ತುವಾಗ ಭಾರದ ಕಾರಣ ವೇದಿಕೆ ಕುಸಿದಿದೆ. ಕರೆ ಮಾಡಿದರೂ 3 ಆ್ಯಂಬ್ಯುಲೆನ್ಸ್‌ಗಳು ಮಾತ್ರ ಸ್ಥಳಕ್ಕೆ ತಲುಪಿದವು. ಗಾಯಾಳುಗಳನ್ನು ಬರೌತ್ ಸಿಎಚ್‌ಸಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು