AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Char Dham Yatra: ಕೇದಾರನಾಥ ಯಾತ್ರಾರ್ಥಿಗಳಿಗೆ ಮಳೆ, ಹಿಮಪಾತದ ಎಚ್ಚರಿಕೆ ನೀಡಿದ ಉತ್ತರಾಖಂಡ ಸರ್ಕಾರ

ಕಳೆದ ಕೆಲವು ದಿನಗಳಿಂದ ಕೇದಾರನಾಥದಲ್ಲಿ ಮಳೆ, ಹಿಮಪಾತವಾಗುತ್ತಿದೆ ಈ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳು ಎಚ್ಚರಿಕೆವಹಿಸುವಂತೆ ಉತ್ತರಾಖಂಡ(Uttarakhand) ಸರ್ಕಾರ ಸೂಚನೆ ನೀಡಿದೆ.

Char Dham Yatra: ಕೇದಾರನಾಥ ಯಾತ್ರಾರ್ಥಿಗಳಿಗೆ ಮಳೆ, ಹಿಮಪಾತದ ಎಚ್ಚರಿಕೆ ನೀಡಿದ ಉತ್ತರಾಖಂಡ ಸರ್ಕಾರ
ಕೇದಾರನಾಥ ದೇವಾಲಯ
ನಯನಾ ರಾಜೀವ್
|

Updated on: Apr 23, 2023 | 3:50 PM

Share

ಕಳೆದ ಕೆಲವು ದಿನಗಳಿಂದ ಕೇದಾರನಾಥದಲ್ಲಿ ಮಳೆ, ಹಿಮಪಾತವಾಗುತ್ತಿದೆ ಈ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳು ಎಚ್ಚರಿಕೆವಹಿಸುವಂತೆ ಉತ್ತರಾಖಂಡ(Uttarakhand) ಸರ್ಕಾರ ಸೂಚನೆ ನೀಡಿದೆ. ಕೇದಾರನಾಥದಲ್ಲಿ ಮಧ್ಯಂತರ ಮಳೆ ಮತ್ತು ಹಿಮಪಾತವನ್ನು ಗಮನದಲ್ಲಿಟ್ಟುಕೊಂಡು, ಉತ್ತರಾಖಂಡ ಸರ್ಕಾರವು ಕೇದಾರನಾಥ ಧಾಮಕ್ಕೆ ಹೋಗುವ ಎಲ್ಲಾ ಯಾತ್ರಿಕರು ಕೇದಾರನಾಥ ಧಾಮಕ್ಕೆ ಹೋಗುವ ಮೊದಲು ಹವಾಮಾನ ಪರಿಸ್ಥಿತಿಯನ್ನು ತಿಳಿದುಕೊಳ್ಳಲು ಮತ್ತು ಸಾಕಷ್ಟು ಸಾಮಾನುಗಳನ್ನು ತೆಗೆದುಕೊಂಡು ಹೋಗುವಂತೆ ಸೂಚನೆ ನೀಡಿದೆ.

ಪ್ರಯಾಣಿಕರು ಪ್ರಯಾಣವನ್ನು ಪ್ರಾರಂಭಿಸಿದ ತಕ್ಷಣ ಅಥವಾ ಪ್ರಯಾಣದ ಸಮಯದಲ್ಲಿ ಅನಾರೋಗ್ಯದ ಸಂದರ್ಭದಲ್ಲಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬಹುದು ಮತ್ತು ವೈದ್ಯರನ್ನು ಸಂಪರ್ಕಿಸಬಹುದು. ಯಾತ್ರೆಯನ್ನು ಸುಗಮ, ಸುರಕ್ಷಿತ ಮತ್ತು ತಡೆರಹಿತವಾಗಿ ನಡೆಸಲು ರಾಜ್ಯ ಸರ್ಕಾರ ಅವಿರತವಾಗಿ ಶ್ರಮಿಸುತ್ತಿದೆ. ಪ್ರಯಾಣದ ವ್ಯವಸ್ಥೆಗಳನ್ನು ಉನ್ನತ ಮಟ್ಟದಲ್ಲಿ ನಿಯಮಿತವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ಮಾತನಾಡಿ, ಕೇದಾರನಾಥ ಧಾಮದಲ್ಲಿ ನಿನ್ನೆ ಭಾರೀ ಹಿಮಪಾತವಾಗಿತ್ತು, ಯಾತ್ರಾರ್ಥಿಗಳು ಎಚ್ಚರದಿಂದಿರಿ ಮತ್ತು ಹವಾಮಾನವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಪ್ರಾರಂಭಿಸಲು ವಿನಂತಿಸಿದ್ದಾರೆ.

ಶನಿವಾರದಂದು ಅಕ್ಷಯ ತೃತೀಯ ಶುಭ ಸಂದರ್ಭದಲ್ಲಿ ಗಂಗೋತ್ರಿ-ಯಮುನೋತ್ರಿಯ ಬಾಗಿಲು ತೆರೆದ ನಂತರ, ಚಾರ್ ಧಾಮ್‌ನ ಯಾತ್ರೆ ಶುರುವಾಗಿದೆ. ಈ ಬಾರಿ ಚಾರ್ ಧಾಮ್ ಯಾತ್ರೆಯನ್ನು ಸುಗಮ ಹಾಗೂ ಭಕ್ತರಿಗೆ ಸುರಕ್ಷಿತವಾಗಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಯಾತ್ರಾರ್ಥಿಗಳು ಯಾತ್ರೆಯ ಮಾರ್ಗದಲ್ಲಿ ಅತ್ಯುತ್ತಮ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ.

ಮತ್ತಷ್ಟು ಓದಿ: Char Dham Yatra: ಕೇದಾರನಾಥ ಧಾಮ ಹಿಂದೂ ಭಕ್ತರಿಗೆ ಏಪ್ರಿಲ್ 25 ರಂದು ತೆರೆಯಲಿದೆ; ಹೆಲಿಕಾಪ್ಟರ್ ಸವಾರಿ ಲಭ್ಯ

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಆರೋಗ್ಯ ಸಚಿವ ಡಾ.ಧನ್ ಸಿಂಗ್ ರಾವತ್ ಅವರ ಸೂಚನೆ ಮೇರೆಗೆ ಆರೋಗ್ಯ ಕಾರ್ಯದರ್ಶಿ ಡಾ.ಆರ್.ಕೆ. ರಾಜೇಶ್ ಕುಮಾರ್ ಅವರು ಚಾರ್ ಧಾಮ್ ಯಾತ್ರೆ ಮಾರ್ಗದಲ್ಲಿ ಆರೋಗ್ಯ ಸೇವೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸರಣಿಯಲ್ಲಿ ಆರೋಗ್ಯ ಕಾರ್ಯದರ್ಶಿ ಕೇದಾರನಾಥ ಧಾಮಕ್ಕೆ ಭೇಟಿ ನೀಡುತ್ತಿದ್ದಾರೆ ಮತ್ತು ವಿವಿಧ ಸ್ಥಳಗಳಲ್ಲಿ ಆರೋಗ್ಯ ಘಟಕಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಯಾತ್ರೆಗೆ ಬರುವ ಎಲ್ಲ ಯಾತ್ರಾರ್ಥಿಗಳನ್ನು ಸರ್ಕಾರ ಸ್ವಾಗತಿಸುತ್ತದೆ. ಇದೇ ವೇಳೆ 55 ವರ್ಷ ಮೇಲ್ಪಟ್ಟ ಭಕ್ತರಿಗೆ ಶುಗರ್, ಬಿಪಿ, ಹೃದ್ರೋಗದಂತಹ ಯಾವುದೇ ಕಾಯಿಲೆ ಇದ್ದಲ್ಲಿ ಮೊದಲೇ ಮಾಹಿತಿ ನೀಡಿ ಎಂದು ತಿಳಿಸಿದ್ದಾರೆ.

ಉತ್ತರಾಖಂಡದ ಚಾರ್ ಧಾಮ್ ಯಾತ್ರೆಯು ಭಾರತದ ಅತ್ಯಂತ ಜನಪ್ರಿಯ ಹಿಂದೂ ಯಾತ್ರೆಗಳಲ್ಲಿ ಒಂದಾಗಿದೆ. ಈ ಯಾತ್ರೆಯಲ್ಲಿ ಹಿಮಾಲಯದ ಎತ್ತರದಲ್ಲಿರುವ ಬದರಿನಾಥ, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ಎಂಬ ನಾಲ್ಕು ಪವಿತ್ರ ಸ್ಥಳಗಳಿಗೆ ಪ್ರಯಾಣಬೆಳೆಸಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!