AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Avalanche: ಉತ್ತರಾಖಂಡದಲ್ಲಿ ಹಿಮಪಾತದ ಸ್ಥಳದಲ್ಲಿ ಇಂದು 7 ಮೃತದೇಹ ಪತ್ತೆ; ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆ

ದುರಂತ ನಡೆದ ಸ್ಥಳದಿಂದ ಇಂದು ಇನ್ನೂ 7 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಉತ್ತರಕಾಶಿಯ ಹಿಮಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

Uttarakhand Avalanche: ಉತ್ತರಾಖಂಡದಲ್ಲಿ ಹಿಮಪಾತದ ಸ್ಥಳದಲ್ಲಿ ಇಂದು 7 ಮೃತದೇಹ ಪತ್ತೆ; ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆ
ಉತ್ತರಾಖಂಡದಲ್ಲಿ ಹಿಮಪಾತ
TV9 Web
| Edited By: |

Updated on: Oct 07, 2022 | 5:52 PM

Share

ಡೆಹ್ರಾಡೂನ್: ಉತ್ತರಾಖಂಡದ (Uttarakhand) ದ್ರೌಪದಿ ಕಾ ದಂಡಾ ಶಿಖರದಲ್ಲಿ ಭಾರೀ ಹಿಮಪಾತ ಸಂಭವಿಸಿ 3 ದಿನಗಳು ಕಳೆದಿವೆ. ಈ ಹಿಮಪಾತದಲ್ಲಿ 20ಕ್ಕೂ ಹೆಚ್ಚು ಪರ್ವತಾರೋಹಿಗಳು ಹಿಮದಲ್ಲಿ ಸಿಲುಕಿದ್ದರು. ಅವರ ಶೋಧ ಕಾರ್ಯಾಚರಣೆಗೆ ಸಹಾಯ ಮಾಡಲು ಭಾರತೀಯ ವಾಯುಪಡೆಯ (IAF) ಎರಡು ಹೆಲಿಕಾಪ್ಟರ್‌ಗಳನ್ನು ನಿಯೋಜನೆ ಮಾಡಲಾಗಿತ್ತು. ದುರಂತ ನಡೆದ ಸ್ಥಳದಿಂದ ಇಂದು ಇನ್ನೂ 7 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಉತ್ತರಕಾಶಿಯ ಹಿಮಕುಸಿತದಿಂದ (Uttarakashi Avalanche) ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ ಎಂದು ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ತಿಳಿಸಿದೆ.

NIMನಿಂದ ಪರ್ವತಾರೋಹಣ ತರಬೇತುದಾರರು ಮತ್ತು ಬೋಧಕರ 41 ಸದಸ್ಯರ ತಂಡಕ್ಕೆ ಹಿಮಪಾತವು ಅಪ್ಪಳಿಸಿ 3 ದಿನಗಳಾಗಿವೆ. ಉತ್ತರಕಾಶಿಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಗುರುವಾರ 15 ಶವಗಳನ್ನು ಹೊರತೆಗೆಯಲಾಗಿತ್ತು. ಈ ದುರಂತದಲ್ಲಿ ಇನ್ನೂ 7 ಜನರು ನಾಪತ್ತೆಯಾಗಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಎನ್ಐಎಂ ಹೇಳಿಕೆ ತಿಳಿಸಿದೆ. ನಾಪತ್ತೆಯಾಗಿರುವ ಉಳಿದ ತರಬೇತಿ ಪರ್ವತಾರೋಹಿಗಳು ಮತ್ತು ಬೋಧಕರಿಗೆ ಹುಡುಕಾಟ ನಡೆಯುತ್ತಿದೆ. ದ್ರೌಪದಿ ಕಾ ದಂಡ ಶಿಖರದಲ್ಲಿ ಕೆಟ್ಟ ಹವಾಮಾನವಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ದೇವೇಂದ್ರ ಪಟ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದ ಬಿಲಾಸ್​​ಪುರದಲ್ಲಿರುವ ಏಮ್ಸ್ ಜೀವ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ: ಮೋದಿ

ಕಳೆದ ಮಂಗಳವಾರ ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ತಂಡವು ದ್ರೌಪದಿ ಕಾ ದಂಡ II ಶಿಖರವನ್ನು ಏರಿ ಹಿಂದಿರುಗುತ್ತಿದ್ದಾಗ 17,000 ಅಡಿ ಎತ್ತರದಲ್ಲಿ ಹಿಮಕುಸಿತ ಸಂಭವಿಸಿತ್ತು. ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿನ ಹಿಮಪಾತ ದುರಂತಕ್ಕೆ ಸಂಬಂಧಿಸಿದಂತೆ ಕಳೆದ 4 ದಿನಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇಲ್ಲಿಯವರೆಗೆ ಒಟ್ಟಾರೆ 26 ಜನ ಪರ್ವತಾರೋಹಿಗಳ ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಉಳಿದವರಿಗಾಗಿ ರಕ್ಷಣಾ ಕಾರ್ಯ ನಡೆಯುತ್ತಿದೆ.

ಉತ್ತರಕಾಶಿ ಜಿಲ್ಲೆಯ ದ್ರೌಪದಿಯ ದಂಡ-2 ಪ್ರದೇಶಕ್ಕೆ ಅಕ್ಟೋಬರ್​ 4ರಂದು ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡ ತೆರಳಿತ್ತು. ಈ ವೇಳೆ, ಹಿಮಕುಸಿತ ಉಂಟಾಗಿ ಪರ್ವತಾರೋಹಿಗಳು ಸಿಲುಕಿದ್ದರು. ಮೊದಲ ದಿನವೇ 10 ಜನರ ಮೃತಪಟ್ಟಿದ್ದರು. ಆದರೆ, ಪ್ರತಿಕೂಲ ಹವಾಮಾನ ಹಾಗೂ ಹಿಮಪಾತದ ಬಿರುಕುಗಳಲ್ಲಿ ಪರ್ವತಾರೋಹಿಗಳು ಸಿಲುಕಿರುವ ಕಾರಣ ರಕ್ಷಣಾ ಕಾರ್ಯಕ್ಕೆ ತೊಂದರೆ ಉಂಟಾಗಿತ್ತು.

ಇದನ್ನೂ ಓದಿ: Breaking News ಉತ್ತರಾಖಂಡ್​ನಲ್ಲಿ ಹಿಮಕುಸಿತ; 10 ಮಂದಿ ಸಾವು, 8 ಮಂದಿಯ ರಕ್ಷಣೆ

ಗುರುವಾರದವರೆಗೆ ಒಟ್ಟು 16 ಶವಗಳನ್ನು ಹೊರತೆಗೆಯಲಾಗಿತ್ತು. ಇದರಲ್ಲಿ ಇಬ್ಬರು ತರಬೇತುದಾರರು ಮತ್ತು 14 ಪ್ರಶಿಕ್ಷಣಾರ್ಥಿಗಳು ಸೇರಿದ್ದರು. ಇಂದು ಇನ್ನೂ 7 ಪರ್ವತಾರೋಹಿಗಳ ಮೃತದೇಹಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟಾರೆ ಒಟ್ಟಾರೆ ಸಾವಿನ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಈ ಸ್ಥಳದಲ್ಲಿ ರಕ್ಷಣಾ ಕಾರ್ಯಕ್ಕೆ 30 ಜನರ ತಂಡವನ್ನು ನಿಯೋಜಿಸಲಾಗಿದೆ. ಐಟಿಬಿಪಿ, ನೆಹರು ಪರ್ವತಾರೋಹಣ ಸಂಸ್ಥೆ, ವಾಯುಸೇನೆ, ಸೇನೆ, ಎಸ್‌ಡಿಆರ್‌ಎಫ್ ಹೀಗೆ ವಿವಿಧ ತಂಡಗಳ ಒಟ್ಟು 30 ಜನ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ