Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಬಸ್, 36 ಮಂದಿ ಸಾವು, ಕೇಂದ್ರದಿಂದ ಪರಿಹಾರ

ಬಸ್​ ಕಂದಕಕ್ಕೆ ಉರುಳಿ ಹಲವು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಪೌರಿ-ಅಲ್ಮೋರಾ ಗಡಿಯಲ್ಲಿರುವ ರಾಮನಗರದ ಉತ್ತರಾಖಂಡದ ಕುಪಿ ಬಳಿ ಸೋಮವಾರ ಗರ್ವಾಲ್ ಮೋಟಾರ್ಸ್ ಬಸ್ ಕಂದಕಕ್ಕೆ ಬಿದ್ದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. TOI ಪ್ರಕಾರ, ಇದು 42 ಆಸನಗಳ ಬಸ್ ಆದರೆ ಅಪಘಾತದ ಸಮಯದಲ್ಲಿ 30 ಪ್ರಯಾಣಿಕರು ವಾಹನದಲ್ಲಿದ್ದರು.

Breaking: ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಬಸ್, 36 ಮಂದಿ ಸಾವು, ಕೇಂದ್ರದಿಂದ ಪರಿಹಾರ
ಬಸ್
Follow us
ನಯನಾ ರಾಜೀವ್
|

Updated on:Nov 04, 2024 | 2:26 PM

ಬಸ್​ ಕಂದಕಕ್ಕೆ ಉರುಳಿ ಹಲವು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಪೌರಿ-ಅಲ್ಮೋರಾ ಗಡಿಯಲ್ಲಿರುವ ರಾಮನಗರದ ಉತ್ತರಾಖಂಡದ ಕುಪಿ ಬಳಿ ಸೋಮವಾರ ಗರ್ವಾಲ್ ಮೋಟಾರ್ಸ್ ಬಸ್ ಕಂದಕಕ್ಕೆ ಬಿದ್ದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಟೈಮ್ಸ್​ ಆಫ್ ಇಂಡಿಯಾ ವರದಿ  ಪ್ರಕಾರ, ಇದು 42 ಆಸನಗಳ ಬಸ್ ಆದರೆ ಅಪಘಾತದ ಸಮಯದಲ್ಲಿ 30 ಕ್ಕೂ ಅಧಿಕ ಪ್ರಯಾಣಿಕರು ವಾಹನದಲ್ಲಿದ್ದರು.

ಈ ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಬಸ್ ಗರ್ವಾಲ್ ಮೋಟರ್ ಓನರ್ಸ್ ಯೂನಿಯನ್ ಲಿಮಿಟೆಡ್‌ಗೆ ಸೇರಿದೆ ಎಂದು ಹೇಳಲಾಗಿದೆ. ಬಸ್ ನೈನಿಕಂಡ ಬ್ಲಾಕ್‌ನ ಕಿನಾಥ್‌ನಿಂದ ರಾಮನಗರಕ್ಕೆ ಹೋಗುತ್ತಿತ್ತು. ಕೆಲವರು ಬಸ್‌ನಿಂದ ಕೆಳಗೆ ಬಿದ್ದ ತಕ್ಷಣ ದಾರಿಯಲ್ಲಿ ಹೋಗುತ್ತಿದ್ದವರನ್ನು ಸಹಾಯಕ್ಕಾಗಿ ಕರೆದಿದ್ದಾರೆ. ಇದಾದ ನಂತರ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡವೂ ಸ್ಥಳಕ್ಕೆ ತೆರಳಿದೆ. ಅಲ್ಮೋರಾ ಎಸ್ಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಬಸ್ಸಿನಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಇದಲ್ಲದೇ ನೈನಿತಾಲ್‌ನಿಂದ ಕೆಲವು ಪೊಲೀಸ್ ಪಡೆಗಳು ಕೂಡ ಸ್ಥಳಕ್ಕೆ ತೆರಳಿವೆ.

ಕೇಂದ್ರ ಸರ್ಕಾರವು ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂ. ನೀಡುವುದಾಗಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:35 am, Mon, 4 November 24

ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ