AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಬಸ್, 36 ಮಂದಿ ಸಾವು, ಕೇಂದ್ರದಿಂದ ಪರಿಹಾರ

ಬಸ್​ ಕಂದಕಕ್ಕೆ ಉರುಳಿ ಹಲವು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಪೌರಿ-ಅಲ್ಮೋರಾ ಗಡಿಯಲ್ಲಿರುವ ರಾಮನಗರದ ಉತ್ತರಾಖಂಡದ ಕುಪಿ ಬಳಿ ಸೋಮವಾರ ಗರ್ವಾಲ್ ಮೋಟಾರ್ಸ್ ಬಸ್ ಕಂದಕಕ್ಕೆ ಬಿದ್ದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. TOI ಪ್ರಕಾರ, ಇದು 42 ಆಸನಗಳ ಬಸ್ ಆದರೆ ಅಪಘಾತದ ಸಮಯದಲ್ಲಿ 30 ಪ್ರಯಾಣಿಕರು ವಾಹನದಲ್ಲಿದ್ದರು.

Breaking: ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಬಸ್, 36 ಮಂದಿ ಸಾವು, ಕೇಂದ್ರದಿಂದ ಪರಿಹಾರ
ಬಸ್
ನಯನಾ ರಾಜೀವ್
|

Updated on:Nov 04, 2024 | 2:26 PM

Share

ಬಸ್​ ಕಂದಕಕ್ಕೆ ಉರುಳಿ ಹಲವು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಪೌರಿ-ಅಲ್ಮೋರಾ ಗಡಿಯಲ್ಲಿರುವ ರಾಮನಗರದ ಉತ್ತರಾಖಂಡದ ಕುಪಿ ಬಳಿ ಸೋಮವಾರ ಗರ್ವಾಲ್ ಮೋಟಾರ್ಸ್ ಬಸ್ ಕಂದಕಕ್ಕೆ ಬಿದ್ದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಟೈಮ್ಸ್​ ಆಫ್ ಇಂಡಿಯಾ ವರದಿ  ಪ್ರಕಾರ, ಇದು 42 ಆಸನಗಳ ಬಸ್ ಆದರೆ ಅಪಘಾತದ ಸಮಯದಲ್ಲಿ 30 ಕ್ಕೂ ಅಧಿಕ ಪ್ರಯಾಣಿಕರು ವಾಹನದಲ್ಲಿದ್ದರು.

ಈ ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಬಸ್ ಗರ್ವಾಲ್ ಮೋಟರ್ ಓನರ್ಸ್ ಯೂನಿಯನ್ ಲಿಮಿಟೆಡ್‌ಗೆ ಸೇರಿದೆ ಎಂದು ಹೇಳಲಾಗಿದೆ. ಬಸ್ ನೈನಿಕಂಡ ಬ್ಲಾಕ್‌ನ ಕಿನಾಥ್‌ನಿಂದ ರಾಮನಗರಕ್ಕೆ ಹೋಗುತ್ತಿತ್ತು. ಕೆಲವರು ಬಸ್‌ನಿಂದ ಕೆಳಗೆ ಬಿದ್ದ ತಕ್ಷಣ ದಾರಿಯಲ್ಲಿ ಹೋಗುತ್ತಿದ್ದವರನ್ನು ಸಹಾಯಕ್ಕಾಗಿ ಕರೆದಿದ್ದಾರೆ. ಇದಾದ ನಂತರ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡವೂ ಸ್ಥಳಕ್ಕೆ ತೆರಳಿದೆ. ಅಲ್ಮೋರಾ ಎಸ್ಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಬಸ್ಸಿನಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಇದಲ್ಲದೇ ನೈನಿತಾಲ್‌ನಿಂದ ಕೆಲವು ಪೊಲೀಸ್ ಪಡೆಗಳು ಕೂಡ ಸ್ಥಳಕ್ಕೆ ತೆರಳಿವೆ.

ಕೇಂದ್ರ ಸರ್ಕಾರವು ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂ. ನೀಡುವುದಾಗಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:35 am, Mon, 4 November 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​