AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uniform Civil Code: ಜಾತಿ, ಧರ್ಮ, ಪ್ರಾಂತ್ಯ ಬೇಧವಿಲ್ಲ, ಎಲ್ಲರಿಗೂ ಒಂದೇ ಕಾನೂನು, ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಏಕರೂಪ ನಾಗರಿಕ ಸಂಹಿತೆ(Uniform Civil Code) ಜಾರಿ ನಿಟ್ಟಿನಲ್ಲಿ ಉತ್ತರಾಖಂಡ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸಚಿವ ಸಂಪುಟವು ಇಂದು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡನೆ ಮಾಡಿದೆ. ಈವರೆಗೂ ಬೇರೆ ಬೇರೆ ಧರ್ಮಗಳು ಆಯಾ ವೈಯಕ್ತಿಕ ಕಾನೂನು ಕ್ರಮಗಳನ್ನು ಅನುಸರಿಸುತ್ತಿದ್ದರು, ಇದು ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಇನ್ನು ಮುಂದೆ ಎಲ್ಲಾ ದರ್ಮಗಳಿಗೆ ಒಂದೇ ಕಾನೂನು ಅನ್ವಯವಾಗಲಿದೆ.

Uniform Civil Code: ಜಾತಿ, ಧರ್ಮ, ಪ್ರಾಂತ್ಯ ಬೇಧವಿಲ್ಲ, ಎಲ್ಲರಿಗೂ ಒಂದೇ ಕಾನೂನು, ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ
ಪುಷ್ಕರ್ ಧಾಮಿ
ನಯನಾ ರಾಜೀವ್
|

Updated on:Feb 06, 2024 | 11:51 AM

Share

ಏಕರೂಪ ನಾಗರಿಕ ಸಂಹಿತೆ(Uniform Civil Code) ಜಾರಿ ನಿಟ್ಟಿನಲ್ಲಿ ಉತ್ತರಾಖಂಡ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸಚಿವ ಸಂಪುಟವು ಇಂದು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡನೆ ಮಾಡಿದೆ. ಈ ಏಕರೂಪ ನಾಗರಿಕ ಸಂಹಿತೆಯಲ್ಲಿ ಯಾವುದೇ ಜಾತಿ, ಧರ್ಮ, ಪ್ರಾಂತ್ಯವೆಂಬ ಬೇಧವಿರುವುದಿಲ್ಲ, ದೇಶದ ಸರ್ವರಿಗೂ ಒಂದೇ ಕಾನೂನು ಅನ್ವಯಿಸುತ್ತದೆ. ಇದರ ಅಡಿಯಲ್ಲಿ ವಿವಾಹ, ವಿಚ್ಛೇದನ, ಉತ್ತರಾಧಿಕಾರ, ದತ್ತು ಸ್ವೀಕಾರದ ನಿಯಮಗಳು ಎಲ್ಲಾ ಧಾರ್ಮಿಕ ಸಮುದಾಯಗಳಿಗೆ ಒಂದೇ ಆಗಿರುತ್ತದೆ.

ಈ ಮಸೂದೆಯಿಂದ ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರೈಸ್ತ ಹೀಗೆ ವಿವಿಧ ಧರ್ಮಗಳಿಗೆ ಆ ಧರ್ಮದ ವೈಯಕ್ತಿಕ ಕಾನೂನುಗಳಿದ್ದು, ಅವೆಲ್ಲವೂ ಏಕರೂಪ ಕಾಯಿದೆ ಅಡಿಯಲ್ಲಿಯೇ ಇನ್ನುಮುಂದೆ ಬರಲಿವೆ. ಕಳೆದ ಭಾನುವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸಚಿವ ಸಂಪುಟವು ನಡೆಸಿದ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು. ಹಾಗೆಯೇ ಸಚಿವ ಸಂಪುಟ ಮಸೂದೆ ಮಂಡನೆಗೆ ಒಪ್ಪಿಗೆಯನ್ನೂ ನೀಡಿತ್ತು.

ಇದೀಗ ಬಿಜೆಪಿ ಆಡಳಿವಿರುವ ಉತ್ತರಾಖಂಡ ರಾಜ್ಯವು ಏಕರೂಪ ನಾಗರಿಕ ಸಂಹಿತೆಯನ್ನು ಅಳವಿಡಿಸಿಕೊಂಡ ಮೊದಲ ರಾಜ್ಯವಾಗಿದೆ. ಈ ಮಸೂದೆ ಪ್ರಕಾರ ಮಗ ಮತ್ತು ಮಗಳಿಗೆ ಸಮಾನ ಆಸ್ತಿ ಹಕ್ಕು, ಕಾನೂನು ಬದ್ಧ ಮತ್ತು ನ್ಯಾಯಸಮ್ಮತವಲ್ಲದ ಮಕ್ಕಳ ನಡುವಿನ ವ್ಯತ್ಯಾಸವನ್ನು ತೊಡೆದುಹಾಕುವುದು, ದತ್ತು ಪಡೆದ ಮತ್ತು ಜೈವಿಕವಾಗಿ ಜನಿಸಿದ ಮಕ್ಕಳನ್ನು ಸೇರಿಸುವುದು ಮತ್ತು ಸಾವಿನ ನಂತರ ಸಮಾನ ಆಸ್ತಿ ಹಕ್ಕುಗಳನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನುಹೊಂದಲಾಗಿದೆ.

ಮತ್ತಷ್ಟು ಓದಿ:Uniform Civil Code: ಏಕರೂಪ ನಾಗರಿಕ ಸಂಹಿತೆ ಎಂದರೇನು? ಯಾರಿಗೆಲ್ಲಾ ಅನ್ವಯಿಸುತ್ತೆ ಇಲ್ಲಿದೆ ಮಾಹಿತಿ

ಈವರೆಗೂ ಬೇರೆ ಬೇರೆ ಧರ್ಮಗಳು ಆಯಾ ವೈಯಕ್ತಿಕ ಕಾನೂನು ಕ್ರಮಗಳನ್ನು ಅನುಸರಿಸುತ್ತಿದ್ದರು, ಇದು ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಇನ್ನು ಮುಂದೆ ಎಲ್ಲಾ ದರ್ಮಗಳಿಗೆ ಒಂದೇ ಕಾನೂನು ಅನ್ವಯವಾಗಲಿದೆ.

ಈ ಹಿಂದೆ ಕರಡಿನಲ್ಲಿ ಏನಿತ್ತು ಸಮಾಜದ ಬೇರೆ ಬೇರೆ ವರ್ಗಗಳು, ಧರ್ಮಗಳ ಜನರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಿ ಈ ಕರಡನ್ನು ಸಿದ್ಧಪಡಿಸಲಾಗಿದೆ. ವಿವಾಹ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಎಲ್ಲಾ ಧರ್ಮಗಳಿಗೂ ಅನ್ವಯವಾಗುವ ಸಮಾನ ಕಾನೂನನ್ನು ರೂಪಿಸುವ ಕುರಿತು ಕರಡಿನಲ್ಲಿ ಉಲ್ಲೇಖಿಸಲಾಗಿತ್ತು ಎಂದು ತಿಳಿದು ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:41 am, Tue, 6 February 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!