AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್ ರಾವತ್​ಗೆ ಕೊರೊನಾ ಸೋಂಕು; ದೆಹಲಿ ಭೇಟಿ ರದ್ದು

ಉತ್ತರಾಖಂಡದಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮಗಳನ್ನು ಪರಿಶೀಲಿಸಲು, ರಾಷ್ಟ್ರೀಯ ರೋಗ ನಿಯಂತ್ರಣಾ ಕೇಂದ್ರ (NCDC)ದ ನಿರ್ದೇಶಕರ ನೇತೃತ್ವದ ತಂಡ ಮಾರ್ಚ್​ 16-17ರಂದು ಇಲ್ಲಿಗೆ ಭೇಟಿ ನೀಡಿತ್ತು.

ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್ ರಾವತ್​ಗೆ ಕೊರೊನಾ ಸೋಂಕು; ದೆಹಲಿ ಭೇಟಿ ರದ್ದು
ತೀರಥ್​ ಸಿಂಗ್ ರಾವತ್​
Lakshmi Hegde
|

Updated on: Mar 22, 2021 | 1:36 PM

Share

ಡೆಹ್ರಾಡೂನ್​: ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್​ ರಾವತ್​ ಇತ್ತೀಚೆಗೆ ಭರ್ಜರಿ ಸುದ್ದಿಯಲ್ಲಿದ್ದಾರೆ. ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದಾಗಿನಿಂದ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬರುತ್ತಿರುವ ತೀರಥ್​ ಅವರೀಗ ಕೊರೊನಾ ಸೋಂಕಿತರಾಗಿದ್ದಾರೆ. ಇಂದು ಟ್ವೀಟ್ ಮಾಡಿರುವ ತೀರಥ್ ಸಿಂಗ್​, ನನಗೆ ಕೊವಿಡ್​-19 ಸೋಂಕು ತಗುಲಿದೆ. ನಾನು ಸದ್ಯಕ್ಕೆ ಆರೋಗ್ಯವಾಗಿದ್ದೇನೆ. ಯಾವುದೇ ಸಮಸ್ಯೆ ಕಾಣಿಸುತ್ತಿಲ್ಲ. ನಾನು ಐಸೋಲೇಟ್ ಆಗಿದ್ದು, ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಮುನ್ನೆಚ್ಚರಿಕಾ ಕ್ರಮವಾಗಿ ಟೆಸ್ಟ್ ಮಾಡಿಸಿಕೊಳ್ಳಿ, ಎಚ್ಚರಿಕೆಯಿಂದ ಇರಿ ಎಂದು ಹೇಳಿದ್ದಾರೆ.

ತೀರಥ್​ ಸಿಂಗ್ ರಾವತ್​ ಇಂದು ದೆಹಲಿಗೆ ತೆರಳಬೇಕಿತ್ತು. ನಾಲ್ಕು ದಿನ ದೆಹಲಿಯಲ್ಲೇ ಉಳಿಯಲಿದ್ದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಷಾ ಮತ್ತಿತರ ಸಂಪುಟ ಸಚಿವರನ್ನು ಭೇಟಿಯಾಗಲಿದ್ದರು. ಆದರೆ ಸದ್ಯ ಕೊವಿಡ್​ ಸೋಂಕಿತರಾಗಿರುವುದರಿಂದ ಐಸೋಲೇಟ್ ಆಗಿದ್ದಾರೆ.

ಇನ್ನು ಕೊರೊನಾ ಎರಡನೇ ಅಲೆ ನಿಧಾನವಾಗಿ ಎಲ್ಲ ರಾಜ್ಯಗಳಿಗೂ ವ್ಯಾಪಿಸುತ್ತಿದೆ. ಉತ್ತರಾಖಂಡದಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಗೇ ಈ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮಗಳನ್ನು ಪರಿಶೀಲಿಸಲು, ರಾಷ್ಟ್ರೀಯ ರೋಗ ನಿಯಂತ್ರಣಾ ಕೇಂದ್ರ (NCDC)ದ ನಿರ್ದೇಶಕರ ನೇತೃತ್ವದ ತಂಡ ಮಾರ್ಚ್​ 16-17ರಂದು ಇಲ್ಲಿಗೆ ಭೇಟಿ ನೀಡಿತ್ತು. ಈ ತಂಡ ನೀಡಿದ ವರದಿಯನ್ನು ಪರಿಶೀಲನೆ ಮಾಡಿದ ಕೇಂದ್ರ ಸರ್ಕಾರ, ಉತ್ತರಾಖಂಡ ರಾಜ್ಯ ಸರ್ಕಾರಕ್ಕೆ ಪತ್ರವನ್ನೂ ಬರೆದಿದೆ. ಕುಂಭ ಮೇಳದ ಸಂದರ್ಭದಲ್ಲಿ ಕೊರೊನಾ ಸೋಂಕಿನ ಪ್ರಸರಣ ಇನ್ನಷ್ಟು ಹೆಚ್ಚುವ ಸಾಧ್ಯತೆ ಇರುತ್ತದೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸೂಚಿಸಿದೆ.

ಇದನ್ನೂ ಓದಿ: ಹೆಚ್ಚು ಪ್ರಮಾಣದಲ್ಲಿ ಪಡಿತರ ಪಡೆಯಲು 20 ಮಕ್ಕಳನ್ನು ಯಾಕೆ ಹೆರಬಾರದು: ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್  ಪ್ರಶ್ನೆ

ಭಾರತದಲ್ಲಿ ಅಮೆರಿಕ 200 ವರ್ಷ ಆಳ್ವಿಕೆ ನಡೆಸಿತ್ತು: ಉತ್ತರಾಖಂಡ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್

Follow Us
Lakshmi Hegde
Lakshmi Hegde
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ