AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್ ರಾವತ್​ಗೆ ಕೊರೊನಾ ಸೋಂಕು; ದೆಹಲಿ ಭೇಟಿ ರದ್ದು

ಉತ್ತರಾಖಂಡದಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮಗಳನ್ನು ಪರಿಶೀಲಿಸಲು, ರಾಷ್ಟ್ರೀಯ ರೋಗ ನಿಯಂತ್ರಣಾ ಕೇಂದ್ರ (NCDC)ದ ನಿರ್ದೇಶಕರ ನೇತೃತ್ವದ ತಂಡ ಮಾರ್ಚ್​ 16-17ರಂದು ಇಲ್ಲಿಗೆ ಭೇಟಿ ನೀಡಿತ್ತು.

ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್ ರಾವತ್​ಗೆ ಕೊರೊನಾ ಸೋಂಕು; ದೆಹಲಿ ಭೇಟಿ ರದ್ದು
ತೀರಥ್​ ಸಿಂಗ್ ರಾವತ್​
Lakshmi Hegde
|

Updated on: Mar 22, 2021 | 1:36 PM

Share

ಡೆಹ್ರಾಡೂನ್​: ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್​ ರಾವತ್​ ಇತ್ತೀಚೆಗೆ ಭರ್ಜರಿ ಸುದ್ದಿಯಲ್ಲಿದ್ದಾರೆ. ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದಾಗಿನಿಂದ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬರುತ್ತಿರುವ ತೀರಥ್​ ಅವರೀಗ ಕೊರೊನಾ ಸೋಂಕಿತರಾಗಿದ್ದಾರೆ. ಇಂದು ಟ್ವೀಟ್ ಮಾಡಿರುವ ತೀರಥ್ ಸಿಂಗ್​, ನನಗೆ ಕೊವಿಡ್​-19 ಸೋಂಕು ತಗುಲಿದೆ. ನಾನು ಸದ್ಯಕ್ಕೆ ಆರೋಗ್ಯವಾಗಿದ್ದೇನೆ. ಯಾವುದೇ ಸಮಸ್ಯೆ ಕಾಣಿಸುತ್ತಿಲ್ಲ. ನಾನು ಐಸೋಲೇಟ್ ಆಗಿದ್ದು, ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಮುನ್ನೆಚ್ಚರಿಕಾ ಕ್ರಮವಾಗಿ ಟೆಸ್ಟ್ ಮಾಡಿಸಿಕೊಳ್ಳಿ, ಎಚ್ಚರಿಕೆಯಿಂದ ಇರಿ ಎಂದು ಹೇಳಿದ್ದಾರೆ.

ತೀರಥ್​ ಸಿಂಗ್ ರಾವತ್​ ಇಂದು ದೆಹಲಿಗೆ ತೆರಳಬೇಕಿತ್ತು. ನಾಲ್ಕು ದಿನ ದೆಹಲಿಯಲ್ಲೇ ಉಳಿಯಲಿದ್ದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಷಾ ಮತ್ತಿತರ ಸಂಪುಟ ಸಚಿವರನ್ನು ಭೇಟಿಯಾಗಲಿದ್ದರು. ಆದರೆ ಸದ್ಯ ಕೊವಿಡ್​ ಸೋಂಕಿತರಾಗಿರುವುದರಿಂದ ಐಸೋಲೇಟ್ ಆಗಿದ್ದಾರೆ.

ಇನ್ನು ಕೊರೊನಾ ಎರಡನೇ ಅಲೆ ನಿಧಾನವಾಗಿ ಎಲ್ಲ ರಾಜ್ಯಗಳಿಗೂ ವ್ಯಾಪಿಸುತ್ತಿದೆ. ಉತ್ತರಾಖಂಡದಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಗೇ ಈ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮಗಳನ್ನು ಪರಿಶೀಲಿಸಲು, ರಾಷ್ಟ್ರೀಯ ರೋಗ ನಿಯಂತ್ರಣಾ ಕೇಂದ್ರ (NCDC)ದ ನಿರ್ದೇಶಕರ ನೇತೃತ್ವದ ತಂಡ ಮಾರ್ಚ್​ 16-17ರಂದು ಇಲ್ಲಿಗೆ ಭೇಟಿ ನೀಡಿತ್ತು. ಈ ತಂಡ ನೀಡಿದ ವರದಿಯನ್ನು ಪರಿಶೀಲನೆ ಮಾಡಿದ ಕೇಂದ್ರ ಸರ್ಕಾರ, ಉತ್ತರಾಖಂಡ ರಾಜ್ಯ ಸರ್ಕಾರಕ್ಕೆ ಪತ್ರವನ್ನೂ ಬರೆದಿದೆ. ಕುಂಭ ಮೇಳದ ಸಂದರ್ಭದಲ್ಲಿ ಕೊರೊನಾ ಸೋಂಕಿನ ಪ್ರಸರಣ ಇನ್ನಷ್ಟು ಹೆಚ್ಚುವ ಸಾಧ್ಯತೆ ಇರುತ್ತದೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸೂಚಿಸಿದೆ.

ಇದನ್ನೂ ಓದಿ: ಹೆಚ್ಚು ಪ್ರಮಾಣದಲ್ಲಿ ಪಡಿತರ ಪಡೆಯಲು 20 ಮಕ್ಕಳನ್ನು ಯಾಕೆ ಹೆರಬಾರದು: ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್  ಪ್ರಶ್ನೆ

ಭಾರತದಲ್ಲಿ ಅಮೆರಿಕ 200 ವರ್ಷ ಆಳ್ವಿಕೆ ನಡೆಸಿತ್ತು: ಉತ್ತರಾಖಂಡ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್

Follow Us
Lakshmi Hegde
Lakshmi Hegde
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ