AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ ಮತ್ತೆ ಭಾರೀ ಮೇಘಸ್ಫೋಟ: ಹತ್ತಾರು ಜನ ನಾಪತ್ತೆ, ನೂರಾರು ಮನೆಗಳಿಗೆ ಹಾನಿ

ಉತ್ತರಾಖಂಡದ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಶುಕ್ರವಾರ ರಾತ್ರಿ ಭೀಕರ ಮೇಘಸ್ಫೋಟ ಸಂಭವಿಸಿದೆ. ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದ ಒಬ್ಬ ಯುವತಿ ಮೃತಪಟ್ಟಿದ್ದು, ಹಲವಾರು ಜನ ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ರಸ್ತೆಗಳಿಗೆ ಹಾನಿಯಾಗಿರುವುದರಿಂದ ಸಂಚಾರ ಅಸ್ತವ್ಯಸ್ತವಾಗಿದೆ. ನೂರಾರು ಮನೆಗಳು ಹಾಗೂ ವಾಹನಗಳು ಹಾನಿಗೊಳಗಾಗಿವೆ.

ಉತ್ತರಾಖಂಡದಲ್ಲಿ ಮತ್ತೆ ಭಾರೀ ಮೇಘಸ್ಫೋಟ: ಹತ್ತಾರು ಜನ ನಾಪತ್ತೆ, ನೂರಾರು ಮನೆಗಳಿಗೆ ಹಾನಿ
ಉತ್ತರಾಖಂಡದಲ್ಲಿ ಮತ್ತೆ ಭಾರೀ ಮೇಘಸ್ಫೋಟImage Credit source: Uttarakhand Police
Ganapathi Sharma
|

Updated on: Aug 23, 2025 | 10:46 AM

Share

ಡೆಹ್ರಾಡೂನ್, ಆಗಸ್ಟ್ 23: ಕೆಲವು ದಿನಗಳ ಹಿಂದಷ್ಟೇ ಭೀಕರ ಮೇಘಸ್ಫೋಟ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಉತ್ತರಾಖಂಡದಲ್ಲಿ (Uttarakhand) ಶುಕ್ರವಾರ ರಾತ್ರಿ ಮತ್ತೆ ಭಯಾನಕ ಮೇಘಸ್ಫೋಟ (Cloudburst) ಸಂಭವಿಸಿದೆ. ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಭಾರಿ ವಿನಾಶ ಸಂಭವಿಸಿದೆ. ಒಬ್ಬ ಯುವತಿ ಪ್ರವಾಹದಲ್ಲಿ ಕೊಚ್ಚಿಹೋಗಿ ಸಾವಿಗೀಡಾಗಿದ್ದು, ಹತ್ತಾರು ಜನ ಕಣ್ಮರೆಯಾಗಿದ್ದಾರೆ. ಎಸ್‌ಡಿಆರ್‌ಎಫ್ ತಂಡವು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದೆ. ಥರಾಲಿ ಹಾಗೂ ಹತ್ತಿರದ ಹಳ್ಳಿಗಳಲ್ಲಿಯೂ ಅನಾಹುತ ಸಂಭವಿಸಿದೆ.

ಉತ್ತರಾಖಂಡದಲ್ಲಿ ಶುಕ್ರವಾರ ಭಾರಿ ಮಳೆಯಾಗಿತ್ತು. ನಂತರ, ಸರಿಸುಮಾರು ಮಧ್ಯರಾತ್ರಿಯ ವೇಳೆಗೆ ಮೇಘಸ್ಫೋಟ ಸಂಭವಿಸಿ ಪ್ರವಾಹ ಪರಿಸ್ಥಿತಿ ಉಂಟಾಯಿತು. ರಾಡಿಬಾಗ್ ಮತ್ತು ಚೆಪ್ಡಾನ್‌ನಲ್ಲಿ ಅನೇಕ ವಾಹನಗಳು ಅವಶೇಷಗಳ ಅಡಿಯಲ್ಲಿ ಹೂತುಹೋಗಿವೆ. ಅನೇಕ ಅಂಗಡಿಗಳು ಹಾನಿಗೊಳಗಾಗಿವೆ. ಮಧ್ಯರಾತ್ರಿಯಲ್ಲಿ ಏಕಾಏಕಿ ಭಾರಿ ಪ್ರವಾಹ ಹಾಗೂ ಭೀಕರ ಸದ್ದು ಕೇಳಿ ಬೆಚ್ಚಿಬಿದ್ದ ಜನರು ಮನೆಗಳಿಂದ ಹೊರಬಂದಿದ್ದಾರೆ.

ಪ್ರವಾಹದ ಭೀಕರತೆ ಸಾರುವ ವಿಡಿಯೋ

ಘಟನೆಯ ಬಗ್ಗೆ ಚಮೋಲಿ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ‘ಶುಕ್ರವಾರ ರಾತ್ರಿ ಥಾಣಾ ಥರಾಲಿ ಪ್ರದೇಶದಲ್ಲಿ ಭಾರೀ ಮಳೆಯಾಗಿ ಜನಜೀವನದ ಮೇಲೆ ಪರಿಣಾಮ ಬೀರಿತು. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದ ಥಾಣಾ ಥರಾಲಿ ಪೊಲೀಸರು ರಾತ್ರಿಯೇ ಕ್ಷಿಪ್ರವಾಗಿ ಜಾಗರೂಕರಾಗಿ ಸ್ಥಳೀಯ ಜನರನ್ನು ಎಚ್ಚರಿಸಿ ಅವರನ್ನು ಅವರ ಮನೆಗಳಿಂದ ಸ್ಥಳಾಂತರಿಸಿ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ದರು’ ಎಂದು ಉಲ್ಲೇಖಿಸಿದ್ದಾರೆ.

ಉತ್ತರಾಖಂಡ ಪೊಲೀಸ್ ಮಾಹಿತಿ

ಮೇಘ ಸ್ಫೋಟದಿಂದಾಗಿ ಜನರಲ್ಲಿ ಭೀತಿ ಉಂಟಾಗಿದೆ. ಕಟ್ಟಡಗಳ ಮತ್ತು ಇತರ ಅವಶೇಷಗಳಿಂದಾಗಿ ರಸ್ತೆಗಳು ಮುಚ್ಚಿಹೋಗಿವೆ. ಥರಾಲಿ-ಗ್ವಾಲ್ಡಮ್ ರಸ್ತೆ ಮತ್ತು ಥರಾಲಿ-ಸಾಗ್ವಾರಾ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಮಿಂಗ್ಡೇರಾ ಬಳಿಯ ರಸ್ತೆಯಿಂದ ಅವಶೇಷಗಳನ್ನು ತೆಗೆದುಹಾಕಲಾಗುತ್ತಿದೆ. ಗಡಿ ರಸ್ತೆಗಳ ಸಂಘಟನೆ (BRO) ಸಮರೋಪಾದಿಯಲ್ಲಿ ಕೆಲಸದಲ್ಲಿ ತೊಡಗಿಸಿಕೊಂಡಿದೆ.

ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ; ಕ್ಷಣಾರ್ಧದಲ್ಲಿ ರೌದ್ರಾವತಾರ ತಾಳಿ ಹರಿದುಬಂತು ಭಾರೀ ಪ್ರವಾಹ

2 ವಾರಗಳ ಹಿಂದಷ್ಟೇ ಉತ್ತರಕಾಶಿಯ ಧರಾಲಿ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿ ಭಾರಿ ಪ್ರವಾಹ ಉಂಟಾಗಿತ್ತು. ಘಟನೆಯಲ್ಲಿ ನಾಲ್ಕು ಮಂದಿ ಮೃತಪಟ್ಟು ನೂರಾರು ಮಂದಿ ನಾಪತ್ತೆಯಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ