AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Flood: ಭಾರತ- ನೇಪಾಳ ಗಡಿಯಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ಓರ್ವ ಸಾವು, 30 ಮನೆಗಳು ನಾಶ

ಮೇಘಸ್ಫೋಟದಿಂದ ಧಾರ್ಚುಲ ಮಲ್ಲಿ ಮಾರುಕಟ್ಟೆಗೂ ಹಾನಿಯಾಗಿದೆ. ರಕ್ಷಣೆ ಮತ್ತು ಪರಿಹಾರ ಕಾರ್ಯಗಳು ಪ್ರಗತಿಯಲ್ಲಿವೆ. ಈ ನಡುವೆ ತಲ್ಲ ಗ್ರಾಮದಲ್ಲಿ ಜಲಾವೃತವಾಗಿತ್ತು. ಪಿಥೋರಗಢದಲ್ಲಿ ಕಾಳಿ ನದಿ ಅಪಾಯದ ಮಿತಿ ಮೀರಿದೆ.

Uttarakhand Flood: ಭಾರತ- ನೇಪಾಳ ಗಡಿಯಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ಓರ್ವ ಸಾವು, 30 ಮನೆಗಳು ನಾಶ
ಉತ್ತರಾಖಂಡದಲ್ಲಿ ಪ್ರವಾಹ
TV9 Web
| Edited By: |

Updated on:Sep 10, 2022 | 3:20 PM

Share

ಉತ್ತರಾಖಂಡ: ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ಭಾರತ (India) ಮತ್ತು ನೇಪಾಳದ (Nepal) ಗಡಿಗೆ ಸಮೀಪವಿರುವ ಲಾಸ್ಕೊ ನದಿಯಲ್ಲಿ ನಿನ್ನೆ ಮಧ್ಯರಾತ್ರಿ ಮೇಘಸ್ಫೋಟ (Cloudburst) ಸಂಭವಿಸಿದೆ. ಈ ಪ್ರವಾಹದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು 30ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ಮೋಡ ಸ್ಫೋಟದ ಘಟನೆಯಲ್ಲಿ ಸುಮಾರು 30 ಮನೆಗಳು ನಾಶವಾಗಿವೆ ಮತ್ತು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಆಶಿಶ್ ಚೌಹಾಣ್ ಎಎನ್‌ಐಗೆ ತಿಳಿಸಿದ್ದಾರೆ.

ಮೇಘಸ್ಫೋಟದಿಂದ ಧಾರ್ಚುಲ ಮಲ್ಲಿ ಮಾರುಕಟ್ಟೆಗೂ ಹಾನಿಯಾಗಿದೆ. ರಕ್ಷಣೆ ಮತ್ತು ಪರಿಹಾರ ಕಾರ್ಯಗಳು ಪ್ರಗತಿಯಲ್ಲಿವೆ. ಈ ನಡುವೆ ತಲ್ಲ ಗ್ರಾಮದಲ್ಲಿ ಜಲಾವೃತವಾಗಿತ್ತು. ಪಿಥೋರಗಢದಲ್ಲಿ ಕಾಳಿ ನದಿ ಅಪಾಯದ ಮಿತಿ ಮೀರಿದೆ. ಪ್ರವಾಹದಿಂದಾಗಿ ಹಲವು ಮನೆಗಳು ಕೊಚ್ಚಿ ಹೋಗಿದ್ದು, ಕೆಲವು ಮನೆಗಳು ತೀವ್ರವಾಗಿ ಹಾನಿಗೊಳಗಾಗಿವೆ. ಇಂದು ಬೆಳಿಗ್ಗೆ ಕಾಳಿ ನದಿಯಲ್ಲಿ ಬಲವಾದ ಪ್ರವಾಹ ಉಂಟಾಗಿ ಕಟ್ಟಡವೊಂದು ಕುಸಿದು ನೀರಿನಲ್ಲಿ ಮುಳುಗಿದೆ.

ಇದನ್ನೂ ಓದಿ: Karnataka Rain: ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್‌ಡಿಆರ್‌ಎಫ್) ತಂಡಗಳು ಸ್ಥಳದಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿವೆ. ಕಾಳಿ ನದಿಯ ಪ್ರವಾಹದಿಂದ ಉಂಟಾದ ಹಾನಿ ಭಾರತ ಮತ್ತು ನೇಪಾಳ ಎರಡೂ ಹಳ್ಳಿಗಳಲ್ಲಿ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನಂತರ ಡೆಹ್ರಾಡೂನ್‌ನ ರಾಯ್‌ಪುರದ ಸರ್ಖೆತ್ ಗ್ರಾಮದಲ್ಲಿ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಿದ್ದಾರೆ. ಮಳೆ ನೀರಿನಲ್ಲಿ ಅನೇಕ ಆಸ್ತಿಗಳು ಕೊಚ್ಚಿಕೊಂಡು ಹೋಗಿವೆ. ಮಳೆ ನೀರು ಹಲವಾರು ಕಟ್ಟಡಗಳಿಗೆ ಪ್ರವೇಶಿಸಿ ಜನರ ದೈನಂದಿನ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ.

ಇದನ್ನೂ ಓದಿ: ವೇದಾವತಿ ನದಿ ಪ್ರವಾಹದಲ್ಲಿ ಸಿಲುಕಿದ ಅರ್ಚಕ ಕುಟುಂಬ: ರಕ್ಷಣೆಗೆ ತೆರಳಿದ್ದ ಬೋಟ್ ಪಲ್ಟಿ

ಸಂತ್ರಸ್ತ ಪ್ರದೇಶಗಳಿಗೆ ತಲುಪುವಂತೆ ಎಲ್ಲಾ ಇಲಾಖೆಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಗ್ರಾಮದಲ್ಲಿ ಸಿಲುಕಿಕೊಂಡಿದ್ದ ಎಲ್ಲ ಜನರನ್ನು ರಕ್ಷಿಸಲಾಯಿತು. ಕೆಲವರು ಹತ್ತಿರದ ರೆಸಾರ್ಟ್‌ನಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಎಸ್‌ಡಿಆರ್‌ಎಫ್ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Sat, 10 September 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ