AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗದಲ್ಲಿ ಸಿಲುಕಿದ್ದವರಿಗೆ 1 ಲಕ್ಷ ರೂ. ನೆರವು ಘೋಷಿಸಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರಿಗೆ ತಲಾ 1 ಲಕ್ಷ ರೂಪಾಯಿ ಹಣಕಾಸು ನೆರವನ್ನು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗುವವರೆಗೂ ಎಲ್ಲ ರೀತಿಯ ವ್ಯವಸ್ಥೆಯನ್ನು ಸರ್ಕಾರವೇ ಮಾಡಲಿದೆ ಎಂದು ಹೇಳಿದ್ದಾರೆ.

ಸುರಂಗದಲ್ಲಿ ಸಿಲುಕಿದ್ದವರಿಗೆ 1 ಲಕ್ಷ ರೂ. ನೆರವು ಘೋಷಿಸಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಪುಷ್ಕರ್ ಸಿಂಗ್ ಧಾಮಿ
Ganapathi Sharma
|

Updated on: Nov 28, 2023 | 10:48 PM

Share

ಉತ್ತರಕಾಶಿ, ನವೆಂಬರ್ 28: ಉತ್ತರಾಖಂಡದ (Uttarakhand tunnel) ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಣೆ ಮಾಡಿದ ಬೆನ್ನಲ್ಲೇ ಎಲ್ಲ ಕಾರ್ಮಿಕರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಘೋಷಿಸಿದ್ದಾರೆ. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೇ ಕಾರ್ಮಿಕರು ಗುಣಮುಖರಾಗಿ ಮನೆಗೆ ಮರಳುವ ವರೆಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಂಪೂರ್ಣ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಉತ್ತರಕಾಶಿಯ ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿ ಕಾರ್ಮಿಕರನ್ನು ಎನ್​ಡಿಆರ್​ಎಫ್ ಸಿಬ್ಬಂದಿ 17 ದಿನಗಳ ಕಾರ್ಯಾಚರಣೆ ಬಳಿಕ ಸೋಮವಾರ ಯಶಸ್ವಿಯಾಗಿ ರಕ್ಷಣೆ ಮಾಡಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಮಧ್ಯೆ, ಕಾರ್ಮಿಕರ ರಕ್ಷಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹರ್ಷ ವ್ಯಕ್ತಪಡಿಸಿದ್ದು, ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

‘ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕ ಬಂಧುಗಳು ಸುರಕ್ಷಿತವಾಗಿ ವಾಪಸ್ ಬಂದಿರುವುದು ಸಂತಸದ ಸುದ್ದಿ. ಅವರಿಗೆ ಮತ್ತು ಅವರ ಕುಟುಂಬದವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿಯ ರಕ್ಷಣೆ: ಪ್ರಧಾನಿ ಮೋದಿ, ಸಚಿವ ನಿತಿನ್ ಗಡ್ಕರಿ ಅಭಿನಂದನೆ

ಭಾರತವನ್ನು ಕಟ್ಟುತ್ತಿರುವ ನಮ್ಮ ಕಾರ್ಮಿಕ ಬಂಧುಗಳ ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ. ಈ ಕಠಿಣ ಅಭಿಯಾನವನ್ನು ಯಶಸ್ವಿಗೊಳಿಸಿದ ಎಲ್ಲ ವೀರ ಪುರುಷರಿಗೆ ನಾನು ವಂದಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್