AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗದಲ್ಲಿ ಸಿಲುಕಿದ್ದವರಿಗೆ 1 ಲಕ್ಷ ರೂ. ನೆರವು ಘೋಷಿಸಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರಿಗೆ ತಲಾ 1 ಲಕ್ಷ ರೂಪಾಯಿ ಹಣಕಾಸು ನೆರವನ್ನು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗುವವರೆಗೂ ಎಲ್ಲ ರೀತಿಯ ವ್ಯವಸ್ಥೆಯನ್ನು ಸರ್ಕಾರವೇ ಮಾಡಲಿದೆ ಎಂದು ಹೇಳಿದ್ದಾರೆ.

ಸುರಂಗದಲ್ಲಿ ಸಿಲುಕಿದ್ದವರಿಗೆ 1 ಲಕ್ಷ ರೂ. ನೆರವು ಘೋಷಿಸಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಪುಷ್ಕರ್ ಸಿಂಗ್ ಧಾಮಿ
ಗಣಪತಿ ಶರ್ಮಾ
|

Updated on: Nov 28, 2023 | 10:48 PM

Share

ಉತ್ತರಕಾಶಿ, ನವೆಂಬರ್ 28: ಉತ್ತರಾಖಂಡದ (Uttarakhand tunnel) ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಣೆ ಮಾಡಿದ ಬೆನ್ನಲ್ಲೇ ಎಲ್ಲ ಕಾರ್ಮಿಕರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಘೋಷಿಸಿದ್ದಾರೆ. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೇ ಕಾರ್ಮಿಕರು ಗುಣಮುಖರಾಗಿ ಮನೆಗೆ ಮರಳುವ ವರೆಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಂಪೂರ್ಣ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಉತ್ತರಕಾಶಿಯ ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿ ಕಾರ್ಮಿಕರನ್ನು ಎನ್​ಡಿಆರ್​ಎಫ್ ಸಿಬ್ಬಂದಿ 17 ದಿನಗಳ ಕಾರ್ಯಾಚರಣೆ ಬಳಿಕ ಸೋಮವಾರ ಯಶಸ್ವಿಯಾಗಿ ರಕ್ಷಣೆ ಮಾಡಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಮಧ್ಯೆ, ಕಾರ್ಮಿಕರ ರಕ್ಷಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹರ್ಷ ವ್ಯಕ್ತಪಡಿಸಿದ್ದು, ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

‘ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕ ಬಂಧುಗಳು ಸುರಕ್ಷಿತವಾಗಿ ವಾಪಸ್ ಬಂದಿರುವುದು ಸಂತಸದ ಸುದ್ದಿ. ಅವರಿಗೆ ಮತ್ತು ಅವರ ಕುಟುಂಬದವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿಯ ರಕ್ಷಣೆ: ಪ್ರಧಾನಿ ಮೋದಿ, ಸಚಿವ ನಿತಿನ್ ಗಡ್ಕರಿ ಅಭಿನಂದನೆ

ಭಾರತವನ್ನು ಕಟ್ಟುತ್ತಿರುವ ನಮ್ಮ ಕಾರ್ಮಿಕ ಬಂಧುಗಳ ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ. ಈ ಕಠಿಣ ಅಭಿಯಾನವನ್ನು ಯಶಸ್ವಿಗೊಳಿಸಿದ ಎಲ್ಲ ವೀರ ಪುರುಷರಿಗೆ ನಾನು ವಂದಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?