AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಿದ ಜೀನ್ಸ್’ ಧರಿಸುವ ಮಹಿಳೆಯರು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಾರೆ : ಉತ್ತರಾಖಂಡ ಸಿಎಂ ತಿರತ್ ಸಿಂಗ್ ರಾವತ್

Tirath Singh Rawat: ರಿಪ್​ಡ್ ಜೀನ್ಸ್ ಸ್ಟೈಲ್ ಅನ್ನು 'ಕತ್ತರಿ ಸಂಸ್ಕೃತಿ' ಎಂದು ಹೇಳಿದ ತಿರತ್ ಸಿಂಗ್ ರಾವತ್ ಹರಿದ ಜೀನ್ಸ್ ಧರಿಸಿ ಮೊಣಕಾಲು ತೋರಿಸಿದರೆ ಶ್ರೀಮಂತರು ಎಂದೆನಿಸಿಕೊಳ್ಳುವುದಿಲ್ಲ ಎಂಬುದನ್ನು ನಾವು ಕಲಿಸಿಕೊಡಬೇಕಿದೆ ಎಂದಿದ್ದಾರೆ .

'ಹರಿದ ಜೀನ್ಸ್' ಧರಿಸುವ ಮಹಿಳೆಯರು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಾರೆ : ಉತ್ತರಾಖಂಡ ಸಿಎಂ ತಿರತ್ ಸಿಂಗ್ ರಾವತ್
ತೀರಥ್ ಸಿಂಗ್ ರಾವತ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 18, 2021 | 11:49 AM

Share

ಡೆಹ್ರಾಡೂನ್ : ಹರಿದ ಜೀನ್ಸ್ ಧರಿಸುವ ಮಹಿಳೆಯರು ಸಮಾಜಕ್ಕೆ ಮತ್ತು ಮಕ್ಕಳಿಗೆ ತಪ್ಪು ಸಂದೇಶವನ್ನು ನೀಡುತ್ತಾರೆ ಎಂದು ಉತ್ತಾರಾಖಂಡ ರಾಜ್ಯದ ನೂತನ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್  ಹೇಳಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ರಾಜ್ಯ ಆಯೋಗ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾವತ್ ಈ ರೀತಿ ಹೇಳಿಕೆ ನೀಡಿದ್ದಾರೆ. ನಾನೊಂದು ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ನನ್ನ ಪಕ್ಕದಲ್ಲಿ ಮಹಿಳೆಯೊಬ್ಬರು ಕುಳಿತಿದ್ದರು. ಆಕೆ ಬೂಟ್ಸ್ ಧರಿಸಿದ್ದರು, ಧರಿಸಿದ ಜೀನ್ಸ್ ಮೊಣಕಾಲಿನ ಭಾಗದಲ್ಲಿ ಹರಿದಿತ್ತು, ಕೈಯಲ್ಲಿ ತುಂಬಾ ಬ್ರೇಸ್ಲೆಟ್. ಆಕೆಯ ಜತೆ ಇಬ್ಬರು ಮಕ್ಕಳಿದ್ದರು. ಆಕೆಯ ಪತಿ ಜೆಎನ್​ಯು ಪ್ರೊಫೆಸರ್. ನೀವೊಂದು ಎನ್​ಜಿಒ ನಡೆಸುತ್ತೀರಿ, ಮೊಣಕಾಲಿನ ಭಾಗದಲ್ಲಿ ಹರಿದಿರುವ ಜೀನ್ಸ್ ಧರಿಸುತ್ತೀರಿ. ಸಮಾಜದಲ್ಲಿ ಓಡಾಡುತ್ತೀರಿ, ನಿಮ್ಮ ಮಕ್ಕಳು ನಿಮ್ಮ ಜತೆಯಲ್ಲಿದ್ದಾರೆ. ನೀವು ಯಾವ ಮೌಲ್ಯವನ್ನು ಹೇಳಿಕೊಡುತ್ತಿದ್ದೀರಿ ಎಂದು ರಾವತ್ ಪ್ರಶ್ನಿಸಿದ್ದಾರೆ.

ರಿಪ್​ಡ್ ಜೀನ್ಸ್ ಸ್ಟೈಲ್ ಅನ್ನು ‘ಕತ್ತರಿ ಸಂಸ್ಕೃತಿ’ ಎಂದು ಹೇಳಿದ ರಾವತ್, ಹರಿದ ಜೀನ್ಸ್ ಧರಿಸಿ ಮೊಣಕಾಲು ತೋರಿಸಿದರೆ ಶ್ರೀಮಂತರು ಎಂದೆನಿಸಿಕೊಳ್ಳುವುದಿಲ್ಲ ಎಂಬುದನ್ನು ನಾವು ಕಲಿಸಿಕೊಡಬೇಕಿದೆ. ಹರಿದ ಜೀನ್ಸ್ ಧರಿಸಿ ನಾನು ನನ್ನ ಮಕ್ಕಳನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದೇನೆ? ಮೊಣಕಾಲು ತೋರಿಸುವಲ್ಲಿ ಹುಡುಗಿಯರು ಕಮ್ಮಿಯೇನಿಲ್ಲ. ಇದೆಲ್ಲಾ ಸರಿಯೇ?. ಭಾರತದಲ್ಲಿರುವ ಜನರು ಹರಿದ ಜೀನ್ಸ್ ಧರಿಸುತ್ತಿದ್ದರೆ ಇತರ ದೇಶದ ಜನರು ಮೈಮುಚ್ಚಿಕೊಂಡು, ಯೋಗ ಕಲಿಯುತ್ತಿದ್ದಾರೆ ಎಂದಿದ್ದಾರೆ ರಾವತ್.

ರಾವತ್​ ಅವರ ಹೇಳಿಕೆಯನ್ನು ಖಂಡಿಸಿದ ಕಾಂಗ್ರೆಸ್ ವಕ್ತಾರ ಗರಿಮಾ ದಸೌನಿ, ಈ ಹೇಳಿಕೆ ಅಸಂಬದ್ಧ ಎಂದಿದ್ದಾರೆ. ಯಾವುದೇ ವ್ಯಕ್ತಿಯ ಉಡುಗೆ ಬಗ್ಗೆ ಮುಖ್ಯಮಂತ್ರಿಯೊಬ್ಬರು ಈ ರೀತಿ ಕಾಮೆಂಟ್ ಮಾಡಬಾರದು. ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳುವಾಗ ಬಿಜೆಪಿ ನಾಯಕರು ಮೌನವಾಗಿರುವುದು ಯಾಕೆ ಎಂದು ಗರಿಮಾ ಪ್ರಶ್ನಿಸಿದ್ದಾರೆ.

ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾವತ್, ಮೋದಿಯವರು ಸಮಾಜಕ್ಕಾಗಿ ಮಾಡಿದ ಕಾರ್ಯಗಳಿಂದಾಗಿ ಮುಂಬರುವ ಕಾಲದಲ್ಲಿ ಜನರು ಅವರನ್ನು ಶ್ರೀರಾಮ, ಕೃಷ್ಣರಂತೆ ಆರಾಧಿಸುತ್ತಾರೆ ಎಂದಿದ್ದರು.

ಹರಿದ ಜೀನ್ಸ್ ಹೇಳಿಕೆ ವಿರುದ್ಧ ರೊಚ್ಚಿಗೆದ್ದ ನೆಟ್ಟಿಗರು

ಹರಿದ ಜೀನ್ಸ್  ಬಗ್ಗೆ ರಾವತ್ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಮಹಿಳೆಯರು ರೊಚ್ಚಿಗೆದ್ದಿದ್ದಾರೆ.  ರಿಪ್ಡ್  ಜೀನ್ಸ್ ಮತ್ತು ಪುಸ್ತಕ. ಮಹಿಳೆಯರ ಉಡುಗೆ ನೋಡಿ ಗಂಡಸರು ದೇಶದ  ಸಂಸ್ಕೃತಿ ಮತ್ತು  ಆಚಾರಗಳ ಬಗ್ಗೆ ಅಭಿಪ್ರಾಯ ಪಡುತ್ತಾರೆ. ನಿಮ್ಮ ಆಲೋಚನೆಗಳನ್ನು ಬದಲಿಸಿ ರಾವತ್  ಜೀ,  ಹಾಗಾದರೆ ಮಾತ್ರ ದೇಶ ಬದಲಾಗಬಲ್ಲದು ಎಂದು  ಪ್ರಿಯಾಂಕಾ  ಚತುರ್ವೇದಿ ಟ್ವೀಟ್ ಮಾಡಿದ್ದಾರೆ.

ಮಹಿಳೆಯರು ತಮಗೆ  ಇಷ್ಟವಾದ  ಉಡುಗೆಯನ್ನು ಧರಿಸುತ್ತಾರೆ. ನೀವು ಅವರನ್ನು ನೋಡುವುದು, ನೋಡಿ ಅಭಿಪ್ರಾಯ ಹೇಳುವುದನ್ನು, ಮಹಿಳೆಯರ ವಿರುದ್ಧ ದ್ವೇಷ ಕಾರುವುದನ್ನು ನಿಲ್ಲಿಸಿ  ಎಂದು ರುಚಿರಾ ಚತುರ್ವೇದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ  ಓದಿ : ಹರಿದ ಜೀನ್ಸ್​ ಪ್ಯಾಂಟ್​ ವಿಚಾರಕ್ಕೆ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡ ಅಮಿತಾಭ್​ ಮೊಮ್ಮಗಳು ನವ್ಯಾ!

Published On - 11:39 am, Thu, 18 March 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!