AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್ ಸಿಎಮ್ ಸಹ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು | Uttarakhand CM too celebrates Deepavali with soldiers

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿಸ್ಸಂದೇಹವಾಗಿ ಒಂದು ಹೊಸ ಪರಂಪರೆಯನ್ನು ಹುಟ್ಟುಹಾಕಿದ್ದಾರೆ. ಪ್ರತಿಸಲ ದೀಪಾವಳಿ ಹಬ್ಬವನ್ನು ಗಡಿ ಕಾಯುವ ಸೈನಿಕರೊಂದಿಗೆ ಅವರು ಆಚರಿಸುತ್ತಿರುವುದು ಇತರ ನಾಯಕರಿಗೂ ಪ್ರೇರೇಪಣೆ ಒದಗಿಸುತ್ತಿದೆ. ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಈ ಬಾರಿಯ ದೀಪಾವಳಿಯನ್ನು ಶನಿವಾರದಂದು ಭಾರತ–ಚೀನಾ ಗಡಿ ಭಾಗದಲ್ಲಿರುವ ಉತ್ತರಾಕ್ಷಿಯಲ್ಲಿ ಇಂಡೋ–ಟಬೆಟಿಯನ್ ಬಾರ್ಡರ್ ಪೊಲೀಸ್ ದಳದೊಂದಿಗೆ (ಐಟಿಬಿಪಿ) ಆಚರಿಸಿದ್ದಾರೆ. ಕೊಪಾಂಗ್ ಪ್ರದೇಶದಲ್ಲಿ ಐಟಿಬಿಪಿ ಜವಾನರನ್ನು ಭೇಟಿಯಾದ ನಂತರ ರಾವತ್, ಜಿಲ್ಲೆಯ ಹರ್ಸಿಲ್ ಕಣಿವೆ ಪ್ರದೇಶದಲ್ಲಿ ಸ್ಥಿತಗೊಂಡಿರುವ ಸೇನಾ ತುಕುಡಿಗಳೊಂದಿಗೆ […]

ಉತ್ತರಾಖಂಡ್ ಸಿಎಮ್ ಸಹ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು | Uttarakhand CM too celebrates Deepavali with soldiers
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 14, 2020 | 8:34 PM

Share

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿಸ್ಸಂದೇಹವಾಗಿ ಒಂದು ಹೊಸ ಪರಂಪರೆಯನ್ನು ಹುಟ್ಟುಹಾಕಿದ್ದಾರೆ. ಪ್ರತಿಸಲ ದೀಪಾವಳಿ ಹಬ್ಬವನ್ನು ಗಡಿ ಕಾಯುವ ಸೈನಿಕರೊಂದಿಗೆ ಅವರು ಆಚರಿಸುತ್ತಿರುವುದು ಇತರ ನಾಯಕರಿಗೂ ಪ್ರೇರೇಪಣೆ ಒದಗಿಸುತ್ತಿದೆ.

ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಈ ಬಾರಿಯ ದೀಪಾವಳಿಯನ್ನು ಶನಿವಾರದಂದು ಭಾರತಚೀನಾ ಗಡಿ ಭಾಗದಲ್ಲಿರುವ ಉತ್ತರಾಕ್ಷಿಯಲ್ಲಿ ಇಂಡೋಟಬೆಟಿಯನ್ ಬಾರ್ಡರ್ ಪೊಲೀಸ್ ದಳದೊಂದಿಗೆ (ಐಟಿಬಿಪಿ) ಆಚರಿಸಿದ್ದಾರೆ.

ಕೊಪಾಂಗ್ ಪ್ರದೇಶದಲ್ಲಿ ಐಟಿಬಿಪಿ ಜವಾನರನ್ನು ಭೇಟಿಯಾದ ನಂತರ ರಾವತ್, ಜಿಲ್ಲೆಯ ಹರ್ಸಿಲ್ ಕಣಿವೆ ಪ್ರದೇಶದಲ್ಲಿ ಸ್ಥಿತಗೊಂಡಿರುವ ಸೇನಾ ತುಕುಡಿಗಳೊಂದಿಗೆ ಸಮಯ ಕಳೆದರು.

ಆಮೇಲೆ ಅವರನ್ನು ಉದ್ದೇಶಿಸಿ ಮಾತಾಡಿದ ರಾವತ್, ‘‘ಇಂದು ನಿಮ್ಮೊಂದಿಗೆ ಸಮಯ ಕಳೆಯುವ ಸಂದರ್ಭ ಸಿಕ್ಕಿದ್ದು ನನ್ನ ಸೌಭಾಗ್ಯವೆಂದೇ ಭಾವಿಸುತ್ತೇನೆ. ನಮ್ಮ ರಾಜ್ಯವು ಸೇನೆ ಮತ್ತು ಅರೆ ಸೇನಾ ಪಡೆಗಳೊಂದಿಗೆ ಗಾಢವಾದ ಸಂಬಂಧ ಹೊಂದಿದೆ. ನನ್ನ ತಂದೆ ಸಹ ಸೇನೆಯಲ್ಲಿದ್ದರು, ಈ ಕಾರಣದಿಂದಲೇ ನಾನು ಯೋಧರೊಂದಿಗೆ ವಿಶೇಷವಾದ ಬಾಂಧವ್ಯವನ್ನು ಹೊದಿದ್ದೇನೆ,’’ ಎಂದು ಹೇಳಿದರು. ‘‘ತಮ್ಮ ಕುಟುಂಬದಿಂದ ಸಹಸ್ರಾರು ಮೈಲಿ ದೂರದಲ್ಲಿದ್ದುಕೊಂಡು, ನಾವು ನೆಮ್ಮದಿಯ ಜೀವನ್ ನಡೆಸಬೇಕೆಂಬ ನಿಸ್ವಾರ್ಥ ಮನೋಬಾದಿಂದ ದೇಶಕ್ಕೆ ಸೇವೆ ಸಲ್ಲಿಸುತ್ತಿರುವ ಸೈನಿಕರಿಗೆ ನಾವು ಎಷ್ಟು ಕೃತಜ್ಞತೆ ಹೇಳಿದರೂ ಸಾಲದು. ನಮ್ಮ ಸುರತಕ್ಷತೆಗಾಗಿ ತಮ್ಮ ಜೀವವನ್ನೇ ಬಲಿಕೊಡುವ ನಮ್ಮ ಯೋಧರ ತ್ಯಾಗವನ್ನು ದೇಶವು ಕೃತಜ್ಞತೆಯಿಂದ ನೆನೆಯುತ್ತದೆ,’’ ಎಂದು ರಾವತ್ ಹೇಳಿದರು.

Follow Us
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ