AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್ ಸಿಎಮ್ ಸಹ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು | Uttarakhand CM too celebrates Deepavali with soldiers

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿಸ್ಸಂದೇಹವಾಗಿ ಒಂದು ಹೊಸ ಪರಂಪರೆಯನ್ನು ಹುಟ್ಟುಹಾಕಿದ್ದಾರೆ. ಪ್ರತಿಸಲ ದೀಪಾವಳಿ ಹಬ್ಬವನ್ನು ಗಡಿ ಕಾಯುವ ಸೈನಿಕರೊಂದಿಗೆ ಅವರು ಆಚರಿಸುತ್ತಿರುವುದು ಇತರ ನಾಯಕರಿಗೂ ಪ್ರೇರೇಪಣೆ ಒದಗಿಸುತ್ತಿದೆ. ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಈ ಬಾರಿಯ ದೀಪಾವಳಿಯನ್ನು ಶನಿವಾರದಂದು ಭಾರತ–ಚೀನಾ ಗಡಿ ಭಾಗದಲ್ಲಿರುವ ಉತ್ತರಾಕ್ಷಿಯಲ್ಲಿ ಇಂಡೋ–ಟಬೆಟಿಯನ್ ಬಾರ್ಡರ್ ಪೊಲೀಸ್ ದಳದೊಂದಿಗೆ (ಐಟಿಬಿಪಿ) ಆಚರಿಸಿದ್ದಾರೆ. ಕೊಪಾಂಗ್ ಪ್ರದೇಶದಲ್ಲಿ ಐಟಿಬಿಪಿ ಜವಾನರನ್ನು ಭೇಟಿಯಾದ ನಂತರ ರಾವತ್, ಜಿಲ್ಲೆಯ ಹರ್ಸಿಲ್ ಕಣಿವೆ ಪ್ರದೇಶದಲ್ಲಿ ಸ್ಥಿತಗೊಂಡಿರುವ ಸೇನಾ ತುಕುಡಿಗಳೊಂದಿಗೆ […]

ಉತ್ತರಾಖಂಡ್ ಸಿಎಮ್ ಸಹ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು | Uttarakhand CM too celebrates Deepavali with soldiers
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 14, 2020 | 8:34 PM

Share

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿಸ್ಸಂದೇಹವಾಗಿ ಒಂದು ಹೊಸ ಪರಂಪರೆಯನ್ನು ಹುಟ್ಟುಹಾಕಿದ್ದಾರೆ. ಪ್ರತಿಸಲ ದೀಪಾವಳಿ ಹಬ್ಬವನ್ನು ಗಡಿ ಕಾಯುವ ಸೈನಿಕರೊಂದಿಗೆ ಅವರು ಆಚರಿಸುತ್ತಿರುವುದು ಇತರ ನಾಯಕರಿಗೂ ಪ್ರೇರೇಪಣೆ ಒದಗಿಸುತ್ತಿದೆ.

ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಈ ಬಾರಿಯ ದೀಪಾವಳಿಯನ್ನು ಶನಿವಾರದಂದು ಭಾರತಚೀನಾ ಗಡಿ ಭಾಗದಲ್ಲಿರುವ ಉತ್ತರಾಕ್ಷಿಯಲ್ಲಿ ಇಂಡೋಟಬೆಟಿಯನ್ ಬಾರ್ಡರ್ ಪೊಲೀಸ್ ದಳದೊಂದಿಗೆ (ಐಟಿಬಿಪಿ) ಆಚರಿಸಿದ್ದಾರೆ.

ಕೊಪಾಂಗ್ ಪ್ರದೇಶದಲ್ಲಿ ಐಟಿಬಿಪಿ ಜವಾನರನ್ನು ಭೇಟಿಯಾದ ನಂತರ ರಾವತ್, ಜಿಲ್ಲೆಯ ಹರ್ಸಿಲ್ ಕಣಿವೆ ಪ್ರದೇಶದಲ್ಲಿ ಸ್ಥಿತಗೊಂಡಿರುವ ಸೇನಾ ತುಕುಡಿಗಳೊಂದಿಗೆ ಸಮಯ ಕಳೆದರು.

ಆಮೇಲೆ ಅವರನ್ನು ಉದ್ದೇಶಿಸಿ ಮಾತಾಡಿದ ರಾವತ್, ‘‘ಇಂದು ನಿಮ್ಮೊಂದಿಗೆ ಸಮಯ ಕಳೆಯುವ ಸಂದರ್ಭ ಸಿಕ್ಕಿದ್ದು ನನ್ನ ಸೌಭಾಗ್ಯವೆಂದೇ ಭಾವಿಸುತ್ತೇನೆ. ನಮ್ಮ ರಾಜ್ಯವು ಸೇನೆ ಮತ್ತು ಅರೆ ಸೇನಾ ಪಡೆಗಳೊಂದಿಗೆ ಗಾಢವಾದ ಸಂಬಂಧ ಹೊಂದಿದೆ. ನನ್ನ ತಂದೆ ಸಹ ಸೇನೆಯಲ್ಲಿದ್ದರು, ಈ ಕಾರಣದಿಂದಲೇ ನಾನು ಯೋಧರೊಂದಿಗೆ ವಿಶೇಷವಾದ ಬಾಂಧವ್ಯವನ್ನು ಹೊದಿದ್ದೇನೆ,’’ ಎಂದು ಹೇಳಿದರು. ‘‘ತಮ್ಮ ಕುಟುಂಬದಿಂದ ಸಹಸ್ರಾರು ಮೈಲಿ ದೂರದಲ್ಲಿದ್ದುಕೊಂಡು, ನಾವು ನೆಮ್ಮದಿಯ ಜೀವನ್ ನಡೆಸಬೇಕೆಂಬ ನಿಸ್ವಾರ್ಥ ಮನೋಬಾದಿಂದ ದೇಶಕ್ಕೆ ಸೇವೆ ಸಲ್ಲಿಸುತ್ತಿರುವ ಸೈನಿಕರಿಗೆ ನಾವು ಎಷ್ಟು ಕೃತಜ್ಞತೆ ಹೇಳಿದರೂ ಸಾಲದು. ನಮ್ಮ ಸುರತಕ್ಷತೆಗಾಗಿ ತಮ್ಮ ಜೀವವನ್ನೇ ಬಲಿಕೊಡುವ ನಮ್ಮ ಯೋಧರ ತ್ಯಾಗವನ್ನು ದೇಶವು ಕೃತಜ್ಞತೆಯಿಂದ ನೆನೆಯುತ್ತದೆ,’’ ಎಂದು ರಾವತ್ ಹೇಳಿದರು.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್