Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ ಡೋಲು ಬಾರಿಸಲು ಬಾರದ್ದಕ್ಕೆ ದಲಿತ ಕುಟುಂಬಗಳಿಗೆ ಊರಿಗೆ ಬಹಿಷ್ಕಾರ

ಪಂಚಾಯತ್ ಆದೇಶದ ಪ್ರಕಾರ, ಪರಿಶಿಷ್ಟ ಜಾತಿಯ ಕುಟುಂಬಗಳು ಗ್ರಾಮದಲ್ಲಿರುವ ಅರಣ್ಯ ಮತ್ತು ಜಲಮೂಲಗಳನ್ನು ಬಳಸದಂತೆ, ಅಂಗಡಿಗಳಿಂದ ಅಗತ್ಯ ವಸ್ತುಗಳನ್ನು ಖರೀದಿಸದಂತೆ, ವಾಹನಗಳಲ್ಲಿ ಪ್ರಯಾಣಿಸದಂತೆ ಮತ್ತು ದೇವಸ್ಥಾನಗಳಿಗೆ ಭೇಟಿ ನೀಡದಂತೆ ನಿರ್ಬಂಧಿಸಲಾಗಿದೆ.

ಉತ್ತರಾಖಂಡದಲ್ಲಿ ಡೋಲು ಬಾರಿಸಲು ಬಾರದ್ದಕ್ಕೆ ದಲಿತ ಕುಟುಂಬಗಳಿಗೆ ಊರಿಗೆ ಬಹಿಷ್ಕಾರ
ಡೋಲು
Follow us
ಸುಷ್ಮಾ ಚಕ್ರೆ
|

Updated on: Jul 18, 2024 | 12:25 PM

ಗೋಪೇಶ್ವರ: ಅನಾರೋಗ್ಯದ ಕಾರಣದಿಂದ ದೇವಸ್ಥಾನಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಡೋಲು ಬಾರಿಸಲು ಬಾರದ ಹಿನ್ನೆಲೆಯಲ್ಲಿ ಚಮೋಲಿ ಜಿಲ್ಲೆಯ ಹಳ್ಳಿಯೊಂದರ ದಲಿತ ಕುಟುಂಬಗಳನ್ನು ಬಹಿಷ್ಕರಿಸಿದ್ದಾರೆ. ಭಾರತ- ಚೀನಾ ಗಡಿಯ ಸಮೀಪವಿರುವ ನಿತಿ ಕಣಿವೆಯಲ್ಲಿರುವ ಸುಭಾಯ್ ಗ್ರಾಮದ ಸ್ಥಳೀಯ ಪಂಚಾಯತ್ ಭಾನುವಾರ ಬಹಿಷ್ಕಾರವನ್ನು ಘೋಷಿಸಿದೆ.

ಸುಭಾಯ್ ಗ್ರಾಮದಲ್ಲಿ ಸುಮಾರು ಅರ್ಧ ಡಜನ್ ಪರಿಶಿಷ್ಟ ಜಾತಿಯ ಕುಟುಂಬಗಳಿವೆ. ಅವರು ಆ ಗ್ರಾಮದಲ್ಲಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಹಬ್ಬಗಳಲ್ಲಿ ಹಲವು ತಲೆಮಾರುಗಳಿಂದ ಡೋಲು ಬಾರಿಸುತ್ತಿದ್ದಾರೆ.

ಇದನ್ನೂ ಓದಿ: Viral Video: ಕೇರಳದ ದೇವಾಲಯಕ್ಕೆ ಸೀರೆಯುಟ್ಟ ವಿದೇಶಿ ಮಹಿಳೆಗೆ ನಿರ್ಬಂಧ; ವಿಡಿಯೋ ವೈರಲ್

ಆದರೆ, ಒಬ್ಬ ಪುಷ್ಕರ್ ಲಾಲ್ ಅನಾರೋಗ್ಯದ ಕಾರಣದಿಂದಾಗಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಡೋಲು ಬಾರಿಸಲು ಬಂದಿರಲಿಲ್ಲ. ಇದರಿಂದ ಸ್ಥಳೀಯ ಪಂಚಾಯತ್ ಇಡೀ ದಲಿತ ಸಮುದಾಯವನ್ನು ಸಾಮಾಜಿಕ ಬಹಿಷ್ಕಾರಕ್ಕೆ ಆದೇಶಿಸಿದೆ. ಪಂಚಾಯತ್ ಸದಸ್ಯರೊಬ್ಬರು ಬಹಿಷ್ಕಾರವನ್ನು ಘೋಷಿಸುವುದು ಮತ್ತು ಆದೇಶವನ್ನು ಪಾಲಿಸದಿದ್ದರೆ ಇದೇ ರೀತಿಯ ಪರಿಣಾಮಗಳನ್ನು ಗ್ರಾಮಸ್ಥರಿಗೆ ಬೆದರಿಕೆ ಹಾಕುವುದು ವೀಡಿಯೊದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ದಲಿತರ ಪರ ಇದ್ದೇವೆ ಎಂದು ಅವರ ಹಣವನ್ನೇ ಕಾಂಗ್ರೆಸ್ ಲೂಟಿ‌ ಮಾಡಿದೆ -ಆರ್.ಅಶೋಕ್

ಪಂಚಾಯತ್ ಆದೇಶದ ಪ್ರಕಾರ, ಎಸ್‌ಸಿ ಕುಟುಂಬಗಳು ಗ್ರಾಮದಲ್ಲಿರುವ ಅರಣ್ಯ ಮತ್ತು ಜಲಮೂಲಗಳನ್ನು ಬಳಸದಂತೆ, ಅಂಗಡಿಗಳಿಂದ ಅಗತ್ಯ ವಸ್ತುಗಳನ್ನು ಖರೀದಿಸಲು, ವಾಹನಗಳಲ್ಲಿ ಪ್ರಯಾಣಿಸಲು ಮತ್ತು ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ.

ಸಂತ್ರಸ್ತೆಯ ಕುಟುಂಬಗಳು ಜೋಶಿಮಠ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ರಾಮಕೃಷ್ಣ ಖಂಡ್ವಾಲ್ ಮತ್ತು ಯಶವೀರ್ ಸಿಂಗ್ ಎಂಬ ಇಬ್ಬರು ವ್ಯಕ್ತಿಗಳು ಈ ಆದೇಶದ ರೂವಾರಿಗಳು ಎಂದು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್