AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Temple: ಉತ್ತರಾಖಂಡದಲ್ಲಿ ದೇವಸ್ಥಾನದೊಳಗೆ ಪ್ರವೇಶಿಸಿದ ದಲಿತ ಯುವಕನನ್ನು ಕಟ್ಟಿ ಹಾಕಿ, ಮನಬಂದಂತೆ ಥಳಿಸಿದ ಜನರು

ಪ್ರಾರ್ಥನೆ ಸಲ್ಲಿಸಲು ದೇವಸ್ಥಾನದ ಒಳಗೆ ಪ್ರವೇಶಿಸಿದ ದಲಿತ ಯುವಕನನ್ನು ಕಟ್ಟಿಹಾಕಿ ಮನಬಂದಂತೆ ಥಳಿಸಿರುವ ಘಟನೆ ಉತ್ತರಕಾಶಿಯ ಮೋರಿ ಪ್ರದೇಶದ ಸಾಲ್ರಾ ಗ್ರಾಮದಲ್ಲಿ ನಡೆದಿದೆ.

Uttarakhand Temple: ಉತ್ತರಾಖಂಡದಲ್ಲಿ ದೇವಸ್ಥಾನದೊಳಗೆ ಪ್ರವೇಶಿಸಿದ ದಲಿತ ಯುವಕನನ್ನು ಕಟ್ಟಿ ಹಾಕಿ, ಮನಬಂದಂತೆ ಥಳಿಸಿದ ಜನರು
ದೇವಸ್ಥಾನದ ಗಂಟೆImage Credit source: NDTV
TV9 Web
| Edited By: |

Updated on: Jan 13, 2023 | 7:27 AM

Share

ಪ್ರಾರ್ಥನೆ ಸಲ್ಲಿಸಲು ದೇವಸ್ಥಾನದ ಒಳಗೆ ಪ್ರವೇಶಿಸಿದ ದಲಿತ ಯುವಕನನ್ನು ಕಟ್ಟಿಹಾಕಿ ಮನಬಂದಂತೆ ಥಳಿಸಿರುವ ಘಟನೆ ಉತ್ತರಕಾಶಿಯ ಮೋರಿ ಪ್ರದೇಶದ ಸಾಲ್ರಾ ಗ್ರಾಮದಲ್ಲಿ ನಡೆದಿದೆ. ಬನೋಲ್ ಗ್ರಾಮದ ನಿವಾಸಿ ಅತ್ತರ್ ಲಾಲ್ ಅವರ ಪುತ್ರ ಆಯುಷ್ ದೌರ್ಜನ್ಯಕ್ಕೆ ಒಳಗಾದ ಯುವಕ, ಜನವರಿ 9 ರಂದು ಸಂಜೆ 7 ಗಂಟೆಗೆ ಗ್ರಾಮದ ಕೌನ್ವಾಲ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಹೋಗಿದ್ದ ವೇಳೆ ದೌರ್ಜನ್ಯ ನಡೆದಿದೆ ಎಂದು ಸಂತ್ರಸ್ತ ಯುವಕ ದೂರು ನೀಡಿದ್ದಾರೆ.

ಆಯುಷ್ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ದೇವಸ್ಥಾನದಲ್ಲಿ ಮೇಲ್ವರ್ಗದ ಕೆಲವರು ಆತನ ಮೇಲೆ ಹಲ್ಲೆ ನಡೆಸಿ, ಕಟ್ಟಿಹಾಕಿ ರಾತ್ರಿಯಿಡೀ ಹೊಡೆದಿದ್ದಾರೆ. ಆಯುಷ್ ಪೊಲೀಸರಿಗೆ ನೀಡಿದ ದೂರಿನಲ್ಲಿ ದೇವಸ್ಥಾನಕ್ಕೆ ಹೋಗಿದ್ದ ವೇಳೆ ಕೆಲವರು ಏಕಾಏಕಿ ನನ್ನ ಮೇಲೆ ಹಲ್ಲೆ ನಡೆಸಿದರು, ನಂತರ ದೇವಸ್ಥಾನದ ಕಂಬಕ್ಕೆ ಕಟ್ಟಿ ಹಾಕಿದರು. ಗ್ರಾಮದ ಐವರು ಮೇಲ್ಜಾತಿಯವರು ದೊಣ್ಣೆಯಿಂದ ಹಲ್ಲೆ ಮಾಡಿ ಬೆಂಕಿ ಇಂದ ಸುಟ್ಟಿದ್ದಾರೆ, ಈ ಸಮಯದಲ್ಲಿ ಪ್ರಜ್ಞೆ ತಪ್ಪಿತ್ತು, ಜನವರಿ 10 ರಂದು ಎಚ್ಚರಗೊಂಡಾಗ ಮೈಯಲ್ಲಿ ಬಟ್ಟೆಗಳಿರಲಿಲ್ಲ, ಹೇಗೋ ಮಾಡಿ ದೇವಸ್ಥಾನದ ಆವರಣದಿಂದ ತಪ್ಪಿಸಿಕೊಂಡು ಬಂದೆ ಎಂದು ಯುವ ಹೇಳಿದ್ದಾನೆ.

ಸಂತ್ರಸ್ತನನ್ನು ಜನವರಿ 10 ರಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿಂದ ಉತ್ತಮ ಚಿಕಿತ್ಸೆಗಾಗಿ ಉನ್ನತ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಲಿತನಾಗಿದ್ದು ದೇವಾಲಯ ಪ್ರವೇಶಿಸಿದ್ದರಿಂದ ದಾಳಿಕೋರರು ಕೋಪಗೊಂಡಿದ್ದರು ಎಂದು ಆಯುಷ್ ದೂರಿನಲ್ಲಿ ತಿಳಿಸಿದ್ದಾರೆ.

ಆತ ನೀಡಿದ ದೂರಿನ ಆಧಾರದ ಮೇಲೆ, ಘಟನೆಗೆ ಸಂಬಂಧಿಸಿದಂತೆ ಐವರು ಗ್ರಾಮಸ್ಥರ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ ಅರ್ಪಣ್ ಯದುವಂಶಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಆತನ ಸಂಬಂಧಿಕರು ಮೋರಿ ಪೊಲೀಸ್​ ಠಾಣೆಗೆ ತಲುಪಿ ಗಲಾಟೆ ನಡೆಸಿದ್ದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ