AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಅಲೆ: ಉತ್ತರಾಖಂಡ್​ನಲ್ಲಿ ಶುರುವಾಗಲಿದೆ ಎಲೆಕ್ಟ್ರಿಕ್ ಬಸ್​ ಸೇವೆ

ಉತ್ತರಾಖಂಡ್​ನಲ್ಲಿ ನಾಳೆಯಿಂದ ಎಲೆಕ್ಟ್ರಿಕ್ ಬಸ್​ ಸೇವೆ ಆರಂಭವಾಗಲಿದ್ದು ನಗರದಲ್ಲಿ ಈ ಸೇವೆಗೆ ಚಾಲನೆ ನೀಡಲಾಗುವುದು. ಉತ್ತರಾಖಂಡ್ ಸಾರಿಗೆ ಸಂಸ್ಥೆ ಡೆಹ್ರಾಡೂನ್ ನಗರದಲ್ಲಿ 30 ಎಲೆಕ್ಟ್ರಿಕ್ ಬಸ್​ಗಳನ್ನು ರಸ್ತೆಗೆ ಇಳಿಸಲು ನಿರ್ಧರಿಸಿದೆ.

ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಅಲೆ: ಉತ್ತರಾಖಂಡ್​ನಲ್ಲಿ ಶುರುವಾಗಲಿದೆ ಎಲೆಕ್ಟ್ರಿಕ್ ಬಸ್​ ಸೇವೆ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: Dec 10, 2020 | 1:33 PM

Share

ಡೆಹ್ರಾಡೂನ್​: ಎಲೆಕ್ಟ್ರಿಕ್ ಸ್ಕೂಟರ್, ಎಲೆಕ್ಟ್ರಿಕ್ ಕಾರ್​ಗಳು ಈಗಾಗಲೇ ನಮಗೆ ಚಿರಪರಿಚಿತ. ಆದರೂ ನಗರಗಳಲ್ಲಿ ವಾಯುಮಾಲಿನ್ಯ ಕಡಿಮೆಯಾಗುತ್ತಿಲ್ಲ ಎಂಬ ಕೂಗು ಕೇಳಿಬರುತ್ತಲೇ ಇದೆ. ದೇಶದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ವಾಯುಮಾಲಿನ್ಯದ ಪ್ರಮಾಣದ ನಡುವೆಯೇ ಇದೀಗ ಉತ್ತರಾಖಂಡ್​ ಸರ್ಕಾರ ವಾಯುಮಾಲಿನ್ಯ ನಿಯಂತ್ರಣದ ಸಲುವಾಗಿ ಹೊಸ ಯೋಜನೆಯ ಅನುಷ್ಠಾನಕ್ಕೆ ಮುಂದಾಗಿದೆ. ಉತ್ತರಾಖಂಡ್​ ಸರ್ಕಾರ ತನ್ನ ಸಾರ್ವಜನಿಕ ಸಾರಿಗೆಯಲ್ಲಿ ಎಲೆಕ್ಟ್ರಿಕ್ ಬಸ್​ಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಿಟ್ಟಿದೆ.

ಉತ್ತರಾಖಂಡ್​ನಲ್ಲಿ ನಾಳೆಯಿಂದ ಎಲೆಕ್ಟ್ರಿಕ್ ಬಸ್​ ಸೇವೆ ಆರಂಭವಾಗಲಿದ್ದು ನಗರದಲ್ಲಿ ಈ ಸೇವೆಗೆ ಚಾಲನೆ ನೀಡಲಾಗುವುದು. ಉತ್ತರಾಖಂಡ್ ಸಾರಿಗೆ ಸಂಸ್ಥೆ ಈ ಯೋಜನೆಯಡಿ 30 ಎಲೆಕ್ಟ್ರಿಕ್ ಬಸ್​ಗಳನ್ನು ರಸ್ತೆಗೆ ಇಳಿಸಲು ನಿರ್ಧರಿಸಿದೆ. ಉತ್ತರಾಖಂಡ್​ ಸಿಎಂ ತ್ರಿವೇಂದ್ರ ಸಿಂಗ್ ರಾವತ್  ಎಲೆಕ್ಟ್ರಿಕ್ ಬಸ್​ಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಮೇಘಾ ಇಂಜಿನಿಯರಿಂಗ್ ಸಂಸ್ಥೆಯು ಈ ಒಲೆಕ್ಟ್ರಾ ಗ್ರೀನ್​ಟೆಕ್ ಎಲೆಕ್ಟ್ರಿಕ್ ಬಸ್​ಗಳನ್ನು ಪೂರೈಸಿದೆ.

ಒಲೆಕ್ಟ್ರಾ K6, ಒಲೆಕ್ಟ್ರಾ K7 ಮತ್ತು ಒಲೆಕ್ಟ್ರಾ K9  ಎಂಬ ಮೂರು ಮಾದರಿಯ ಎಲೆಕ್ಟ್ರಿಕ್ ಬಸ್​ಗಳನ್ನು ಡೆಹ್ರಾಡೂನ್​ನಲ್ಲಿ ನಿಯೋಜಿಸಲಾಗುವುದು.  ಚಾಲಕನನ್ನು ಹೊರತುಪಡಿಸಿ ಈ ಬಸ್​ಗಳು ಕ್ರಮವಾಗಿ 22 , 31 ಮತ್ತು 39 ಸೀಟುಗಳನ್ನು ಹೊಂದಿವೆ. 2018ರಲ್ಲೇ ಪ್ರಾಯೋಗಿಕ ಸಂಚಾರ ನಡೆಸಿದ್ದ ಬಸ್​ಗಳು, ನಾಳೆಯಿಂದ ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ.

ಎಲೆಕ್ಟ್ರಿಕ್ ಬಸ್​ಗಳಲ್ಲಿದೆ ಹತ್ತಾರು ಸುರಕ್ಷತಾ ಸಾಧನ, ಸವಲತ್ತು ಅಂದ ಹಾಗೆ, ಬಸ್​ಗಳನ್ನು ಈ ಹಿಂದೆ  ಡೆಹ್ರಾಡೂನ್ ಮತ್ತು ಮಸ್ಸೂರಿಯ ನಡುವೆ ಪ್ರಾಯೋಗಿಕವಾಗಿ ಓಡಿಸಲಾಗಿತ್ತು. ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಹಿನ್ನೆಲೆಯಲ್ಲಿ ಉತ್ತರಾಖಂಡ್​ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. 2018ರಲ್ಲಿ ಉತ್ತರಾಖಂಡ್ ಸಿಎಂ ಎಲೆಕ್ಟ್ರಾನಿಕ್ ಬಸ್​ಗಳ ಸೇವೆ ಆರಂಭಿಸುವ ನಿಟ್ಟಿನಲ್ಲಿ 700 ಕೋಟಿ ಮೊತ್ತದ ಯೋಜನೆಗೆ ಸಹಿ ಹಾಕಿದ್ದರು. ಈ ಎಲೆಕ್ಟ್ರಿಕ್ ಬಸ್​ಗಳಲ್ಲಿ ಸಿಸಿಟಿವಿ, ಜಿಪಿಎಸ್ ಹಾಗೂ ತುರ್ತು ಸಂದರ್ಭದಲ್ಲಿ ಸಹಾಯವಾಗುವ ವಿಶೇಷ ಪ್ಯಾನಿಕ್ ಬಟನ್ ಹೊಂದಿದೆ. ಜೊತೆಗೆ, ಏರ್ ಸಸ್ಪೆನ್ಶನ್ ಮುಂತಾದವುಗಳನ್ನು ಸಹ ಒಳಗೊಂಡಿವೆ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?