AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯಾನಕ ದೃಶ್ಯವನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ: ಉತ್ತರಾಖಂಡ ಹಿಮಕುಸಿತದ ತೀವ್ರತೆ ವಿವರಿಸಿದ ಸ್ಥಳೀಯ

ಉತ್ತರಾಖಂಡದಲ್ಲಿ ವಾಸಿಸುವ ಸಂಜಯ್​ ಸಿಂಗ್​ ರಾಣಾ ಎನ್ನುವ ವ್ಯಕ್ತಿ ಈ ಭಯಾನಕ ದೃಶ್ಯವನ್ನು ಕಣ್ಣಾರೆ ಕಂಡಿದ್ದಾರೆ. ಅವರು ಈ ಬಗ್ಗೆ ವಿವರಣೆ ನೀಡಿದ್ದಾರೆ.

ಭಯಾನಕ ದೃಶ್ಯವನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ: ಉತ್ತರಾಖಂಡ ಹಿಮಕುಸಿತದ ತೀವ್ರತೆ ವಿವರಿಸಿದ ಸ್ಥಳೀಯ
ಹಾನಿಗೊಳಗಾದ ಡ್ಯಾಮ್
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 07, 2021 | 6:59 PM

ಡೆಹ್ರಾಡೂನ್ : ಉತ್ತರಾಖಂಡದನ ಚಮೋಲಿ ಜಿಲ್ಲೆಯಲ್ಲಿ ವ್ಯಾಪಕ ಹಿಮಕುಸಿತ (Uttarakhand Glacier Burst) ಉಂಟಾಗಿದೆ. ಇದರಿಂದ ಉಂಟಾದ ಪ್ರವಾಹದಿಂದ 150ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಅನೇಕರ ಶವ ಈಗಾಗಲೇ ದೊರೆತಿದ್ದು, ಇನ್ನೂ ಅನೇಕರಿಗಾಗಿ ಹುಡುಕಾಟ ಮುಂದುವರಿದೆ.  ಕೆಲ ಗ್ರಾಮಗಳಿಗೆ ನೀರು ಅಪ್ಪಳಿಸಿದೆ. ಈ ಘಟನೆಯನ್ನು ಕಣ್ಣಾರೆ ಕಂಡ ವ್ಯಕ್ತಿಯೋರ್ವ ಭಯಾನಕ ದೃಶ್ಯದ ಬಗ್ಗೆ ವಿವರಣೆ ನೀಡಿದ್ದಾರೆ.

ಉತ್ತರಾಖಂಡದಲ್ಲಿ ವಾಸಿಸುವ ಸಂಜಯ್​ ಸಿಂಗ್​ ರಾಣಾ ಎನ್ನುವ ವ್ಯಕ್ತಿ ಈ ಭಯಾನಕ ದೃಶ್ಯವನ್ನು ಕಣ್ಣಾರೆ ಕಂಡಿದ್ದಾರೆ. ಅವರು ಈ ಬಗ್ಗೆ ವಿವರಣೆ ನೀಡಿದ್ದಾರೆ. ನಾನು ಪ್ರವಾಹ ಉಂಟಾಗುವ ಪ್ರದೇಶಕ್ಕಿಂತ ಮೇಲಿದ್ದೆ. ನೋಡ ನೋಡುತ್ತಿದ್ದಂತೆ ಭಾರೀ ನೀರು ಬಂದಿತ್ತು. ಯಾರಿಗೂ ಅಲರ್ಟ್​ ಮಾಡಲು ಸಾಧ್ಯವೇ ಆಗಲಿಲ್ಲ. ನೀರು ಬರುವ ವೇಗ ನೋಡಿದರೆ, ನಾವು ಕೊಚ್ಚಿ ಹೋಗುತ್ತೇವೆ ಎಂದು ಭಾವಿಸಿದ್ದೆ ಎಂದು ಸಂಜಯ್ ಸಿಂಗ್​ ವಿವರಿಸಿದ್ದಾರೆ.

ನೀರು ಬರುವುದಕ್ಕೂ ಮೊದಲು ಇಲ್ಲಿ ಅನೇಕು ತಾವು ಸಾಕಿದ ಕುರಿ-ದನಗಳನ್ನು ಮೇಯಿಸುತ್ತಿದ್ದರು. ಇನ್ನೂ ಅನೇಕರು ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಅವರೆಲ್ಲರೂ ಕೊಚ್ಚಿ ಹೋಗಿರುವ ಭಯ ಕಾಡುತ್ತಿದೆ. ಎಷ್ಟು ಜನ ಕಾಣೆ ಆಗಿದ್ದಾರೆ ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಭಯಾನಕ ದೃಶ್ಯವನ್ನು ಶಬ್ದಗಳಲ್ಲಿ ಹೇಳುವದೇ ಕಷ್ಟ ಎಂದಿದ್ದಾರೆ ಸಂಜಯ್ ಸಿಂಗ್.

ಈಗಾಗಲೇ ಉತ್ತರಾಖಂಡದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ನೀರು ಬರುವ ವೇಗ ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ.

Uttarakhand Glacier Burst: ಧೌಲಿಗಂಗಾ ಪ್ರವಾಹ; 9 ಮೃತದೇಹ ಪತ್ತೆ, ಆಪತ್ತಿನಲ್ಲಿ 150ಕ್ಕೂ ಹೆಚ್ಚು ಜನ

ಸಿಎಸ್​ಕೆ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ರೊಮಾರಿಯೊ ಶೆಫರ್ಡ್
ಸಿಎಸ್​ಕೆ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ರೊಮಾರಿಯೊ ಶೆಫರ್ಡ್
ಈ ಸೀಸನ್​ನ 7ನೇ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ
ಈ ಸೀಸನ್​ನ 7ನೇ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!