AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯಾನಕ ದೃಶ್ಯವನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ: ಉತ್ತರಾಖಂಡ ಹಿಮಕುಸಿತದ ತೀವ್ರತೆ ವಿವರಿಸಿದ ಸ್ಥಳೀಯ

ಉತ್ತರಾಖಂಡದಲ್ಲಿ ವಾಸಿಸುವ ಸಂಜಯ್​ ಸಿಂಗ್​ ರಾಣಾ ಎನ್ನುವ ವ್ಯಕ್ತಿ ಈ ಭಯಾನಕ ದೃಶ್ಯವನ್ನು ಕಣ್ಣಾರೆ ಕಂಡಿದ್ದಾರೆ. ಅವರು ಈ ಬಗ್ಗೆ ವಿವರಣೆ ನೀಡಿದ್ದಾರೆ.

ಭಯಾನಕ ದೃಶ್ಯವನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ: ಉತ್ತರಾಖಂಡ ಹಿಮಕುಸಿತದ ತೀವ್ರತೆ ವಿವರಿಸಿದ ಸ್ಥಳೀಯ
ಹಾನಿಗೊಳಗಾದ ಡ್ಯಾಮ್
ರಾಜೇಶ್ ದುಗ್ಗುಮನೆ
| Edited By: |

Updated on: Feb 07, 2021 | 6:59 PM

Share

ಡೆಹ್ರಾಡೂನ್ : ಉತ್ತರಾಖಂಡದನ ಚಮೋಲಿ ಜಿಲ್ಲೆಯಲ್ಲಿ ವ್ಯಾಪಕ ಹಿಮಕುಸಿತ (Uttarakhand Glacier Burst) ಉಂಟಾಗಿದೆ. ಇದರಿಂದ ಉಂಟಾದ ಪ್ರವಾಹದಿಂದ 150ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಅನೇಕರ ಶವ ಈಗಾಗಲೇ ದೊರೆತಿದ್ದು, ಇನ್ನೂ ಅನೇಕರಿಗಾಗಿ ಹುಡುಕಾಟ ಮುಂದುವರಿದೆ.  ಕೆಲ ಗ್ರಾಮಗಳಿಗೆ ನೀರು ಅಪ್ಪಳಿಸಿದೆ. ಈ ಘಟನೆಯನ್ನು ಕಣ್ಣಾರೆ ಕಂಡ ವ್ಯಕ್ತಿಯೋರ್ವ ಭಯಾನಕ ದೃಶ್ಯದ ಬಗ್ಗೆ ವಿವರಣೆ ನೀಡಿದ್ದಾರೆ.

ಉತ್ತರಾಖಂಡದಲ್ಲಿ ವಾಸಿಸುವ ಸಂಜಯ್​ ಸಿಂಗ್​ ರಾಣಾ ಎನ್ನುವ ವ್ಯಕ್ತಿ ಈ ಭಯಾನಕ ದೃಶ್ಯವನ್ನು ಕಣ್ಣಾರೆ ಕಂಡಿದ್ದಾರೆ. ಅವರು ಈ ಬಗ್ಗೆ ವಿವರಣೆ ನೀಡಿದ್ದಾರೆ. ನಾನು ಪ್ರವಾಹ ಉಂಟಾಗುವ ಪ್ರದೇಶಕ್ಕಿಂತ ಮೇಲಿದ್ದೆ. ನೋಡ ನೋಡುತ್ತಿದ್ದಂತೆ ಭಾರೀ ನೀರು ಬಂದಿತ್ತು. ಯಾರಿಗೂ ಅಲರ್ಟ್​ ಮಾಡಲು ಸಾಧ್ಯವೇ ಆಗಲಿಲ್ಲ. ನೀರು ಬರುವ ವೇಗ ನೋಡಿದರೆ, ನಾವು ಕೊಚ್ಚಿ ಹೋಗುತ್ತೇವೆ ಎಂದು ಭಾವಿಸಿದ್ದೆ ಎಂದು ಸಂಜಯ್ ಸಿಂಗ್​ ವಿವರಿಸಿದ್ದಾರೆ.

ನೀರು ಬರುವುದಕ್ಕೂ ಮೊದಲು ಇಲ್ಲಿ ಅನೇಕು ತಾವು ಸಾಕಿದ ಕುರಿ-ದನಗಳನ್ನು ಮೇಯಿಸುತ್ತಿದ್ದರು. ಇನ್ನೂ ಅನೇಕರು ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಅವರೆಲ್ಲರೂ ಕೊಚ್ಚಿ ಹೋಗಿರುವ ಭಯ ಕಾಡುತ್ತಿದೆ. ಎಷ್ಟು ಜನ ಕಾಣೆ ಆಗಿದ್ದಾರೆ ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಭಯಾನಕ ದೃಶ್ಯವನ್ನು ಶಬ್ದಗಳಲ್ಲಿ ಹೇಳುವದೇ ಕಷ್ಟ ಎಂದಿದ್ದಾರೆ ಸಂಜಯ್ ಸಿಂಗ್.

ಈಗಾಗಲೇ ಉತ್ತರಾಖಂಡದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ನೀರು ಬರುವ ವೇಗ ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ.

Uttarakhand Glacier Burst: ಧೌಲಿಗಂಗಾ ಪ್ರವಾಹ; 9 ಮೃತದೇಹ ಪತ್ತೆ, ಆಪತ್ತಿನಲ್ಲಿ 150ಕ್ಕೂ ಹೆಚ್ಚು ಜನ

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ