AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Glacier Burst: ಏರಿಕೆಯಾಗುತ್ತಲೇ ಇದೆ ಹಿಮಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ; ಇಂದು 12 ಮೃತದೇಹಗಳು ಪತ್ತೆ

ನಿನ್ನೆ SDRF ತಂಡ ರೈನಿ ಗ್ರಾಮದ ಬಳಿ, 4200 ಮೀಟರ್​ ಎತ್ತರದಲ್ಲಿರುವ ಸರೋವರಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ಮಾಡಿದೆ. ಸರೋವರದಿಂದ ನೀರು ನಿರಂತರವಾಗಿ ಹೊರಹೋಗುತ್ತಿದೆ ಎಂದು ಡಿಜಿಪಿ ಅಶೋಕ್​ ಕುಮಾರ್​ ತಿಳಿಸಿದ್ದಾರೆ.

Uttarakhand Glacier Burst: ಏರಿಕೆಯಾಗುತ್ತಲೇ ಇದೆ ಹಿಮಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ; ಇಂದು 12 ಮೃತದೇಹಗಳು ಪತ್ತೆ
Uttarakhand glacier disaster ರಕ್ಷಣಾ ಕಾರ್ಯಾಚರಣೆ ಚಿತ್ರ
Lakshmi Hegde
|

Updated on:Feb 14, 2021 | 6:34 PM

Share

ದೆಹಲಿ: ಉತ್ತರಾಖಂಡದಲ್ಲಿ ಫೆ.7ರಂದು ಘಟಿಸಿದ ಹಿಮಕುಸಿತದಲ್ಲಿ ಸಾವನ್ನಪ್ಪಿದರ ಸಂಖ್ಯೆ 50ಕ್ಕೆ ಏರಿಕೆಯಾಗಿದ್ದು, ಇನ್ನೂ 154 ಮಂದಿ ಪತ್ತೆಯಾಗಿಲ್ಲ. ಇವತ್ತು ಒಂದೇ ದಿನ 12 ಮೃತದೇಹಗಳನ್ನು ತಪೋವನ ಸುರಂಗದಿಂದ ಹೊರಗೆ ತೆಗೆಯಲಾಗಿದೆ. ಅಂದು ಚಮೋಲಿ ಜಿಲ್ಲೆಯಲ್ಲಿ ಹಿಮಕುಸಿತದಿಂದ ಧೌಲಿಗಂಗಾ ನದಿ ಉಕ್ಕಿ ಹರಿದು ಅಪಾರ ಹಾನಿಯನ್ನುಂಟು ಮಾಡಿದೆ. ರಿಷಿಗಂಗಾ ಜಲವಿದ್ಯುತ್​ ಶಕ್ತಿ ಯೋಜನೆ ಕೊಚ್ಚಿಕೊಂಡು ಹೋಗಿತ್ತು. ತಪೋವನದ ಬಳಿ ಸುರಂಗ ಮಾರ್ಗದಲ್ಲಿ ಕೆಲಸ ಮಾಡುತ್ತಿದ್ದ 160ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆಯಾಗಿದ್ದರು. ರಕ್ಷಣಾ ತಂಡಗಳು ಏಳುದಿನಗಳಿಂದಲೂ ಕಾರ್ಯಾಚರಣೆ ನಡೆಸುತ್ತಿದ್ದು, ಇಲ್ಲಿಯವರೆಗೆ 50 ಮೃತದೇಹಗಳು ಸಿಕ್ಕಿವೆ.

ಚಮೋಲಿಯ ಜೋಶಿಮಠ್​ದಲ್ಲಿರುವ ತಪೋವನ ಸುರಂಗಮಾರ್ಗದಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದಕ್ಕಾಗಿ ಹೊಸ ಮಶಿನ್​ವೊಂದನ್ನೂ ಕೂಡ ಇಲ್ಲಿಗೆ ತರಲಾಗಿದೆ. ಇಂದು ಬೆಳಗ್ಗೆ ಎರಡು ಮೃತದೇಹಗಳು ಸುರಂಗದ ಬಳಿ ಸಿಕ್ಕಿದ್ದವು. ಮಧ್ಯಾಹ್ನದ ಹೊತ್ತಿಗೆ ಈ ಸಂಖ್ಯೆ 4ಕ್ಕೆ ಏರಿತು. ಹಾಗೇ 2 ಮೃತದೇಹಗಳು ರೈನಿ ಗ್ರಾಮದ ಬಳಿ ಸಿಕ್ಕಿವೆ. ಸುರಂಗದ ಬಳಿಯಷ್ಟೇ ಅಲ್ಲದೆ, ಧೌಲಿಗಂಗಾ ನದಿ ದಡದಲ್ಲಿ, ರೈನಿ ಸುತ್ತಲಿನ ಬ್ಯಾರೇಜ್​ ತಾಣಗಳಲ್ಲಿ ಕೂಡ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸರು ಮೃತದೇಹಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Uttarakhand glacier burst ತುಂಡಾದ ರೀತಿಯಲ್ಲಿ.. ರಿಷಿಗಂಗಾ ಪವರ್ ಪ್ರಾಜೆಕ್ಟ್​ ಇಂಜಿನಿಯರ್​ನ​ ಮೃತದೇಹ ಪತ್ತೆ

ಇನ್ನು ನಿನ್ನೆ SDRF ತಂಡ ರೈನಿ ಗ್ರಾಮದ ಬಳಿ, 4200 ಮೀಟರ್​ ಎತ್ತರದಲ್ಲಿರುವ ಸರೋವರಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ಮಾಡಿದೆ. ಸರೋವರದಿಂದ ನೀರು ನಿರಂತರವಾಗಿ ಹೊರಹೋಗುತ್ತಿದೆ. ಇದು ಅಪಾಯಕಾರಿವಲಯವಲ್ಲ. ಇಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲು ಸ್ಥಳವೊಂದನ್ನು ಗುರುತಿಸಲಾಗಿದೆ ಎಂದು ಉತ್ತರಾಖಂಡ್​ ಡಿಜಿಪಿ ಅಶೋಕ್​ ಕುಮಾರ್​ ತಿಳಿಸಿದ್ದಾರೆ.

ಇದನ್ನೂ ಓದಿ: Explainer | ಉತ್ತರಾಖಂಡ್​ನಲ್ಲಿ ಹಠಾತ್ ಪ್ರವಾಹ: ಏನಿದು ಹಿಮಕುಸಿತ? ಹೇಗೆ ಸಂಭವಿಸುತ್ತೆ?

Published On - 6:23 pm, Sun, 14 February 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ