AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Glacier Burst: ಧೌಲಿಗಂಗಾ ಪ್ರವಾಹ; 9 ಮೃತದೇಹ ಪತ್ತೆ, ಆಪತ್ತಿನಲ್ಲಿ 150ಕ್ಕೂ ಹೆಚ್ಚು ಜನ

Uttarakhand Glacier Burst ಋಷಿಗಂಗಾದ ಸುರಂಗದಲ್ಲಿ ಸುಮಾರು 50 ಮಂದಿ ಸಿಲುಕಿದ್ದಾಗಿ ವರದಿಯಾಗಿದೆ. ಸ್ಥಳದಲ್ಲಿ ವೈದ್ಯಕೀಯ ತಂಡ, ಇಂಜಿನಿಯರ್​ ಟಾಸ್ಕ್​ಫೋರ್ಸ್​ ತಂಡವೂ ಇದೆ.

Uttarakhand Glacier Burst: ಧೌಲಿಗಂಗಾ ಪ್ರವಾಹ; 9 ಮೃತದೇಹ ಪತ್ತೆ, ಆಪತ್ತಿನಲ್ಲಿ 150ಕ್ಕೂ ಹೆಚ್ಚು ಜನ
ಹಿಮ ಕುಸಿತದಿಂದ ಧೌಲಿಗಂಗಾ ನದಿಯಲ್ಲಿ ಉಂಟಾಗಿರುವ ಪ್ರವಾಹ
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 07, 2021 | 7:10 PM

ಡೆಹ್ರಾಡೂನ್​: ಉತ್ತರಾಖಂಡ್​ನ ಚಮೋಲಿ ಜಿಲ್ಲೆಯ ತಪೋವನ ಸಮೀಪದ ರೈಣಿ ಗ್ರಾಮದಲ್ಲಿ ನಂದಾದೇವಿ ಹಿಮಪರ್ವತ ಕುಸಿದ ಪರಿಣಾಮ ಧೌಲಿಗಂಗಾ ನದಿ ಪ್ರವಾಹ ಹೆಚ್ಚಾಗಿದ್ದು, ಸುತ್ತಮುತ್ತಲೂ ಅಪಾರ ಪ್ರಮಾಣದಲ್ಲಿ ಹಾನಿಯನ್ನುಂಟು ಮಾಡಿದೆ. ಪ್ರವಾಹದಲ್ಲಿ 100ರಿಂದ 150 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ 16 ಜನರನ್ನು ರಕ್ಷಿಸಲಾಗಿದೆ. 9 ಮಂದಿಯ ಮೃತದೇಹಗಳು ಪತ್ತೆಯಾಗಿವೆ.

200ಕ್ಕೂ ಹೆಚ್ಚು ಐಟಿಬಿಪಿ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಭಾರತೀಯ ವಾಯುಸೇನೆ (IAF) ಸಿಬ್ಬಂದಿಯೂ ನಂದಾದೇವಿ ಪರ್ವತದ ಬಳಿ ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದಾರೆ. ಋಷಿಗಂಗಾದ ಸುರಂಗದಲ್ಲಿ ಸುಮಾರು 50 ಮಂದಿ ಸಿಲುಕಿದ್ದು, ಎಲ್ಲರೂ ಪ್ರಾಣಭಯದಲ್ಲಿಯೇ ಇದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ವೈದ್ಯಕೀಯ ತಂಡ, ಇಂಜಿನಿಯರ್​ ಟಾಸ್ಕ್​ಫೋರ್ಸ್​ ತಂಡವೂ ಇದೆ.

ಮೊದಲು ಮಾಹಿತಿ ಕೊಟ್ಟಿದ್ದು ಹೆಡ್​ ಕಾನ್​ಸ್ಟೆಬಲ್ ಇಂದು ರೈಣಿ ಗ್ರಾಮದ ಬಳಿ ಹಿಮಕುಸಿತ ಆಗುತ್ತಿರುವ ಬಗ್ಗೆ ಮೊದಲು ಮಾಹಿತಿ ಕೊಟ್ಟಿದ್ದು, ಜೋಶಿಮಠ್​ದ ಹೆಡ್​​ಕಾನ್​ಸ್ಟೆಬಲ್​ ಒಬ್ಬರು ಎಂದು ಎಸ್​ಡಿಆರ್​ಎಫ್​ ಮೂಲಗಳೂ ತಿಳಿಸಿವೆ. ನಂದಾದೇವಿ ಪರ್ವತದಲ್ಲಿ ಎರಡು ದಿನಗಳ ಹಿಂದಿನಿಂದಲೇ ಹಿಮಪಾತ ಶುರುವಾಗಿತ್ತು ಎಂದೂ ಆ ಕಾನ್​ಸ್ಟೆಬಲ್​ ತಿಳಿಸಿದ್ದಾರೆ.

ಸಹಾಯವಾಣಿ ಪ್ರವಾಹಕ್ಕೆ ಸಿಲುಕಿರುವ ಜನರು ಸಹಾಯಕ್ಕಾಗಿ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೂಚಿಸಿದ್ದಾರೆ. ವಿಪತ್ತು ನಿರ್ವಹಣಾ ಕೇಂದ್ರದ ಸಂಪರ್ಕ ಸಂಖ್ಯೆಗಳು: 1070 ಮತ್ತು 95574 44486.

ಉತ್ತರಾಖಂಡ್ ಚಮೋಲಿಯಲ್ಲಿ ವ್ಯಾಪಕ ಹಿಮಕುಸಿತ; ನದಿಪಾತ್ರದ ಜನತೆಗೆ ಆಡಳಿತದಿಂದ ಎಚ್ಚರಿಕೆ

Published On - 4:18 pm, Sun, 7 February 21

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್