Uttarakhand Glacier Burst: ಧೌಲಿಗಂಗಾ ಪ್ರವಾಹ; 9 ಮೃತದೇಹ ಪತ್ತೆ, ಆಪತ್ತಿನಲ್ಲಿ 150ಕ್ಕೂ ಹೆಚ್ಚು ಜನ

Uttarakhand Glacier Burst ಋಷಿಗಂಗಾದ ಸುರಂಗದಲ್ಲಿ ಸುಮಾರು 50 ಮಂದಿ ಸಿಲುಕಿದ್ದಾಗಿ ವರದಿಯಾಗಿದೆ. ಸ್ಥಳದಲ್ಲಿ ವೈದ್ಯಕೀಯ ತಂಡ, ಇಂಜಿನಿಯರ್​ ಟಾಸ್ಕ್​ಫೋರ್ಸ್​ ತಂಡವೂ ಇದೆ.

Uttarakhand Glacier Burst: ಧೌಲಿಗಂಗಾ ಪ್ರವಾಹ; 9 ಮೃತದೇಹ ಪತ್ತೆ, ಆಪತ್ತಿನಲ್ಲಿ 150ಕ್ಕೂ ಹೆಚ್ಚು ಜನ
ಹಿಮ ಕುಸಿತದಿಂದ ಧೌಲಿಗಂಗಾ ನದಿಯಲ್ಲಿ ಉಂಟಾಗಿರುವ ಪ್ರವಾಹ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 07, 2021 | 7:10 PM

ಡೆಹ್ರಾಡೂನ್​: ಉತ್ತರಾಖಂಡ್​ನ ಚಮೋಲಿ ಜಿಲ್ಲೆಯ ತಪೋವನ ಸಮೀಪದ ರೈಣಿ ಗ್ರಾಮದಲ್ಲಿ ನಂದಾದೇವಿ ಹಿಮಪರ್ವತ ಕುಸಿದ ಪರಿಣಾಮ ಧೌಲಿಗಂಗಾ ನದಿ ಪ್ರವಾಹ ಹೆಚ್ಚಾಗಿದ್ದು, ಸುತ್ತಮುತ್ತಲೂ ಅಪಾರ ಪ್ರಮಾಣದಲ್ಲಿ ಹಾನಿಯನ್ನುಂಟು ಮಾಡಿದೆ. ಪ್ರವಾಹದಲ್ಲಿ 100ರಿಂದ 150 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ 16 ಜನರನ್ನು ರಕ್ಷಿಸಲಾಗಿದೆ. 9 ಮಂದಿಯ ಮೃತದೇಹಗಳು ಪತ್ತೆಯಾಗಿವೆ.

200ಕ್ಕೂ ಹೆಚ್ಚು ಐಟಿಬಿಪಿ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಭಾರತೀಯ ವಾಯುಸೇನೆ (IAF) ಸಿಬ್ಬಂದಿಯೂ ನಂದಾದೇವಿ ಪರ್ವತದ ಬಳಿ ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದಾರೆ. ಋಷಿಗಂಗಾದ ಸುರಂಗದಲ್ಲಿ ಸುಮಾರು 50 ಮಂದಿ ಸಿಲುಕಿದ್ದು, ಎಲ್ಲರೂ ಪ್ರಾಣಭಯದಲ್ಲಿಯೇ ಇದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ವೈದ್ಯಕೀಯ ತಂಡ, ಇಂಜಿನಿಯರ್​ ಟಾಸ್ಕ್​ಫೋರ್ಸ್​ ತಂಡವೂ ಇದೆ.

ಮೊದಲು ಮಾಹಿತಿ ಕೊಟ್ಟಿದ್ದು ಹೆಡ್​ ಕಾನ್​ಸ್ಟೆಬಲ್ ಇಂದು ರೈಣಿ ಗ್ರಾಮದ ಬಳಿ ಹಿಮಕುಸಿತ ಆಗುತ್ತಿರುವ ಬಗ್ಗೆ ಮೊದಲು ಮಾಹಿತಿ ಕೊಟ್ಟಿದ್ದು, ಜೋಶಿಮಠ್​ದ ಹೆಡ್​​ಕಾನ್​ಸ್ಟೆಬಲ್​ ಒಬ್ಬರು ಎಂದು ಎಸ್​ಡಿಆರ್​ಎಫ್​ ಮೂಲಗಳೂ ತಿಳಿಸಿವೆ. ನಂದಾದೇವಿ ಪರ್ವತದಲ್ಲಿ ಎರಡು ದಿನಗಳ ಹಿಂದಿನಿಂದಲೇ ಹಿಮಪಾತ ಶುರುವಾಗಿತ್ತು ಎಂದೂ ಆ ಕಾನ್​ಸ್ಟೆಬಲ್​ ತಿಳಿಸಿದ್ದಾರೆ.

ಸಹಾಯವಾಣಿ ಪ್ರವಾಹಕ್ಕೆ ಸಿಲುಕಿರುವ ಜನರು ಸಹಾಯಕ್ಕಾಗಿ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೂಚಿಸಿದ್ದಾರೆ. ವಿಪತ್ತು ನಿರ್ವಹಣಾ ಕೇಂದ್ರದ ಸಂಪರ್ಕ ಸಂಖ್ಯೆಗಳು: 1070 ಮತ್ತು 95574 44486.

ಉತ್ತರಾಖಂಡ್ ಚಮೋಲಿಯಲ್ಲಿ ವ್ಯಾಪಕ ಹಿಮಕುಸಿತ; ನದಿಪಾತ್ರದ ಜನತೆಗೆ ಆಡಳಿತದಿಂದ ಎಚ್ಚರಿಕೆ

Published On - 4:18 pm, Sun, 7 February 21

ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​