AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Glacier Burst: ಧೌಲಿಗಂಗಾ ಪ್ರವಾಹ; 9 ಮೃತದೇಹ ಪತ್ತೆ, ಆಪತ್ತಿನಲ್ಲಿ 150ಕ್ಕೂ ಹೆಚ್ಚು ಜನ

Uttarakhand Glacier Burst ಋಷಿಗಂಗಾದ ಸುರಂಗದಲ್ಲಿ ಸುಮಾರು 50 ಮಂದಿ ಸಿಲುಕಿದ್ದಾಗಿ ವರದಿಯಾಗಿದೆ. ಸ್ಥಳದಲ್ಲಿ ವೈದ್ಯಕೀಯ ತಂಡ, ಇಂಜಿನಿಯರ್​ ಟಾಸ್ಕ್​ಫೋರ್ಸ್​ ತಂಡವೂ ಇದೆ.

Uttarakhand Glacier Burst: ಧೌಲಿಗಂಗಾ ಪ್ರವಾಹ; 9 ಮೃತದೇಹ ಪತ್ತೆ, ಆಪತ್ತಿನಲ್ಲಿ 150ಕ್ಕೂ ಹೆಚ್ಚು ಜನ
ಹಿಮ ಕುಸಿತದಿಂದ ಧೌಲಿಗಂಗಾ ನದಿಯಲ್ಲಿ ಉಂಟಾಗಿರುವ ಪ್ರವಾಹ
Lakshmi Hegde
| Edited By: |

Updated on:Feb 07, 2021 | 7:10 PM

Share

ಡೆಹ್ರಾಡೂನ್​: ಉತ್ತರಾಖಂಡ್​ನ ಚಮೋಲಿ ಜಿಲ್ಲೆಯ ತಪೋವನ ಸಮೀಪದ ರೈಣಿ ಗ್ರಾಮದಲ್ಲಿ ನಂದಾದೇವಿ ಹಿಮಪರ್ವತ ಕುಸಿದ ಪರಿಣಾಮ ಧೌಲಿಗಂಗಾ ನದಿ ಪ್ರವಾಹ ಹೆಚ್ಚಾಗಿದ್ದು, ಸುತ್ತಮುತ್ತಲೂ ಅಪಾರ ಪ್ರಮಾಣದಲ್ಲಿ ಹಾನಿಯನ್ನುಂಟು ಮಾಡಿದೆ. ಪ್ರವಾಹದಲ್ಲಿ 100ರಿಂದ 150 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ 16 ಜನರನ್ನು ರಕ್ಷಿಸಲಾಗಿದೆ. 9 ಮಂದಿಯ ಮೃತದೇಹಗಳು ಪತ್ತೆಯಾಗಿವೆ.

200ಕ್ಕೂ ಹೆಚ್ಚು ಐಟಿಬಿಪಿ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಭಾರತೀಯ ವಾಯುಸೇನೆ (IAF) ಸಿಬ್ಬಂದಿಯೂ ನಂದಾದೇವಿ ಪರ್ವತದ ಬಳಿ ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದಾರೆ. ಋಷಿಗಂಗಾದ ಸುರಂಗದಲ್ಲಿ ಸುಮಾರು 50 ಮಂದಿ ಸಿಲುಕಿದ್ದು, ಎಲ್ಲರೂ ಪ್ರಾಣಭಯದಲ್ಲಿಯೇ ಇದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ವೈದ್ಯಕೀಯ ತಂಡ, ಇಂಜಿನಿಯರ್​ ಟಾಸ್ಕ್​ಫೋರ್ಸ್​ ತಂಡವೂ ಇದೆ.

ಮೊದಲು ಮಾಹಿತಿ ಕೊಟ್ಟಿದ್ದು ಹೆಡ್​ ಕಾನ್​ಸ್ಟೆಬಲ್ ಇಂದು ರೈಣಿ ಗ್ರಾಮದ ಬಳಿ ಹಿಮಕುಸಿತ ಆಗುತ್ತಿರುವ ಬಗ್ಗೆ ಮೊದಲು ಮಾಹಿತಿ ಕೊಟ್ಟಿದ್ದು, ಜೋಶಿಮಠ್​ದ ಹೆಡ್​​ಕಾನ್​ಸ್ಟೆಬಲ್​ ಒಬ್ಬರು ಎಂದು ಎಸ್​ಡಿಆರ್​ಎಫ್​ ಮೂಲಗಳೂ ತಿಳಿಸಿವೆ. ನಂದಾದೇವಿ ಪರ್ವತದಲ್ಲಿ ಎರಡು ದಿನಗಳ ಹಿಂದಿನಿಂದಲೇ ಹಿಮಪಾತ ಶುರುವಾಗಿತ್ತು ಎಂದೂ ಆ ಕಾನ್​ಸ್ಟೆಬಲ್​ ತಿಳಿಸಿದ್ದಾರೆ.

ಸಹಾಯವಾಣಿ ಪ್ರವಾಹಕ್ಕೆ ಸಿಲುಕಿರುವ ಜನರು ಸಹಾಯಕ್ಕಾಗಿ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೂಚಿಸಿದ್ದಾರೆ. ವಿಪತ್ತು ನಿರ್ವಹಣಾ ಕೇಂದ್ರದ ಸಂಪರ್ಕ ಸಂಖ್ಯೆಗಳು: 1070 ಮತ್ತು 95574 44486.

ಉತ್ತರಾಖಂಡ್ ಚಮೋಲಿಯಲ್ಲಿ ವ್ಯಾಪಕ ಹಿಮಕುಸಿತ; ನದಿಪಾತ್ರದ ಜನತೆಗೆ ಆಡಳಿತದಿಂದ ಎಚ್ಚರಿಕೆ

Published On - 4:18 pm, Sun, 7 February 21

Follow Us
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!