AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Glacier Burst | ಉತ್ತರಾಖಂಡ​ ಮೃತರ ಸಂಖ್ಯೆ 31ಕ್ಕೆ ಏರಿಕೆ; ದುರಂತದ ಬಗ್ಗೆ ರಾಜ್ಯಸಭೆಯಲ್ಲಿ ಅಮಿತ್​ ಶಾ ಹೇಳಿಕೆ

Uttarakhand Glacier Burst Death Toll: ಮೃತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಸೈನಿಕರಿಂದ ಅವಘಡದಲ್ಲಿ ನಾಪತ್ತೆಯಾದವರ ಹುಡುಕಾಟ ಕಾರ್ಯ ಮುಂದುವರಿದಿದೆ.

Uttarakhand Glacier Burst | ಉತ್ತರಾಖಂಡ​ ಮೃತರ ಸಂಖ್ಯೆ 31ಕ್ಕೆ ಏರಿಕೆ; ದುರಂತದ ಬಗ್ಗೆ ರಾಜ್ಯಸಭೆಯಲ್ಲಿ ಅಮಿತ್​ ಶಾ ಹೇಳಿಕೆ
ಉತ್ತರಾಖಂಡ್ ತಪೋವನ್ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ
TV9 Web
| Edited By: |

Updated on:Apr 06, 2022 | 8:04 PM

Share

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ತಪೋವನ ಸಮೀಪ ರೈಣಿ ಗ್ರಾಮದಲ್ಲಿ ಸಂಭವಿಸಿದ ಹಿಮಕುಸಿತದಿಂದಾಗಿ ಧೌಲಿಗಂಗಾ ನದಿಯಲ್ಲಿ ಉಂಟಾದ ಪ್ರವಾಹದಲ್ಲಿ ಮೃತರಾದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ITBP, NDRF ಹಾಗೂ ಭೂಸೇನೆಯ ಸೈನಿಕರಿಂದ ಅವಘಡದಲ್ಲಿ ನಾಪತ್ತೆಯಾಗಿದ್ದವರ ಹುಡುಕಾಟ ಕಾರ್ಯ ಮುಂದುವರಿದಿದೆ. ತಪೋವನ ಡ್ಯಾಂ ಬಳಿ, ಭಾರಿ ಪ್ರಮಾಣದ ಮಣ್ಣು ಕುಸಿದು ಸುರಂಗ ಮುಚ್ಚಿಹೋಗಿತ್ತು. ಸುರಂಗದಲ್ಲಿ ಮಣ್ಣಿನಡಿ ಸಿಲುಕಿರುವ ಜನರ ರಕ್ಷಣಾ ಕಾರ್ಯಾಚರಣೆ ಚುರುಕಿನಿಂದ ಸಾಗಿದೆ.

ತಪೋವನ-ವಿಷ್ಣುಗಡ್ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ 35 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಒಟ್ಟು 170 ಮಂದಿ ಕಣ್ಮರೆಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸುರಂಗದಲ್ಲಿ ಸಿಲುಕಿರುವವರನ್ನು ರಕ್ಷಿಸಲು 300 ಇಂಡೊ ಟಿಬೆಟನ್ ಗಡಿ ಪೊಲೀಸರನ್ನು (ಐಟಿಬಿಪಿ) ನಿಯೋಜಿಸಲಾಗಿದೆ ಎಂದು ಐಟಿಬಿಪಿ ವಕ್ತಾರ ವಿವೇಕ್ ಪಾಂಡೆ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಇಂದು ರಾಜ್ಯಸಭೆಯಲ್ಲಿ ಉತ್ತರಾಖಂಡ್ ಘಟನೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕೇಂದ್ರ ಮತ್ತು ರಾಜ್ಯದ ಸಂಬಂಧಪಟ್ಟ ಇಲಾಖೆಗಳು ಉತ್ತರಾಖಂಡ್ ಪರಿಸ್ಥಿತಿಯನ್ನು ಅವಲೋಕಿಸುತ್ತಿವೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಮೃತರಾದವರಿಗೆ ರಾಜ್ಯಸಭಾ ಸದಸ್ಯರು ಸದನದಲ್ಲಿ ಸಂತಾಪ ಸೂಚಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಶಾ, ನಿರ್ವಹಣಾ ಕೊಠಡಿಗಳು ಮತ್ತು ಗೃಹ ಸಚಿವಾಲಯ ಉತ್ತರಾಖಂಡ್ ಪರಿಸ್ಥಿತಿಯನ್ನು ನಿಭಾಯಿಸಲು ಕೆಲಸ ಮಾಡುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಖುದ್ದು ವರದಿ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ರಾಜ್ಯಕ್ಕೆ ಸೂಕ್ತ ಸಹಾಯವನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇಂದು ಬೆಳಗ್ಗೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ಹಿಮಕುಸಿತ ಹಾಗೂ ಪ್ರವಾಹದಿಂದ ಉಂಟಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಸುಮಾರು 93 NTPC ಕಾರ್ಮಿಕರು ಕಣ್ಮರೆಯಾಗಿದ್ದಾರೆ. ಅದರಲ್ಲಿ 39 ಮಂದಿ ಸುರಂಗದಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನು ತಲುಪಲು ನಾವು ಶ್ರಮಿಸುತ್ತಿದ್ದೇವೆ. ಹಿಮಕುಸಿತದಂಥಾ ಅವಘಡಗಳ ಬಗ್ಗೆ ಮುನ್ಸೂಚನೆ ಪಡೆಯಲು ಮುನ್ನೆಚ್ಚರಿಕಾ ಸಾಧನಗಳನ್ನು ಅಳವಡಿಸಲು ಯೋಜಿಸಿದ್ದೇವೆ. ಹಿಮಕುಸಿತದಿಂದ ಮೃತರಾದವರಿಗೆ 20 ಲಕ್ಷ ರೂ.ಗಳ ಪರಿಹಾರ ನೀಡುತ್ತೇವೆ ಎಂದು ಕೇಂದ್ರ ಇಂಧನ ಸಚಿವ ಆರ್.ಕೆ. ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ ದುರಂತಕ್ಕೆ ಏನು ಕಾರಣ? ಭೂಕುಸಿತವೇ? ಹಿಮನದಿ ಸ್ಫೋಟವೇ? ಇಲ್ಲಿದೆ ತಜ್ಞರ ವಿಶ್ಲೇಷಣೆ

ಸೈನಿಕರಿಂದ ರಕ್ಷಣಾ ಕಾರ್ಯಾಚರಣೆಯ ಚಿತ್ರಗಳು ಇಲ್ಲಿವೆ..

ಸಹಾಯವಾಣಿ ಪ್ರವಾಹಕ್ಕೆ ಸಿಲುಕಿರುವ ಜನರು ಸಹಾಯಕ್ಕಾಗಿ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೂಚಿಸಿದ್ದಾರೆ. ವಿಪತ್ತು ನಿರ್ವಹಣಾ ಕೇಂದ್ರದ ಸಂಪರ್ಕ ಸಂಖ್ಯೆಗಳು: 1070 ಮತ್ತು 95574 44486.

Uttarakhand Glacier Burst ಉತ್ತರಾಖಂಡ್ ಮೇಲೆ ನಿಸರ್ಗ ಮುನಿದಿದ್ದು ಇದೇ ಮೊದಲಲ್ಲ; 1991ರಿಂದ ಈವರೆಗೆ ಏನೆಲ್ಲಾ ಆಯ್ತು?

Uttarakhand Glacier Burst | ದೇವಭೂಮಿ ಉತ್ತರಾಖಂಡದ ನದಿಗಳು ಕೆರಳುವುದೇಕೆ?

Published On - 7:59 pm, Tue, 9 February 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ