AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Glacier Burst: ಇಲ್ಲಿಯವರೆಗೆ 54 ಮೃತದೇಹಗಳು ಪತ್ತೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ

Uttarakhand: ಚಮೋಲಿ ಜಿಲ್ಲೆಯ ಜೋಷಿಮಠದಲ್ಲಿರುವ ತಪೋವನ್ ಸುರಂಗ ಮಾರ್ಗದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎನ್​ಡಿಆರ್​ಎಫ್) ಹೇಳಿದೆ.

Uttarakhand Glacier Burst: ಇಲ್ಲಿಯವರೆಗೆ 54 ಮೃತದೇಹಗಳು ಪತ್ತೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ
ತಪೋವನ್ ಸುರಂಗ ಮಾರ್ಗದಲ್ಲಿ ರಕ್ಷಣಾ ಕಾರ್ಯಾಚರಣೆ
ರಶ್ಮಿ ಕಲ್ಲಕಟ್ಟ
| Edited By: |

Updated on: Feb 15, 2021 | 11:56 AM

Share

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ 54 ಮೃತದೇಹಗಳನ್ನು ಹೊರತೆಗೆಯಲಾಗಿದೆ.  ಸೋಮವಾರ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 174 ಮಂದಿ ನಾಪತ್ತೆಯಾಗಿದ್ದಾರೆ ಎಂದು ಚಮೋಲಿ ಪೊಲೀಸರು ಹೇಳಿದ್ದಾರೆ.

ಹಿಮಾಲಯದದಲ್ಲಿ ಹಿಮನದಿ ಸ್ಫೋಟಗೊಂಡ ಪರಿಣಾಮ ಹಿಮಪಾತವಾಗಿ ಧೌಲಿಗಂಗಾ, ಅಲಕಾನಂದ ನದಿಯಲ್ಲಿ ಪ್ರವಾಹವುಂಟಾಗಿತ್ತು. ಈ ಪ್ರವಾಹದಲ್ಲಿ ಜಲವಿದ್ಯುತ್ ಯೋಜನೆ ಮತ್ತು 5 ಸೇತುವೆಗಳು ಕೊಚ್ಚಿಹೋಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಸೇನಾಪಡೆ, ಅರೆ ಸೇನಾಪಡೆ ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಚಮೋಲಿ ಜಿಲ್ಲೆಯ ಜೋಷಿಮಠದಲ್ಲಿರುವ ತಪೋವನ್ ಸುರಂಗ ಮಾರ್ಗದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎನ್​ಡಿಆರ್​ಎಫ್) ಹೇಳಿರುವುದಾಗಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಸುರಂಗದಿಂದ ಮೃತದೇಹಗಳನ್ನು ಹೊರಕ್ಕೆ ತರುವುದು ಕಷ್ಟವಾಗುತ್ತಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಕಮಾಂಡೆಂಟ್ ಪಿ.ಕೆ.ತಿವಾರಿ ಹೇಳಿದ್ದಾರೆ.

ಇದನ್ನೂ ಓದಿ :  Uttarakhand Glacier Burst: ಏರಿಕೆಯಾಗುತ್ತಲೇ ಇದೆ ಹಿಮಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ; ಇಂದು 12 ಮೃತದೇಹಗಳು ಪತ್ತೆ

ಇಂಡೊ-ಟಿಬೆಟನ್ ಗಡಿ ಪೊಲೀಸರ ಪಡೆ ರೈನಿ ಎಂಬಲ್ಲಿ ಭಾನುವಾರ 6 ಮೃತದೇಹಗಳನ್ನು ಹೊರತೆಗೆದಿದೆ. ಅಲ್ಲಿರುವ ರಾಷ್ಟ್ರೀಯ ಉಷ್ಣ ವಿದ್ಯುತ್ ಸ್ಥಾವರದ ತಪೋವನ್- ವಿಷ್ಣುಗಡ್ ಹೈಡಲ್ ಯೋಜನೆಗೆ ಹೆಚ್ಚು ಹಾನಿಯಾಗಿದೆ. ಅಲ್ಲಿದ್ದ ಅಣೆಕಟ್ಟು ಸಂಪೂರ್ಣ ಕೊಚ್ಚಿಹೋಗಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!