AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದ ಹಿಮಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆ

ಇಂಡೋ-ಟಿಬೆಟ್​ ಬಾರ್ಡರ್ ಪೊಲೀಸ್​ ಪಡೆ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಮಣ್ಣು ಹಾಗೂ ಕೆಸರಿನಲ್ಲಿ ಸಿಲುಕಿದ ಅನೇಕರನ್ನು ರಕ್ಷಿಸುವ ಕಾರ್ಯ ಸಾಗಿದೆ.

ಉತ್ತರಾಖಂಡದ ಹಿಮಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆ
ಉತ್ತರಾಖಂಡದಲ್ಲಿ ಉಂಟಾಗಿದ್ದ ದಿಢೀರ್ ಪ್ರವಾಹ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Feb 08, 2021 | 9:29 PM

Share

ನವದೆಹಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ವ್ಯಾಪಕ ಹಿಮಸ್ಫೋಟ (Uttarakhand Glacier Burst) ಉಂಟಾಗಿತ್ತು. ಪರಿಣಾಮ, ಋಷಿಗಂಗಾ ನದಿ ಉಕ್ಕಿ ಹರಿದಿತ್ತು. ಈ ವೇಳೆ ಕಾಣೆಯಾದವರ ಪೈಕಿ 26 ಜನರು ಶವವಾಗಿ ಸಿಕ್ಕಿದ್ದಾರೆ. ಇನ್ನೂ ಸಾಕಷ್ಟು ಮಂದಿ, ಮೃತಪಟ್ಟಿರುವ ಶಂಕೆ ಹೆಚ್ಚಾಗಿದೆ. ಹಿಮಸ್ಫೋಟದಿಂದ ಋಷಿಗಂಗಾ ನದಿ ಉಕ್ಕಿ ಹರಿದಿತ್ತು. ಋಷಿಗಂಗಾ  ಸಣ್ಣ ವಿದ್ಯುತ್​ ಯೋಜನೆ ಸಂಪೂರ್ಣವಾಗಿ ಕೊಚ್ಚಿ ಹೋಗಿತ್ತು. ಈ ಹೈಡ್ರೋ ಪ್ರಾಜೆಕ್ಟ್​​ನ ಸುರಂಗದಲ್ಲಿ ಹಲವರು ಸಿಲುಕಿದ್ದಾರೆ. ಇವರಲ್ಲಿ ಈಗಾಗಲೇ ಅನೇಕರು ಮೃತಪಟ್ಟಿದ್ದಾರೆ. ಇಲ್ಲಿ ಇನ್ನೂ 35 ಜನರು ಸಿಲುಕಿರುವ ಸಾಧ್ಯತೆ ಇದೆ.

ಮಣ್ಣು ಹಾಗೂ ಅವಶೇಷದ ಅಡಿಗೆ ಸಿಲುಕಿ ಒಂದು ದಿನವೇ ಕಳೆದಿದೆ. ಅವರಿಗೆ ಆಹಾರ ಹಾಗೂ ಗಾಳಿ ಇಲ್ಲದ ಕಾರಣ ಅವರೆಲ್ಲರೂ ಬದುಕಿರುವ ಸಾಧ್ಯತೆ ತುಂಬಾನೇ ಕಡಿಮೆ. ಒಂದೊಮ್ಮೆ ಯಾರಾದರೂ ಬದುಕಿದ್ದರೆ ಅದು ಪವಾಡ ಎಂದು ರಕ್ಷಣಾ ಕಾರ್ಯದಲ್ಲಿ ತೊಡಗಿರುವವರು ಹೇಳಿದ್ದಾರೆ.

ಇಂಡೋ-ಟಿಬೆಟ್​ ಬಾರ್ಡರ್ ಪೊಲೀಸ್​ (ಐಟಿಬಿಪಿ) ಪಡೆ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಮಣ್ಣು ಹಾಗೂ ಕೆಸರಿನಲ್ಲಿ ಸಿಲುಕಿದ ಅನೇಕರನ್ನು ರಕ್ಷಿಸುವ ಕಾರ್ಯ ಸಾಗಿದೆ. ಒಟ್ಟು 171 ಜನರು ನಾಪತ್ತೆ ಆಗಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್​ ಕುಮಾರ್ ಹೇಳಿಕೆ​ ನೀಡಿದ್ದಾರೆ.

ಉತ್ತರಾಖಂಡದಲ್ಲಿ ವಾಸಿಸುವ ಸಂಜಯ್​ ಸಿಂಗ್​ ರಾಣಾ ಎನ್ನುವ ವ್ಯಕ್ತಿ ಈ ಭಯಾನಕ ದೃಶ್ಯವನ್ನು ಕಣ್ಣಾರೆ ಕಂಡಿದ್ದಾರೆ. ಅವರು ಈ ಬಗ್ಗೆ ವಿವರಣೆ ನೀಡಿದ್ದಾರೆ. ನಾನು ಪ್ರವಾಹ ಉಂಟಾಗುವ ಪ್ರದೇಶಕ್ಕಿಂತ ಮೇಲಿದ್ದೆ. ನೋಡ ನೋಡುತ್ತಿದ್ದಂತೆ ಭಾರೀ ನೀರು ಬಂದಿತ್ತು. ಯಾರಿಗೂ ಅಲರ್ಟ್​ ಮಾಡಲು ಸಾಧ್ಯವೇ ಆಗಲಿಲ್ಲ. ನೀರು ಬರುವ ವೇಗ ನೋಡಿದರೆ, ನಾವು ಕೊಚ್ಚಿ ಹೋಗುತ್ತೇವೆ ಎಂದು ಭಾವಿಸಿದ್ದೆ ಎಂದು ಸಂಜಯ್ ಸಿಂಗ್​ ವಿವರಿಸಿದ್ದರು. ಇದು ಘಟನೆಯ ತೀವ್ರತೆಯನ್ನು ಹೇಳುವಂತಿದೆ.

ಉತ್ತರಾಖಂಡದಲ್ಲಿ ಸಂಪೂರ್ಣ ಕೊಚ್ಚಿ ಹೋದ ಋಷಿಗಂಗಾ ಜಲ ವಿದ್ಯುತ್ ಶಕ್ತಿ​ ಯೋಜನೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!