AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇದಾರನಾಥ ದೇಗುಲದಲ್ಲಿನ ಚಿನ್ನದ ಲೇಪನ ಹಗರಣದ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಉತ್ತರಾಖಂಡ ಸರ್ಕಾರ

ಕೆಲಸ ಪೂರ್ಣಗೊಂಡ ನಂತರ, ಅದರ ಬಿಲ್ ಮತ್ತು ಇತರ ಪೇಪರ್‌ಗಳನ್ನು ದಾನಿಯು ದೇವಾಲಯದ ಸಮಿತಿಗೆ ಸಲ್ಲಿಸಿದ್ದಾರೆ. ವಿರೋಧ ಪಕ್ಷಗಳು ಈ ವಿಷಯಕ್ಕೆ ಅನಗತ್ಯವಾದ ಮಹತ್ವ ನೀಡುವ ಮೂಲಕ ಚಾರ್‌ಧಾಮ್ ಯಾತ್ರೆಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿವೆ ಎಂದು ಸತ್ಪಾಲ್ ಆರೋಪಿಸಿದ್ದಾರೆ.

ಕೇದಾರನಾಥ ದೇಗುಲದಲ್ಲಿನ ಚಿನ್ನದ ಲೇಪನ ಹಗರಣದ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಉತ್ತರಾಖಂಡ ಸರ್ಕಾರ
ಕೇದಾರನಾಥ ದೇಗುಲ
ರಶ್ಮಿ ಕಲ್ಲಕಟ್ಟ
|

Updated on:Jun 24, 2023 | 1:31 PM

Share

ಡೆಹ್ರಾಡೂನ್: ಕೇದಾರನಾಥ ದೇಗುಲದ (Kedarnath Temple) ಗರ್ಭಗುಡಿಗೆ ಚಿನ್ನದ ಲೇಪನ ಮಾಡಿದ್ದರಲ್ಲಿ ₹ 1.25 ಕೋಟಿ ಹಗರಣ ನಡೆದಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಉತ್ತರಾಖಂಡ (Uttarakhand) ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ನಿರ್ಧರಿಸಿದೆ. ರಾಜ್ಯದ ಪ್ರವಾಸೋದ್ಯಮ, ಧರ್ಮ ಮತ್ತು ಸಂಸ್ಕೃತಿ ಸಚಿವ ಸತ್ಪಾಲ್ ಮಹಾರಾಜ್ (Satpal Maharaj), ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲು ಗರ್ವಾಲ್ ಕಮಿಷನರ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸುವಂತೆ ಸಂಸ್ಕೃತಿ ಮತ್ತು ಧಾರ್ಮಿಕ ವ್ಯವಹಾರಗಳ ಕಾರ್ಯದರ್ಶಿ ಹರಿಚಂದ್ರ ಸೆಮ್ವಾಲ್​​ಗೆ  ಶುಕ್ರವಾರ ಸೂಚನೆ ನೀಡಿದ್ದಾರೆ. ತನಿಖಾ ಸಮಿತಿಯಲ್ಲಿ ತಾಂತ್ರಿಕ ತಜ್ಞರು ಹಾಗೂ ಅಕ್ಕಸಾಲಿಗರನ್ನು ಸೇರಿಸಿಕೊಳ್ಳುವಂತೆ ಸೆಮ್ವಾಲ್‌ಗೆ ಸೂಚಿಸಲಾಗಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ‘ಅತ್ಯಂತ ಸೂಕ್ಷ್ಮ’ವಾಗಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸತ್ಪಾಲ್ ಮಹಾರಾಜ್ ಹೇಳಿದ್ದಾರೆ.

ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಕಾಯಿದೆ, 1939 ರ ನಿಬಂಧನೆಗಳ ಪ್ರಕಾರ, ದೇಣಿಗೆಯನ್ನು ಸ್ವೀಕರಿಸಲಾಗಿದ್ದು, ಕೇದಾರನಾಥ ದೇವಾಲಯದ ಗರ್ಭಗುಡಿಗೆ ಚಿನ್ನದ ಲೇಪನ ಮಾಡಲು ರಾಜ್ಯ ಸರ್ಕಾರದಿಂದ ಅನುಮತಿಯನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ತಜ್ಞರ ಮೇಲ್ವಿಚಾರಣೆಯಲ್ಲಿ ಚಿನ್ನದ ಲೇಪನವನ್ನು ಮಾಡಲಾಗಿದೆ. ದಾನಿಯೊಬ್ಬರು ಚಿನ್ನವನ್ನು ಖರೀದಿಸಿ ಗರ್ಭಗುಡಿಯ ಗೋಡೆಗಳ ಮೇಲೆ ಹೊದಿಸಿದ್ದಾರೆ. ದೇವಾಲಯದ ಸಮಿತಿಗೆ ಇದರಲ್ಲಿ ನೇರ ಪಾತ್ರವಿಲ್ಲ ಎಂದು ಸಚಿವರು ಹೇಳಿದ್ದಾರೆ.

ಕೆಲಸ ಪೂರ್ಣಗೊಂಡ ನಂತರ, ಅದರ ಬಿಲ್ ಮತ್ತು ಇತರ ಪೇಪರ್‌ಗಳನ್ನು ದಾನಿಯು ದೇವಾಲಯದ ಸಮಿತಿಗೆ ಸಲ್ಲಿಸಿದ್ದಾರೆ. ವಿರೋಧ ಪಕ್ಷಗಳು ಈ ವಿಷಯಕ್ಕೆ ಅನಗತ್ಯವಾದ ಮಹತ್ವ ನೀಡುವ ಮೂಲಕ ಚಾರ್‌ಧಾಮ್ ಯಾತ್ರೆಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿವೆ ಎಂದು ಸತ್ಪಾಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: Tamil Nadu: ತಮಿಳುನಾಡಿನ ವಿಮಾನ ನಿಲ್ದಾಣದಲ್ಲಿ 6,500 ಕ್ಕೂ ಹೆಚ್ಚು ಜೀವಂತ ಆಮೆಗಳು ವಶ, ಇಬ್ಬರ ಬಂಧನ

ದೇವಾಲಯದ ಗರ್ಭಗುಡಿಯಲ್ಲಿ 23,777.800 ಗ್ರಾಂ ಚಿನ್ನವನ್ನು ಬಳಸಲಾಗಿದೆ ಎಂದು ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿಯು ಈ ಹಿಂದೆ ಹೇಳಿಕೆಯಲ್ಲಿ ತಿಳಿಸಿತ್ತು. ಇದರ ಪ್ರಸ್ತುತ ಮೌಲ್ಯ ಸುಮಾರು ₹ 14.38 ಕೋಟಿಯಷ್ಟಿದೆ. ಅದೇ ವೇಳೆ ಸ್ವರ್ಣ ಲೇಪಿತ ಕಾಮಗಾರಿಗೆ ಬಳಸಲಾದ ತಾಮ್ರದ ಫಲಕಗಳ ಒಟ್ಟು ತೂಕ 1,001.300 ಕೆ.ಜಿ ಆಗಿದ್ದು ಒಟ್ಟು ಮೌಲ್ಯ ₹ 29 ಲಕ್ಷ.

ಇತ್ತೀಚೆಗೆ ಕೇದಾರನಾಥ ದೇಗುಲದ ತೀರ್ಥ ಪುರೋಹಿತ್ ಮತ್ತುಚಾರ್‌ಧಾಮ್ ಮಹಾಪಂಚಾಯತ್ ಉಪಾಧ್ಯಕ್ಷ ಸಂತೋಷ್ ತ್ರಿವೇದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದರಲ್ಲಿ ಬಿಡುಗಡೆ ಮಾಡಿ ಗರ್ಭಗುಡಿಯ ಗೋಡೆಗಳಿಗೆ ಚಿನ್ನದ ಲೇಪನದ ಬದಲು ಹಿತ್ತಾಳೆ ಬಳಿದು ₹ 1.25 ಕೋಟಿ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Sat, 24 June 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್