AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Char Dham Yatra 2021: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧ ತೆರವುಗೊಳಿಸಿದ ಉತ್ತರಾಖಂಡ್ ಹೈಕೋರ್ಟ್​; ಈ ಷರತ್ತುಗಳ ಪಾಲನೆ ಕಡ್ಡಾಯ

ಕೊವಿಡ್​ 19 ಮೂರನೇ ಅಲೆ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಚಾರ್​ಧಾಮ್​ ಯಾತ್ರೆಗೆ ಅವಕಾಶ ನೀಡಲು ಉತ್ತರಾಖಂಡ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ವಿಜ್ಞಾನಿಗಳ ಸಮುದಾಯ ನೀಡಿದ ಎಚ್ಚರಿಕೆ ಅನ್ವಯ ತನ್ನ ತೀರ್ಪು ಪ್ರಕಟಿಸಿತ್ತು.

Char Dham Yatra 2021: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧ ತೆರವುಗೊಳಿಸಿದ ಉತ್ತರಾಖಂಡ್ ಹೈಕೋರ್ಟ್​; ಈ ಷರತ್ತುಗಳ ಪಾಲನೆ ಕಡ್ಡಾಯ
ಬದ್ರಿನಾಥ ದೇಗುಲ
Follow us
TV9 Web
| Updated By: Lakshmi Hegde

Updated on:Sep 16, 2021 | 6:26 PM

ಡೆಹ್ರಾಡೂನ್​: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧವನ್ನು ಉತ್ತಾರಖಂಡ ಹೈಕೋರ್ಟ್​ ಇಂದು ತೆರವುಗೊಳಿಸಿದೆ. ಆದರೆ ಕೊವಿಡ್​ 19 ನಿಯಮಗಳನ್ನು ಪಾಲಿಸುವುದನ್ನು ಕಡ್ಡಾಯ ಮಾಡಿದೆ. ಯಾತ್ರೆಗೆ ಬರುವವರು ಕಡ್ಡಾಯವಾಗಿ ಕೊರೊನಾ ವೈರಸ್​ ನೆಗೆಟಿವ್​ ರಿಪೋರ್ಟ್​ ತರಬೇಕು. ಎರಡೂ ಡೋಸ್​ ಲಸಿಕೆ ಪಡೆದ ಸರ್ಟಿಫಿಕೇಟ್​ ಹೊಂದಿರಬೇಕು ಎಂದು ಆದೇಶಿಸಿದೆ. ಹಾಗೇ, ಒಂದು ದಿನದಲ್ಲಿ ಕೇದಾರನಾಥ್​ ದೇಗುಲಕ್ಕೆ 800 ಭಕ್ತರು, ಬದ್ರಿನಾಥ್​​ ದೇವಾಲಯಕ್ಕೆ 1200ಜನರು, ಗಂಗೋತ್ರಿಗೆ 600 ಭಕ್ತರು ಮತ್ತು ಯಮುನೋತ್ರಿ ಧಾಮಕ್ಕೆ 400 ಭಕ್ತರಷ್ಟೇ ಆಗಮಿಸಬಹುದು ಎಂದೂ ಹೈಕೋರ್ಟ್​ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.   

ಕೊವಿಡ್​ 19 ಮೂರನೇ ಅಲೆ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಚಾರ್​ಧಾಮ್​ ಯಾತ್ರೆಗೆ ಅವಕಾಶ ನೀಡಲು ಉತ್ತರಾಖಂಡ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ವಿಜ್ಞಾನಿಗಳ ಸಮುದಾಯ ನೀಡಿದ ಎಚ್ಚರಿಕೆ ಅನ್ವಯ ತನ್ನ ತೀರ್ಪು ಪ್ರಕಟಿಸಿತ್ತು. ಅವಕಾಶ ಕೊಡಲು ಸರ್ಕಾರ ಮುಂದಾಗಿದ್ದರೂ ಅವಕಾಶ ನೀಡುವುದಿಲ್ಲ ಎಂದು ಹೇಳಿತ್ತು. ಇದೀಗ ಮತ್ತೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಉತ್ತರಾಖಂಡ್​ ಸರ್ಕಾರ, ಕೊವಿಡ್​ 19 ಪರಿಸ್ಥಿತಿ ಇದೀಗ ಸುಧಾರಿಸಿದೆ.  ಚಾರ್​ಧಾಮ್​ ಯಾತ್ರೆ ಯಾತ್ರಾರ್ಥಿಗಳಿಗೆ ಎಷ್ಟು ಮುಖ್ಯವೋ, ಹಾಗೇ, ಅದನ್ನು ನೆಚ್ಚಿಕೊಂಡು ಬದುಕು ಸಾಗಿಸುವವರೂ ಅನೇಕರು ಇದ್ದಾರೆ. ಈ ಕಾರಣಕ್ಕಾಗಿ ಯಾತ್ರೆಯನ್ನು ಅನುಮತಿಸಬೇಕು ಎಂದು ಮನವಿ ಮಾಡಿತ್ತು.  ಸದ್ಯ ಉತ್ತರಾಖಂಡ್​ನಲ್ಲಿ 296 ಮಾತ್ರ ಕೊವಿಡ್​ ಸಕ್ರಿಯ ಪ್ರಕರಣಗಳಿವೆ. ಪರಿಸ್ಥಿತಿಗಳನ್ನು ಪರಿಶೀಲಿಸಿದ ನಂತರ ಉತ್ತರಾಖಂಡ್ ಹೈಕೋರ್ಟ್ ಇದೀಗ ಯಾತ್ರೆಗೆ ಅನುಮತಿ ನೀಡಿದೆ.

ಇದನ್ನೂ ಓದಿ: ರೋಹಿತ್ ಮುಂದೆ ಕೊಹ್ಲಿ ಕೂಡ ಸೈಲೆಂಟ್! ಐಪಿಎಲ್‌ನಲ್ಲಿ ಯಾವ ತಂಡ ಯಾರ ವಿರುದ್ಧ ಹೆಚ್ಚು ಪಂದ್ಯ ಗೆದ್ದಿದೆ? ಇಲ್ಲಿದೆ ವಿವರ

ಆನ್​ಲೈನ್​ ಮೂಲಕ ಊಟ ತರಿಸಿಕೊಳ್ಳುವವರಲ್ಲಿ ನೀವೂ ಸೇರಿದ್ದರೆ, ನಿಮ್ಮ ಊಟಕ್ಕೆ ಹೆಚ್ಚು ಹಣ ನೀಡಲು ತಯಾರಾಗಿರಿ!

Published On - 6:19 pm, Thu, 16 September 21

ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!