Char Dham Yatra 2021: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧ ತೆರವುಗೊಳಿಸಿದ ಉತ್ತರಾಖಂಡ್ ಹೈಕೋರ್ಟ್​; ಈ ಷರತ್ತುಗಳ ಪಾಲನೆ ಕಡ್ಡಾಯ

| Updated By: Lakshmi Hegde

Updated on: Sep 16, 2021 | 6:26 PM

ಕೊವಿಡ್​ 19 ಮೂರನೇ ಅಲೆ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಚಾರ್​ಧಾಮ್​ ಯಾತ್ರೆಗೆ ಅವಕಾಶ ನೀಡಲು ಉತ್ತರಾಖಂಡ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ವಿಜ್ಞಾನಿಗಳ ಸಮುದಾಯ ನೀಡಿದ ಎಚ್ಚರಿಕೆ ಅನ್ವಯ ತನ್ನ ತೀರ್ಪು ಪ್ರಕಟಿಸಿತ್ತು.

Char Dham Yatra 2021: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧ ತೆರವುಗೊಳಿಸಿದ ಉತ್ತರಾಖಂಡ್ ಹೈಕೋರ್ಟ್​; ಈ ಷರತ್ತುಗಳ ಪಾಲನೆ ಕಡ್ಡಾಯ
ಬದ್ರಿನಾಥ ದೇಗುಲ
Follow us on

ಡೆಹ್ರಾಡೂನ್​: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧವನ್ನು ಉತ್ತಾರಖಂಡ ಹೈಕೋರ್ಟ್​ ಇಂದು ತೆರವುಗೊಳಿಸಿದೆ. ಆದರೆ ಕೊವಿಡ್​ 19 ನಿಯಮಗಳನ್ನು ಪಾಲಿಸುವುದನ್ನು ಕಡ್ಡಾಯ ಮಾಡಿದೆ. ಯಾತ್ರೆಗೆ ಬರುವವರು ಕಡ್ಡಾಯವಾಗಿ ಕೊರೊನಾ ವೈರಸ್​ ನೆಗೆಟಿವ್​ ರಿಪೋರ್ಟ್​ ತರಬೇಕು. ಎರಡೂ ಡೋಸ್​ ಲಸಿಕೆ ಪಡೆದ ಸರ್ಟಿಫಿಕೇಟ್​ ಹೊಂದಿರಬೇಕು ಎಂದು ಆದೇಶಿಸಿದೆ. ಹಾಗೇ, ಒಂದು ದಿನದಲ್ಲಿ ಕೇದಾರನಾಥ್​ ದೇಗುಲಕ್ಕೆ 800 ಭಕ್ತರು, ಬದ್ರಿನಾಥ್​​ ದೇವಾಲಯಕ್ಕೆ 1200ಜನರು, ಗಂಗೋತ್ರಿಗೆ 600 ಭಕ್ತರು ಮತ್ತು ಯಮುನೋತ್ರಿ ಧಾಮಕ್ಕೆ 400 ಭಕ್ತರಷ್ಟೇ ಆಗಮಿಸಬಹುದು ಎಂದೂ ಹೈಕೋರ್ಟ್​ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.   

ಕೊವಿಡ್​ 19 ಮೂರನೇ ಅಲೆ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಚಾರ್​ಧಾಮ್​ ಯಾತ್ರೆಗೆ ಅವಕಾಶ ನೀಡಲು ಉತ್ತರಾಖಂಡ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ವಿಜ್ಞಾನಿಗಳ ಸಮುದಾಯ ನೀಡಿದ ಎಚ್ಚರಿಕೆ ಅನ್ವಯ ತನ್ನ ತೀರ್ಪು ಪ್ರಕಟಿಸಿತ್ತು. ಅವಕಾಶ ಕೊಡಲು ಸರ್ಕಾರ ಮುಂದಾಗಿದ್ದರೂ ಅವಕಾಶ ನೀಡುವುದಿಲ್ಲ ಎಂದು ಹೇಳಿತ್ತು. ಇದೀಗ ಮತ್ತೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಉತ್ತರಾಖಂಡ್​ ಸರ್ಕಾರ, ಕೊವಿಡ್​ 19 ಪರಿಸ್ಥಿತಿ ಇದೀಗ ಸುಧಾರಿಸಿದೆ.  ಚಾರ್​ಧಾಮ್​ ಯಾತ್ರೆ ಯಾತ್ರಾರ್ಥಿಗಳಿಗೆ ಎಷ್ಟು ಮುಖ್ಯವೋ, ಹಾಗೇ, ಅದನ್ನು ನೆಚ್ಚಿಕೊಂಡು ಬದುಕು ಸಾಗಿಸುವವರೂ ಅನೇಕರು ಇದ್ದಾರೆ. ಈ ಕಾರಣಕ್ಕಾಗಿ ಯಾತ್ರೆಯನ್ನು ಅನುಮತಿಸಬೇಕು ಎಂದು ಮನವಿ ಮಾಡಿತ್ತು.  ಸದ್ಯ ಉತ್ತರಾಖಂಡ್​ನಲ್ಲಿ 296 ಮಾತ್ರ ಕೊವಿಡ್​ ಸಕ್ರಿಯ ಪ್ರಕರಣಗಳಿವೆ. ಪರಿಸ್ಥಿತಿಗಳನ್ನು ಪರಿಶೀಲಿಸಿದ ನಂತರ ಉತ್ತರಾಖಂಡ್ ಹೈಕೋರ್ಟ್ ಇದೀಗ ಯಾತ್ರೆಗೆ ಅನುಮತಿ ನೀಡಿದೆ.

ಇದನ್ನೂ ಓದಿ: ರೋಹಿತ್ ಮುಂದೆ ಕೊಹ್ಲಿ ಕೂಡ ಸೈಲೆಂಟ್! ಐಪಿಎಲ್‌ನಲ್ಲಿ ಯಾವ ತಂಡ ಯಾರ ವಿರುದ್ಧ ಹೆಚ್ಚು ಪಂದ್ಯ ಗೆದ್ದಿದೆ? ಇಲ್ಲಿದೆ ವಿವರ

ಆನ್​ಲೈನ್​ ಮೂಲಕ ಊಟ ತರಿಸಿಕೊಳ್ಳುವವರಲ್ಲಿ ನೀವೂ ಸೇರಿದ್ದರೆ, ನಿಮ್ಮ ಊಟಕ್ಕೆ ಹೆಚ್ಚು ಹಣ ನೀಡಲು ತಯಾರಾಗಿರಿ!

Published On - 6:19 pm, Thu, 16 September 21