AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ: ದೇವಾಲಯದಲ್ಲಿ ಮೋದಿ – ಯೋಗಿ ಸಹೋದರಿಯರ ಭೇಟಿ, ವಿಡಿಯೋ ವೈರಲ್

ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಹೋದರಿ ಉತ್ತರಾಖಂಡದ ಗರ್ವಾಲ್‌ನಲ್ಲಿರುವ ದೇವಾಲಯದಲ್ಲಿ ಭೇಟಿಯಾಗಿದ್ದಾರೆ.

ಉತ್ತರಾಖಂಡ: ದೇವಾಲಯದಲ್ಲಿ ಮೋದಿ - ಯೋಗಿ ಸಹೋದರಿಯರ ಭೇಟಿ, ವಿಡಿಯೋ ವೈರಲ್
ಯೋಗಿ - ಮೋದಿ ಸಹೋದರಿಯರ ಸಮಾಗಮ
ಅಕ್ಷಯ್​ ಪಲ್ಲಮಜಲು​​
|

Updated on:Aug 05, 2023 | 1:04 PM

Share

ಗರ್ವಾಲ್‌, ಆ.5: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸಹೋದರಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ( yogi adityanath) ಅವರ ಸಹೋದರಿ ಉತ್ತರಾಖಂಡದ ಗರ್ವಾಲ್‌ನಲ್ಲಿರುವ ದೇವಾಲಯದಲ್ಲಿ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರ ಸಹೋದರಿ ವಸಂತಿಬೆನ್ ಅವರು ಶ್ರಾವಣ ಮಾಸದ ಪ್ರಯುಕ್ತ ಶಿವನಿಗೆ ಪ್ರಾರ್ಥನೆ ಸಲ್ಲಿಸಲು ಪೌರಿ ಗಡ್ವಾಲ್‌ನಲ್ಲಿರುವ ನೀಲಕಂಠ ಮಹಾದೇವ ದೇವಸ್ಥಾನಕ್ಕೆ ತಮ್ಮ ಪತಿಯೊಂದಿಗೆ ಭೇಟಿ ನೀಡಿದ್ದಾರೆ. ಅಲ್ಲಿಂದ ಅವರು ಕೊಠಾರಿ ಗ್ರಾಮದ ಪಾರ್ವತಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್ ಅವರ ಸಹೋದರಿ ಶಶಿ ದೇವಿ ಅವರನ್ನು ಕಂಡು ಮಾತನಾಡಿಸಿದ್ದಾರೆ. ಇಬ್ಬರು ಕೂಡ ಜತೆಗೆಯಾಗಿ ಪಾರ್ವತಿಗೆ ಪೂಜೆ ಸಲ್ಲಿಸಿದ್ದಾರೆ.

ಇದೀಗ ಇಬ್ಬರು ಭೇಟಿಯಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಈ ವಿಡಿಯೋದಲ್ಲಿ ಇಬ್ಬರೂ ಪರಸ್ಪರ ತಬ್ಬಿಕೊಂಡು, ಶುಭಾಶಯ ತಿಳಿಸಿದ್ದಾರೆ. ಬಳಿಕ ದೇವಸ್ಥಾನದ ಕಡೆಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಒಬ್ಬ ಪ್ರಧಾನಿ ಮತ್ತು ಮುಖ್ಯಮಂತ್ರಿಯ ಸಹೋದರಿಯರು ಇಷ್ಟು ಸಾಮಾನ್ಯರಂತೆ ಇರಲು ಸಾಧ್ಯವೇ ಎಂದು ಟ್ವಿಟರ್​​ ಬಳಕೆದಾರರು ಕಮೆಂಟ್​​ ಮಾಡಿದ್ದಾರೆ.

ಇದನ್ನೂ ಓದಿ: ಕೈ ಮೇಲೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ​

ಈ ವಿಡಿಯೋವನ್ನು ಬಿಜೆಪಿ ನಾಯಕ ಅಜಯ್ ನಂದಾ ಅವರು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರ ಸಹೋದರಿ ಬಸಂತಿಬೆನ್ ಮತ್ತು ಸಿಎಂ ಯೋಗಿ ಅವರ ಸಹೋದರಿ ಶಶಿ ಅವರ ಭೇಟಿಯು ತುಂಬಾ ಸರಳವಾಗಿತ್ತು. ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಸಾರವನ್ನು ಈ ಭೇಟಿ ಸಾರುತ್ತದೆ ಎಂದು ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:00 pm, Sat, 5 August 23

Follow Us
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?