AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ: ದೇವಾಲಯದಲ್ಲಿ ಮೋದಿ – ಯೋಗಿ ಸಹೋದರಿಯರ ಭೇಟಿ, ವಿಡಿಯೋ ವೈರಲ್

ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಹೋದರಿ ಉತ್ತರಾಖಂಡದ ಗರ್ವಾಲ್‌ನಲ್ಲಿರುವ ದೇವಾಲಯದಲ್ಲಿ ಭೇಟಿಯಾಗಿದ್ದಾರೆ.

ಉತ್ತರಾಖಂಡ: ದೇವಾಲಯದಲ್ಲಿ ಮೋದಿ - ಯೋಗಿ ಸಹೋದರಿಯರ ಭೇಟಿ, ವಿಡಿಯೋ ವೈರಲ್
ಯೋಗಿ - ಮೋದಿ ಸಹೋದರಿಯರ ಸಮಾಗಮ
ಅಕ್ಷಯ್​ ಪಲ್ಲಮಜಲು​​
|

Updated on:Aug 05, 2023 | 1:04 PM

Share

ಗರ್ವಾಲ್‌, ಆ.5: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸಹೋದರಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ( yogi adityanath) ಅವರ ಸಹೋದರಿ ಉತ್ತರಾಖಂಡದ ಗರ್ವಾಲ್‌ನಲ್ಲಿರುವ ದೇವಾಲಯದಲ್ಲಿ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರ ಸಹೋದರಿ ವಸಂತಿಬೆನ್ ಅವರು ಶ್ರಾವಣ ಮಾಸದ ಪ್ರಯುಕ್ತ ಶಿವನಿಗೆ ಪ್ರಾರ್ಥನೆ ಸಲ್ಲಿಸಲು ಪೌರಿ ಗಡ್ವಾಲ್‌ನಲ್ಲಿರುವ ನೀಲಕಂಠ ಮಹಾದೇವ ದೇವಸ್ಥಾನಕ್ಕೆ ತಮ್ಮ ಪತಿಯೊಂದಿಗೆ ಭೇಟಿ ನೀಡಿದ್ದಾರೆ. ಅಲ್ಲಿಂದ ಅವರು ಕೊಠಾರಿ ಗ್ರಾಮದ ಪಾರ್ವತಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್ ಅವರ ಸಹೋದರಿ ಶಶಿ ದೇವಿ ಅವರನ್ನು ಕಂಡು ಮಾತನಾಡಿಸಿದ್ದಾರೆ. ಇಬ್ಬರು ಕೂಡ ಜತೆಗೆಯಾಗಿ ಪಾರ್ವತಿಗೆ ಪೂಜೆ ಸಲ್ಲಿಸಿದ್ದಾರೆ.

ಇದೀಗ ಇಬ್ಬರು ಭೇಟಿಯಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಈ ವಿಡಿಯೋದಲ್ಲಿ ಇಬ್ಬರೂ ಪರಸ್ಪರ ತಬ್ಬಿಕೊಂಡು, ಶುಭಾಶಯ ತಿಳಿಸಿದ್ದಾರೆ. ಬಳಿಕ ದೇವಸ್ಥಾನದ ಕಡೆಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಒಬ್ಬ ಪ್ರಧಾನಿ ಮತ್ತು ಮುಖ್ಯಮಂತ್ರಿಯ ಸಹೋದರಿಯರು ಇಷ್ಟು ಸಾಮಾನ್ಯರಂತೆ ಇರಲು ಸಾಧ್ಯವೇ ಎಂದು ಟ್ವಿಟರ್​​ ಬಳಕೆದಾರರು ಕಮೆಂಟ್​​ ಮಾಡಿದ್ದಾರೆ.

ಇದನ್ನೂ ಓದಿ: ಕೈ ಮೇಲೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ​

ಈ ವಿಡಿಯೋವನ್ನು ಬಿಜೆಪಿ ನಾಯಕ ಅಜಯ್ ನಂದಾ ಅವರು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರ ಸಹೋದರಿ ಬಸಂತಿಬೆನ್ ಮತ್ತು ಸಿಎಂ ಯೋಗಿ ಅವರ ಸಹೋದರಿ ಶಶಿ ಅವರ ಭೇಟಿಯು ತುಂಬಾ ಸರಳವಾಗಿತ್ತು. ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಸಾರವನ್ನು ಈ ಭೇಟಿ ಸಾರುತ್ತದೆ ಎಂದು ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:00 pm, Sat, 5 August 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ