AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವೆಲ್ಲರೂ ಸಾಯುತ್ತೀರಿ: ದ್ವೇಷ ಭಾಷಣ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುತ್ತಿದ್ದಂತೆ ಪೊಲೀಸರ ವಿರುದ್ಧ ಗುಡುಗಿದ ಯತಿ ನರಸಿಂಹಾನಂದ

Dharma Sansad hate speech ತ್ಯಾಗಿ ಅವರನ್ನು ಬಂಧಿಸಲಾಗಿದ್ದು, ಸಿಆರ್‌ಪಿಸಿಯ ಸೆಕ್ಷನ್ 41 ಎ ಅಡಿಯಲ್ಲಿ ಹಾಜರಾಗುವಂತೆ ಯತಿ ನರಸಿಂಹಾನಂದ ಮತ್ತು ಸಾಧ್ವಿ ಅನ್ನಪೂರ್ಣ ಅವರಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ.

ನೀವೆಲ್ಲರೂ ಸಾಯುತ್ತೀರಿ: ದ್ವೇಷ ಭಾಷಣ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುತ್ತಿದ್ದಂತೆ ಪೊಲೀಸರ ವಿರುದ್ಧ ಗುಡುಗಿದ ಯತಿ ನರಸಿಂಹಾನಂದ
ದ್ವೇಷ ಭಾಷಣ ಪ್ರಕರಣದಲ್ಲಿ ಜಿತೇಂದ್ರ ನಾರಾಯಣ್ ತ್ಯಾಗಿ ಬಂಧನ
TV9 Web
| Edited By: |

Updated on: Jan 14, 2022 | 3:58 PM

Share

ದೆಹಲಿ: ಧರ್ಮ ಸಂಸದ್ ದ್ವೇಷ ಭಾಷಣ (HateSpeech) ಪ್ರಕರಣದಲ್ಲಿ ಉತ್ತರಾಖಂಡ ಪೊಲೀಸರು ಗುರುವಾರ ಮೊದಲ ಬಂಧನವನ್ನು ಮಾಡಿದ್ದಾರೆ. ಹರಿದ್ವಾರ (Haridwar) ಜಿಲ್ಲೆಯ ರೂರ್ಕಿಯಿಂದ ಜಿತೇಂದ್ರ ನಾರಾಯಣ ತ್ಯಾಗಿ ಎಂದು ಕರೆಯಲ್ಪಡುವ ವಸೀಮ್ ರಿಜ್ವಿಯನ್ನು ಪೊಲೀಸರು ಬಂಧಿಸಿದ್ದು ಇನ್ನಿಬ್ಬರು ಪ್ರಮುಖ ಆರೋಪಿಗಳಾದ ಯತಿ ನರಸಿಂಹಾನಂದ ಸರಸ್ವತಿ ಮತ್ತು ಸಾಧ್ವಿ ಅನ್ನಪೂರ್ಣ ಅವರು ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ಗಳಲ್ಲಿ ಮೂವರನ್ನೂ ಇತರರೊಂದಿಗೆ ಹೆಸರಿಸಲಾಗಿದೆ. ತ್ಯಾಗಿ ಅವರನ್ನು ಬಂಧಿಸಲಾಗಿದ್ದು, ಸಿಆರ್‌ಪಿಸಿಯ ಸೆಕ್ಷನ್ 41 ಎ ಅಡಿಯಲ್ಲಿ ಹಾಜರಾಗುವಂತೆ ಯತಿ ನರಸಿಂಹಾನಂದ ಮತ್ತು ಸಾಧ್ವಿ ಅನ್ನಪೂರ್ಣ ಅವರಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.ತ್ಯಾಗಿಯ ಬಂಧನದ ವಿಡಿಯೊದಲ್ಲಿ, ನರಸಿಂಹಾನಂದರು ಪೊಲೀಸರಿಗೆ ಬೆದರಿಕೆ ಹಾಕುವುದನ್ನು ಮತ್ತು ತ್ಯಾಗಿಯನ್ನು ಏಕೆ ಬಂಧಿಸಲಾಗುತ್ತಿದೆ ಎಂದು ಕೇಳುವುದನ್ನು ಕಾಣಬಹುದು. ಎನ್​​ಡಿಟಿವಿ ಪ್ರಕಾರ, “ತುಮ್ ಸಬ್ ಮರೋಗೆ (ನೀವೆಲ್ಲರೂ ಸಾಯುತ್ತೀರಿ)” ಎಂದು ಅವರು ಹೇಳುತ್ತಿದ್ದಾರೆ.

“ಮೂರೂ ಪ್ರಕರಣಗಳಲ್ಲಿ ನಾನು ಅವರೊಂದಿಗಿದ್ದೇನೆ. ಅವನು ಒಬ್ಬನೇ ಮಾಡಿದ್ದಾನಾ?” ಎಂದು ಯತಿ ಕೇಳಿದ್ದಾರೆ.  “ತ್ಯಾಗಿ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ” ಎಂದು ಅಧಿಕಾರಿಗಳು ಹೇಳುತ್ತಿದ್ದಂತೆ, ನರಸಿಂಹಾನಂದ, “ಆದರೆ ನಾನು ಅಲ್ಲ. ನಮ್ಮ ಬೆಂಬಲದ ಮೇಲೆ ಅವರು ಹಿಂದೂ ಆದರು ಎಂದಿದ್ದಾರೆ. ನರಸಿಂಹಾನಂದ ಅವರು ಹರಿದ್ವಾರದಲ್ಲಿ ಧರ್ಮ ಸಂಸದ್ ಆಯೋಜಿಸಿದ್ದ ಗಾಜಿಯಾಬಾದ್‌ನ ದಾಸ್ನಾ ದೇವಸ್ಥಾನದ ವಿವಾದಿತ ಅರ್ಚಕರಾಗಿದ್ದರೆ, ಸಾಧ್ವಿ ಅನ್ನಪೂರ್ಣ ಅವರು ಮುಸ್ಲಿಮರ ವಿರುದ್ಧ ಹೆಚ್ಚು ಪ್ರಚೋದನಕಾರಿ ಭಾಷಣ ಮಾಡಿದ ಕಾರ್ಯಕ್ರಮದಲ್ಲಿ ಭಾಷಣಕಾರರಲ್ಲಿ ಒಬ್ಬರು.

ರೂರ್ಕಿಯ ನರ್ಸನ್ ಗಡಿಯಲ್ಲಿ ತ್ಯಾಗಿಯನ್ನು ಬಂಧಿಸಲಾಗಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಯೋಗೇಂದ್ರ ರಾವತ್ ಪಿಟಿಐಗೆ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ಗಳಲ್ಲಿ 10ಕ್ಕೂ ಹೆಚ್ಚು ಜನರ ಹೆಸರಿದೆ. ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವ ಮೊದಲು ಮತ್ತು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳುವ ಮುನ್ನ ತ್ಯಾಗಿ ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಮುಖ್ಯಸ್ಥರಾಗಿದ್ದರು.

ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ. ಹೆಚ್ಚಿನ ಬಂಧನಗಳು ನಡೆಯಲಿದೆಯೇ ಎಂದು ಕೇಳಿದಾಗ, ತನಿಖೆ ಹೇಗೆ ಮುಂದುವರಿಯುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಎಸ್‌ಎಸ್‌ಪಿ ಹೇಳಿದರು. ಸಮಾರಂಭದಲ್ಲಿ ಭಾಷಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಉತ್ತರಾಖಂಡ ಸರ್ಕಾರಕ್ಕೆ ವಿವಿಧ ವಲಯಗಳಿಂದ ಭಾರಿ ಒತ್ತಡ ಬಂದಿದೆ. ಘಟನೆ ನಡೆದು ಹಲವು ದಿನಗಳು ಕಳೆದರೂ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳದ ರಾಜ್ಯ ಸರಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿತ್ತು.

ಇದನ್ನೂ ಓದಿ: Joginder Singh Mann ಕಾಂಗ್ರೆಸ್ ಪಕ್ಷ ತೊರೆದ ಪಂಜಾಬ್​​ನ ಮಾಜಿ ಸಚಿವ ಜೋಗಿಂದರ್ ಸಿಂಗ್ ಮಾನ್

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ