ಶಾಸಕರಿಂದ ‘ಅಸಮರ್ಥ’ ಎನಿಸಿಕೊಂಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾಜೀನಾಮೆ

Uttarakhand Politics Trivendra Singh Rawat: ಉತ್ತರಾಖಂಡದಲ್ಲಿ ಮುಂದಿನ ವರ್ಷ ಫೆಬ್ರುವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾವತ್ ಉತ್ತರಾಧಿಕಾರಿಯನ್ನು ಬಿಜೆಪಿ ಇನ್ನೂ ಘೋಷಿಸಿಲ್ಲ.

ಶಾಸಕರಿಂದ ‘ಅಸಮರ್ಥ’ ಎನಿಸಿಕೊಂಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾಜೀನಾಮೆ
ಉತ್ತರಾಖಂಡ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉಪೇಂದ್ರ ಸಿಂಗ್ ರಾವತ್
Follow us
|

Updated on:Mar 09, 2021 | 4:49 PM

ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಂಗಳವಾರ (ಮಾರ್ಚ್ 9) ಘೋಷಿಸಿದರು. ನಿನ್ನೆಯಷ್ಟೇ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ತ್ರಿವೇಂದ್ರ ಸಿಂಗ್​ ಭೇಟಿಯಾಗಿ ಚರ್ಚಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ರಾಜೀನಾಮೆ ನಿರ್ಧಾರ ಪ್ರಕಟಿಸಿರುವ ರಾವತ್, ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರಿಗೆ ಕೆಲ ಸಮಯದ ಮೊದಲು ರಾಜೀನಾಮೆ ಪತ್ರ ಹಸ್ತಾಂತರಿಸಿದರು. ಉತ್ತರಾಖಂಡದಲ್ಲಿ ಮುಂದಿನ ವರ್ಷ ಫೆಬ್ರುವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾವತ್ ಉತ್ತರಾಧಿಕಾರಿಯನ್ನು ಬಿಜೆಪಿ ಇನ್ನೂ ಘೋಷಿಸಿಲ್ಲ.

ತಮ್ಮದೇ ಪಕ್ಷದ ಶಾಸಕರಿಂದ ಅವರು ‘ಅಸಮರ್ಥ ಮುಖ್ಯಮಂತ್ರಿ’ (below average) ಎನಿಸಿಕೊಂಡಿದ್ದರು. ಇವರು ಮುಖ್ಯಮಂತ್ರಿಯಾಗಿ ಮುಂದುವರಿದರೆ ಮುಂದಿನ ವರ್ಷದ ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ಕಳಪೆ ಸಾಧನೆ ಮಾಡಬಹುದು ಎಂಬ ಆತಂಕ ಶಾಸಕರಿಂದ ವ್ಯಕ್ತವಾಗಿತ್ತು.

ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದ ತ್ರಿವೇಂದ್ರ ಸಿಂಗ್, ಉತ್ತರಾಖಂಡ ರಾಜಕಾರಣದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು. ರಾವತ್ ಅವರ ಸ್ಥಾನ ತುಂಬಲಿರುವ ವ್ಯಕ್ತಿಯ ಬಗ್ಗೆಯೂ ಚರ್ಚೆ ನಡೆಯಿತು. ಉತ್ತರಾಖಂಡ ಸಂಪುಟದಲ್ಲಿ ಸಚಿವರಾಗಿರುವ ಧನ್ ಸಿಂಗ್ ರಾವತ್ ಮತ್ತು ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಹೆಸರುಗಳು ಪ್ರಬಲವಾಗಿ ಕೇಳಿಬರುತ್ತಿವೆ.

ಧನ್ ಸಿಂಗ್ ರಾವತ್ ಖಾಸಗಿ ಹೆಲಿಕಾಪ್ಟರ್​ನಲ್ಲಿ ಘರ್ವಾಲ್​ನಿಂದ ಡೆಹ್ರಾಡೂನ್​ಗೆ ಖಾಸಗಿ ಹೆಲಿಕಾಪ್ಟರ್​ನಲ್ಲಿ ಧಾವಿಸುತ್ತಿದ್ದಾರೆ. ಬಿಜೆಪಿಯ ಕೇಂದ್ರ ಸಮಿತಿ ನಿರೀಕ್ಷರಾದ ರಮಣ್ ಸಿಂಗ್ ಮತ್ತು ದುಶ್ಯಂತ್ ಗೌತಮ್ ಅವರು ಶನಿವಾರ ಉತ್ತರಾಖಂಡಕ್ಕೆ ಭೇಟಿ ನೀಡಿದ ನಂತರ ಚುನಾವಣೆಗೂ ಮುನ್ನ ಉತ್ತರಾಖಂಡದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಶಾಸಕರು, ಸಚಿವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥರು ಮತ್ತು ಮುಖ್ಯಮಂತ್ರಿಯನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚಿಸಿದ ಕೇಂದ್ರ ಸಮಿತಿಯ ಸದಸ್ಯರು ಪಕ್ಷದ ಅಧ್ಯಕ್ಷರಿಗೆ ವರದಿ ಸಲ್ಲಿಸಿದ್ದರು.

ರಾವತ್ ನಾಯಕತ್ವ ಮುಂದುವರಿದರೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಬಹುತೇಕ ಶಾಸಕರು ಅಭಿಪ್ರಾಯಪಟ್ಟಿದ್ದಾರೆ ಎಂಬ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿದೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುವಲ್ಲಿ ರಾವತ್ ವಿಫಲರಾಗಿದ್ದಾರೆ ಎಂದು ಶಾಸಕರು ಆರೋಪಿಸಿದ್ದರು.

ಹೆಚ್ಚು ಪ್ರಚಾರಕ್ಕೆ ಬಾರದ, ತನ್ನ ಪಾಡಿಗೆ ತಾನು ಕೆಲಸ ಮಾಡಿಕೊಂಡು ಹೋಗುವ ಸ್ವಭಾವದ ತ್ರಿವೇಂದ್ರ ಸಿಂಗ್​ ರಾವತ್ ಅವರಿಗೆ ಈಗ ವರ್ಷ. ನಿಧಾನಗತಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಅವರ ಪ್ರವೃತ್ತಿಯು ಪಕ್ಷದ ಹಿನ್ನಡೆಗೆ ಕಾರಣವಾಗಬಹುದು ಎಂದು ಬಿಜೆಪಿ ಶಾಸಕರು ಆತಂಕ ವ್ಯಕ್ತಪಡಿಸಿದ್ದರು. ಕೆಲ ಸಮೀಕ್ಷೆಗಳು ರಾವತ್ ಅವರ ಕಾರ್ಯನಿರ್ವಹಣೆಯು ಜನಪ್ರಿಯತೆ ಗಳಿಸಿಲ್ಲ ಎಂದು ಸಾರಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಪಕ್ಷದ ನಿರ್ಧಾರದಂತೆ ರಾಜೀನಾಮೆ ರಾಜ್ಯಕ್ಕೆ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಲು ಪಕ್ಷವು ನನಗೆ ಅವಕಾಶ ನೀಡಿತ್ತು. ನನಗೆ ಇಂಥ ಅವಕಾಶ ಸಿಗಬಹುದು ಎಂದು ನಾನೆಂದೂ ಭಾವಿಸಿರಲಿಲ್ಲ. ಇದೀಗ ಪಕ್ಷವು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಮತ್ತೊಬ್ಬರಿಗೆ ನೀಡಬೇಕು ಎಂದು ಚಿಂತನೆ ನಡೆಸಿದೆ ಎಂದು ರಾವತ್ ಡೆಹ್ರಾಡೂನ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇದನ್ನೂ ಓದಿ: ಉತ್ತರಾಖಂಡ್‌ನಲ್ಲಿ ಕನ್ನಡಿಗನನ್ನು ರಕ್ಷಿಸಿದ ಯೋಧರು! ಈತ ಬೆಟಗೇರಿಯಿಂದ 25 ವರ್ಷ ಹಿಂದೆ ಊರುಬಿಟ್ಟು ಹೋಗಿದ್ದ..

ಇದನ್ನೂ ಓದಿ: ರಾಜಕೀಯ ವಿಶ್ಲೇಷಣೆ: ಮಧ್ಯಂತರ ಚುನಾವಣೆಗೆ ಹೋಗಲು ಜನಪ್ರಿಯ ಬಜೆಟ್ ಕೊಟ್ರಾ ಯಡಿಯೂರಪ್ಪ?

Published On - 4:41 pm, Tue, 9 March 21

ತಾಜಾ ಸುದ್ದಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ