AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Rain: ಉತ್ತರಾಖಂಡದಲ್ಲಿ ಮಳೆಯಿಂದ 34 ಜನ ಸಾವು; ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Uttarakhand Flood: ಪ್ರವಾಹದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಹಾಗೂ ಮನೆ ಕಳೆದುಕೊಂಡವರಿಗೆ 1.9 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಾಖಂಡ್​​ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ.

Uttarakhand Rain: ಉತ್ತರಾಖಂಡದಲ್ಲಿ ಮಳೆಯಿಂದ 34 ಜನ ಸಾವು; ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರಿಂದ ವೈಮಾನಿಕ ಸಮೀಕ್ಷೆ
TV9 Web
| Edited By: |

Updated on: Oct 19, 2021 | 8:26 PM

Share

ಉತ್ತರಾಖಂಡ್: ಉತ್ತರಾಖಂಡ್​​ನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಉತ್ತರಾಖಂಡದಲ್ಲಿ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಪ್ರವಾಹ ಮತ್ತು ಭೂಕುಸಿತದಲ್ಲಿ 5 ಜನರು ನಾಪತ್ತೆಯಾಗಿದ್ದಾರೆ. ಮೃತರ ಕುಟುಂಬಕ್ಕೆ ಉತ್ತರಾಖಂಡ ಸರ್ಕಾರದಿಂದ ತಲಾ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

2-3 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡದಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಹಾಗೂ ಮನೆ ಕಳೆದುಕೊಂಡವರಿಗೆ 1.9 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಾಖಂಡ್​​ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ. ಜಾನುವಾರು ಕಳೆದುಕೊಂಡವರಿಗೆ ಅಗತ್ಯ ನೆರವು ‌ಭರವಸೆಯನ್ನೂ ರಾಜ್ಯ ಸರ್ಕಾರ ನೀಡಿದೆ.

ಪ್ರವಾಹದಿಂದ ಮುಳುಗಡೆಯಾದ ಸ್ಥಳಗಳಿಗೆ ಇಂದು ಸಿಎಂ ಪುಷ್ಕರ್ ಸಿಂಗ್ ಧಾಮಿ ತೆರಳಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಪ್ರಸಿದ್ಧ ಪ್ರವಾಸಿ ಸ್ಥಳವಾಗಿರುವ ನೈನಿತಾಲ್​ನಲ್ಲಿ ಇಂದು ಮುಂಜಾನೆಯಿಂದ ಸಾಲು ಸಾಲಾಗಿ ಭೂಕುಸಿತವಾಗುತ್ತಿರುವುದರಿಂದ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಉತ್ತರಾಖಂಡ ರಾಜ್ಯದ ಉಳಿದ ಭಾಗಕ್ಕೂ ರಸ್ತೆಸಂಪರ್ಕ ಕಡಿತವಾಗಿದೆ. ಕುಮೋನ್ ಪ್ರಾಂತ್ಯದಲ್ಲಿ ಇಂದು ಮಳೆ ಮುಂದುವರಿದ ಪರಿಣಾಮ ಮನೆಗಳು ಕುಸಿದು ಬಿದ್ದಿವೆ. ಈ ಭಾಗದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ನೈನಿತಾಲ್​ನಲ್ಲಿ ಇಂದು ಸಂಜೆ ಮತ್ತೆ ಐವರು ಕಾರ್ಮಿಕರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ.

ಉತ್ತರಾಖಂಡ ರಾಜ್ಯದಲ್ಲಿ ಮಳೆ, ಭೂಕುಸಿತದಿಂದ 16 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಭೂಕುಸಿತ ಮತ್ತು ಪ್ರವಾಹದಿಂದ 5 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ನೈನಿತಾಲ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಸಾವಿನ ಸಂಖ್ಯೆ ಏರುತ್ತಲೇ ಇದೆ. ಕಳೆದ ಮೂರು ದಿನಗಳಿಂದಲೂ ಸುರಿಯುತ್ತಿರುವ ಮಳೆ ಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಮೂರು ಹೆಲಿಕಾಪ್ಟರ್​ಗಳನ್ನು ಬಳಸಲಾಗುತ್ತಿದೆ.

ಕೇಂದ್ರ ಸರ್ಕಾರದಿಂದ ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಾಯ ಮಾಡುವುದಾಗಿ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಇದರ ನಡುವೆ ಉತ್ತರಾಖಂಡದ ಪ್ರವಾಹ ಮತ್ತು ಭೂಕುಸಿತದ ಆಘಾತಕಾರಿ ವಿಡಿಯೋಗಳು ಟ್ವಿಟ್ಟರ್​ನಲ್ಲಿ ಹರಿದಾಡುತ್ತಿವೆ. ಉತ್ತರಾಖಂಡದ ಪ್ರವಾಹ ಸ್ಥಿತಿ ಗಂಭೀರವಾಗುತ್ತಲೇ ಇದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿಯೊಂದಿಗೆ ಮಾತನಾಡಿದ್ದಾರೆ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಿರುವ ಎಲ್ಲಾ ಸಹಾಯದ ಭರವಸೆ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಧಾಮಿ ಪ್ರಧಾನಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Uttarakhand Flood: ಉತ್ತರಾಖಂಡ ಪ್ರವಾಹದಿಂದ 16 ಜನ ಸಾವು; ಭೂಕುಸಿತದಿಂದ ದ್ವೀಪವಾದ ನೈನಿತಾಲ್

ಉತ್ತರಾಖಂಡ್​​ ಮಳೆಗೆ 5 ಮಂದಿ ಬಲಿ; ಸಿಎಂಗೆ ಕರೆ ಮಾಡಿ ಪರಿಸ್ಥಿತಿಯ ವರದಿ ಕೇಳಿದ ಪ್ರಧಾನಿ ಮೋದಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ