Uttarakhand Cloudburst: ಉತ್ತರಾಖಂಡದಲ್ಲಿ ಮೇಘಸ್ಫೋಟ, 200ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ

|

Updated on: Jul 07, 2023 | 12:15 PM

ಉತ್ತರಾಖಂಡ(Uttarakhand)ದ ಪಿಥೋರ್​ಗಢದಲ್ಲಿ ಮೇಘಸ್ಫೋಟ(Clud burst)  ಸಂಭವಿಸಿದ್ದು, ಭೂಕುಸಿತ ಉಂಟಾಗಿದ್ದು ಗ್ರಾಮದಲ್ಲಿ 200ಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ

Uttarakhand Cloudburst: ಉತ್ತರಾಖಂಡದಲ್ಲಿ ಮೇಘಸ್ಫೋಟ, 200ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ
ಉತ್ತರಾಖಂಡ ಮೇಘಸ್ಫೋಟ
Image Credit source: India Today
Follow us on

ಉತ್ತರಾಖಂಡ(Uttarakhand)ದ ಪಿಥೋರ್​ಗಢದಲ್ಲಿ ಮೇಘಸ್ಫೋಟ(Clud burst)  ಸಂಭವಿಸಿದ್ದು, ಭೂಕುಸಿತ ಉಂಟಾಗಿದ್ದು ಗ್ರಾಮದಲ್ಲಿ 200ಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ. ಉತ್ತರಾಖಂಡದ ಧಾರ್ಚುಲಾದಲ್ಲಿ ದರ್ಮಾ ಕಣಿವೆಯ ಚಾಲ್ ಗ್ರಾಮದಲ್ಲಿ ಮೇಘಸ್ಫೋಟದಿಂದಾಗಿ ಪಾದಚಾರಿ ಸೇತುವೆ ಮತ್ತು ಟ್ರಾಲಿ ನಾಶವಾಗಿದೆ. ಗ್ರಾಮದಲ್ಲಿ 200ಕ್ಕೂ ಹೆಚ್ಚು ಮಂದಿ ಸಿಲುಕಿಕೊಂಡಿದ್ದಾರೆ. ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ಆಡಳಿತವು ಸ್ಥಳಕ್ಕೆ ತೆರಳಿದೆ, ಆದರೆ ದೋಬಾತ್‌ನಲ್ಲಿ ರಸ್ತೆಯನ್ನು ಮುಚ್ಚಿರುವುದರಿಂದ, ರಕ್ಷಣೆಗೆ ತೆರಳುತ್ತಿರುವ ಪೊಲೀಸ್ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡವೂ ಸಂಕಷ್ಟಕ್ಕೆ ಸಿಲುಕಿದೆ.

ಬದರಿನಾಥದಲ್ಲಿ ಇಂದು ಮತ್ತೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಚೀಂಕಾ ಬಳಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ಹಲವು ಪ್ರಯಾಣಿಕರು ಪರದಾಡುವಂತಾಯಿತು. ಸಂಚಾರ ಸ್ಥಗಿತಗೊಂಡಿದೆ.

ಮತ್ತಷ್ಟು ಓದಿ: Amarnath Yatra: ಕಾಶ್ಮೀರದಲ್ಲಿ ಭಾರೀ ಮಳೆ, ಅಮರನಾಥ ಯಾತ್ರೆ ಸ್ಥಗಿತ

ಮುಂದಿನ ದಿನಗಳಲ್ಲಿ ದೇಶದ ಏಳು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವುದರಿಂದ ಈ ಬಾರಿಯ ಭಾರೀ ಮಳೆಯು ಮುಂದಿನ ದಿನಗಳಲ್ಲಿ ಹೆಚ್ಚಿನ ತೊಂದರೆಯನ್ನು ತಂದೊಡ್ಡಬಹುದು ಎಂದು ಅಂದಾಜಿಸಲಾಗಿದೆ.

ಉತ್ತರಾಖಂಡದಲ್ಲಿ ಮುಂಗಾರು ಆರಂಭವಾದಾಗಿನಿಂದ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯಾದ್ಯಂತ ಗುಡ್ಡಗಾಡು ಪ್ರದೇಶಗಳಲ್ಲಿ ಸಂಭವಿಸುತ್ತಿರುವ ಭೂಕುಸಿತಗಳು ಭಾರಿ ಸಮಸ್ಯೆಗಳನ್ನು ಉಂಟುಮಾಡುತ್ತಿವೆ. ರಸ್ತೆಗೆ ಅಪಾರ ಪ್ರಮಾಣದ ಅವಶೇಷಗಳು, ಕಲ್ಲುಗಳು ಬಿದ್ದಿದ್ದು, ರಸ್ತೆ ಸಂಪೂರ್ಣ ಬಂದ್ ಆಗಿದೆ.

ಮತ್ತಷ್ಟು ಓದಿ: Karnataka Rains: ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರು, ರೆಡ್ ಅಲರ್ಟ್​ ಘೋಷಣೆ

ಹಿಮಾಚಲ ಪ್ರದೇಶದಿಂದ ರಾಜಸ್ಥಾನ, ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಕೇರಳ, ಉತ್ತರಾಖಂಡದವರೆಗೆ ಮುಂಬರುವ ಗಂಟೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದೆಹಲಿ-ಎನ್‌ಸಿಆರ್‌ನಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಕೇರಳ, ಕರ್ನಾಟಕದಲ್ಲೂ ಭಾರಿ ಮಳೆಯಾಗುತ್ತಿದೆ.

ನಗರದ ಪ್ರದೇಶಗಳಷ್ಟೇ ಅಲ್ಲದೆ ಗ್ರಾಮಿಣ ಪ್ರದೇಶಗಳಲ್ಲೂ ರಸ್ತೆಗಳು ತುಂಬಿ ತುಳುಕುತ್ತಿವೆ. ಕೇರಳದ ಇಡುಕ್ಕಿ, ಮಲಪ್ಪುರಂ, ಕೋಳಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೇರಳದ 11 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ