AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ: ಶವಾಗಾರದಲ್ಲಿರಿಸಿದ್ದ ವ್ಯಕ್ತಿಯ ಗುರುತೇ ಸಿಗದಂತೆ ದೇಹವನ್ನು ಕಚ್ಚಿ ತಿಂದ ಇಲಿಗಳು

ಮರಣೋತ್ತರ ಪರೀಕ್ಷೆ ಬಳಿಕ ಶವಾಗಾರದಲ್ಲಿ ಇರಿಸಲಾಗಿದ್ದ ವ್ಯಕ್ತಿಯ ದೇಹವನ್ನು ಗುರುತೇ ಸಿಗದ ರೀತಿಯಲ್ಲಿ ಇಲಿಗಳು ತಿಂದಿರುವ ಘಟನೆ ವರದಿಯಾಗಿದೆ. ಉತ್ತರಾಖಂಡ್‌ನ ಪೌರಿಯಲ್ಲಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ, ಕ್ತಿಯೊಬ್ಬರ ದೇಹವು ಇಲಿಗಳಿಂದ ಭಾಗಶಃ ವಿರೂಪಗೊಂಡ ಸ್ಥಿತಿಯಲ್ಲಿ ಇತ್ತೀಚೆಗೆ ಪತ್ತೆಯಾಗಿದೆ.

ಉತ್ತರಾಖಂಡ: ಶವಾಗಾರದಲ್ಲಿರಿಸಿದ್ದ ವ್ಯಕ್ತಿಯ ಗುರುತೇ ಸಿಗದಂತೆ ದೇಹವನ್ನು ಕಚ್ಚಿ ತಿಂದ ಇಲಿಗಳು
ಉತ್ತರಾಖಂಡ ಆಸ್ಪತ್ರೆImage Credit source: India Today
ನಯನಾ ರಾಜೀವ್
|

Updated on: Dec 12, 2023 | 7:48 AM

Share

ಮರಣೋತ್ತರ ಪರೀಕ್ಷೆ ಬಳಿಕ ಶವಾಗಾರದಲ್ಲಿ ಇರಿಸಲಾಗಿದ್ದ ವ್ಯಕ್ತಿಯ ದೇಹವನ್ನು ಗುರುತೇ ಸಿಗದ ರೀತಿಯಲ್ಲಿ ಇಲಿಗಳು ತಿಂದಿರುವ ಘಟನೆ ವರದಿಯಾಗಿದೆ. ಉತ್ತರಾಖಂಡ್‌ನ ಪೌರಿಯಲ್ಲಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ, ಕ್ತಿಯೊಬ್ಬರ ದೇಹವು ಇಲಿಗಳಿಂದ ಭಾಗಶಃ ವಿರೂಪಗೊಂಡ ಸ್ಥಿತಿಯಲ್ಲಿ ಇತ್ತೀಚೆಗೆ ಪತ್ತೆಯಾಗಿದೆ.

ಆಸ್ಪತ್ರೆ ಆಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಅಧಿಕಾರಿಯಾಗಿದ್ದ ವ್ಯಕ್ತಿ ಶುಕ್ರವಾರದಂದು ಅಸ್ವಸ್ಥತೆಯಿಂದ ಮೃತಪಟ್ಟಿದ್ದಾರೆ. ಅವರ ಕುಟುಂಬದವರು ಶವಪರೀಕ್ಷೆಗೆ ಮನವಿ ಮಾಡಿದ್ದರು.

ಶವವನ್ನು ಇರಿಸಲಾಗಿದ್ದ ಫ್ರೀಜರ್‌ನ ಬೀಗ ಮುರಿದಿತ್ತು ಎಂದು ವ್ಯಕ್ತಿಯ ಸಹೋದರ ನಿತಿನ್ ಉಪ್ರೇತಿ ಹೇಳಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗೆ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರೂ, ದೇಹವು ಸುರಕ್ಷಿತವಾಗಿರುತ್ತದೆ ಎಂದು ಅವರು ಭರವಸೆ ನೀಡಿದರು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಮಹಿಳೆಯ ದೇಹವನ್ನು ಕಚ್ಚಿ ತಿಂದ ಇಲಿಗಳು

ಮರಣೋತ್ತರ ಪರೀಕ್ಷೆ ಮಾಡಿದ್ದ ಕೊಠಡಿ ಬಾಗಿಲು ಸ್ವಲ್ಪ ಸಮಯದವರೆಗೆ ತೆರೆದಿತ್ತು ಆ ಸಂದರ್ಭದಲ್ಲಿಯೇ ಇಲಿಗಳು ಒಳಗೆ ಪ್ರವೇಶಿಸಿರಬಹುದು ಎನ್ನಲಾಗಿದೆ. ಇಂತಹ ಭೀಕರ ಘಟನೆ ಮರುಕಳಿಸದಂತೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತಿದೆ. ಬಾಗಿಲುಗಳನ್ನು ಸರಿಪಡಿಸಲು ಶ್ರೀನಗರದಿಂದ ಬಡಗಿಗಳನ್ನು ಕರೆಸಲಾಗಿದೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲೂ ಇಂಥದ್ದೇ ಘಟನೆ ನಡೆದಿತ್ತು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಮಹಿಳೆಯ ದೇಹವನ್ನು ಇಲಿಗಳು ಕಚ್ಚಿ ತಿಂದಿರುವ ಘಟನೆ ಉತ್ತರ ಪ್ರದೇಶದ ಲಲಿತ್​ಪುರದಲ್ಲಿ ನಡೆದಿದೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಡಿಸೆಂಬರ್ 2 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಆಕೆಯ ದೇಹವನ್ನು ಅದೇ ದಿನ ರಾತ್ರಿ ಪೊಲೀಸರು ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ ಎಂದು ಜಿಲ್ಲೆಯ ಮುಖ್ಯ ವೈದ್ಯಕೀಯ ಅಧಿಕಾರಿ (CMO) ಡಾ. ಇಮ್ತಿಯಾಜ್ ಅಹ್ಮದ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?